ಜಿಲ್ಲೆಗಳು

ಮೈಸೂರು : 2ನೇ ಹಂತದ ಗಜಪಡೆಯ ಕುಶಾಲತೋಪು ತಾಲೀಮು ವಸ್ತು ಪ್ರದರ್ಶನ ಆವರಣಕ್ಕೆ ಸ್ಥಳಾಂತರ

ಮೈಸೂರು: ಅರಮನೆ ಹಾಗೂ ಕೋಟೆಗಳು ಪುರಾತನ ಕಟ್ಟಡಗಳಾಗಿರುವುದರಿಂದ ಕುಶಾಲತೋಪು ತಾಲೀಮಿನಿಂದ ಧಕ್ಕೆ ಆಗದಿರಲಿ ಎಂದು ಗಜಪಡೆಯ ಎರಡನೇ ಹಂತದ ಕುಶಾಲತೋಪು ತಾಲೀಮು ವಸ್ತು ಪ್ರದರ್ಶನ ಆವರಣಕ್ಕೆ ಸ್ಥಳಾಂತರಿಸಲಾಯಿತು. ವಿಶ್ವ ವಿಖ್ಯಾತ ನಾಡಹಬ್ಬ ದಸರಾದಲ್ಲಿ ಭಾಗವಹಿಸಲು ಆಗಮಿಸಿರುವ ಗಜಪಡೆಗೆ ಇಂದು ಎರಡನೇ ಕುಶಾಲತೋಪು ತಾಲೀಮನ್ನು ವಸ್ತು ಪ್ರದರ್ಶನ ಪಾರ್ಕಿಂಗ್ ಆವರಣದಲ್ಲಿ ನಡೆಸಲಾಯಿತು.
ಮೊದಲ ಬಾರಿಗೆ ಕುಶಾಲತೋಪು ತಾಲೀಮನ್ನು ಅರಮನೆ ಆವರಣದ ಪಕ್ಕದ ಕೋಟೆ ಮಾರಮ್ಮ ದೇವಾಲಯದ ಮುಂಭಾಗದಲ್ಲಿ ಆಯೋಜನೆ ಮಾಡಲಾಯಿತು. ಈ ಸಂದರ್ಭದಲ್ಲಿ ಮೂರು ಸುತ್ತಿನ 21 ಕುಶಾಲತೋಪುಗಳನ್ನು ಹಾರಿಸಲಾಗಿತ್ತು. ಆದರೇ, ಕುಶಾಲತೋಪಿನ ಶಬ್ಧಕ್ಕೆ ಪುರಾತನ ಅರಮನೆ ಕಟ್ಟಡಗಳಿಗೆ ಹಾನಿಯಾಗುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಅರಮನೆ ಆಡಳಿತ ಮಂಡಳಿಯ ಸೂಚನೆ ಮೇರೆಗೆ ಎರಡನೇ ತಾಲೀಮನ್ನು ವಸ್ತು ಪ್ರದರ್ಶನದ ಪಾರ್ಕಿಂಗ್ ಆವರಣಕ್ಕೆ ಸ್ಥಳಾಂತರಿಸಲಾಗಿದೆ ಎಂದು ಡಿಸಿಎಫ್ ಕರಿಕಾಲನ್ ಮಾಹಿತಿ ನೀಡಿದರು.

ಬೆದರಿದ ಆನೆ, ಕುದುರೆಗಳು: ಎರಡನೇ ಹಂತದ ಕುಶಾಲತೋಪು ತಾಲೀಮಿನಲ್ಲಿ 12 ಆನೆಗಳು ಭಾಗವಹಿಸಿದ್ದವು. ಅದರಲ್ಲಿ ಪಾರ್ಥಸಾರಥಿ ಸ್ವಲ್ಪ ಬೆದರಿದಂತೆ ಕಂಡು ಬಂತು. ಜೊತೆಗೆ ಉಳಿದ 11 ಆನೆಗಳು ಬೆದರದೇ ನಿಂತಿದ್ದವು. ಕುಶಾಲತೋಪು ಸಿಡಿಸುವ ಸಂದರ್ಭದಲ್ಲಿ ಕೆಲವು ಆನೆಗಳು ಶಬ್ದ ಮಾಡಿದವು. 7 ಫಿರಂಗಿ ಗಾಡಿಗಳಲ್ಲಿ 3 ಸುತ್ತಿನಲ್ಲಿ 21 ಕುಶಾಲತೋಪುಗಳನ್ನು ಸಿಡಿಸಲಾಗಿದ್ದು, ಇದರಲ್ಲಿ ನಗರ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಗಳು ಭಾಗವಹಿಸಿದ್ದರು.ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿಸಿಪಿ ಶಿವರಾಜ್ ಕುಶಾಲತೋಪು ತಾಲೀಮಿನ ನಂತರ ಮಾಧ್ಯಮಗಳ ಜೊತೆ ಮಾತನಾಡಿ, ಎರಡನೇ ತಾಲೀಮಿನಲ್ಲಿ 12 ಆನೆಗಳು ಹಾಗೂ 41 ಅಶ್ವಾರೋಹಿ ದಳದ ಕುದುರೆಗಳು ಭಾಗವಹಿಸಿದ್ದವು.

ಕುಶಾಲತೋಪು ಸಿಡಿಸಿದಾಗ ಸುಮಾರು ಸರಾಸರಿ 92.2 ಡೆಸಿಬಲ್ ಶಬ್ದ ಹೊರ ಹೊಮ್ಮಿದೆ. ಮೈಸೂರು ಅರಮನೆಯ ಆಡಳಿತ ಮಂಡಳಿಯ ಸೂಚನೆ ಮೇರೆಗೆ ಎರಡನೇ ಹಂತದ ತಾಲೀಮನ್ನು ವಸ್ತು ಪ್ರದರ್ಶನ ಆವರಣದಲ್ಲಿ ನಡೆಸಲಾಯಿತು. ಪ್ರತಿ ವರ್ಷದಂತೆ ಈ ಬಾರಿಯೂ ಜಂಬೂಸವಾರಿಯ ಮೆರವಣಿಗೆ ದಿನ 21 ಕುಶಾಲತೋಪುಗಳನ್ನು ಅರಮನೆಯ ಆವರಣದ ಪಕ್ಕದಲ್ಲಿರುವ ಕೋಟೆ ಮಾರಮ್ಮ ದೇವಾಲಯದ ಆವರಣದಲ್ಲಿ ಸಿಡಿಸಲಾಗುವುದು ಎಂದು ತಿಳಿಸಿದರು.

andolanait

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

11 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

12 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

12 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

12 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

13 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

22 hours ago