ಜಿಲ್ಲೆಗಳು

ಮೈಸೂರು : 2ನೇ ಹಂತದ ಗಜಪಡೆಯ ಕುಶಾಲತೋಪು ತಾಲೀಮು ವಸ್ತು ಪ್ರದರ್ಶನ ಆವರಣಕ್ಕೆ ಸ್ಥಳಾಂತರ

ಮೈಸೂರು: ಅರಮನೆ ಹಾಗೂ ಕೋಟೆಗಳು ಪುರಾತನ ಕಟ್ಟಡಗಳಾಗಿರುವುದರಿಂದ ಕುಶಾಲತೋಪು ತಾಲೀಮಿನಿಂದ ಧಕ್ಕೆ ಆಗದಿರಲಿ ಎಂದು ಗಜಪಡೆಯ ಎರಡನೇ ಹಂತದ ಕುಶಾಲತೋಪು ತಾಲೀಮು ವಸ್ತು ಪ್ರದರ್ಶನ ಆವರಣಕ್ಕೆ ಸ್ಥಳಾಂತರಿಸಲಾಯಿತು. ವಿಶ್ವ ವಿಖ್ಯಾತ ನಾಡಹಬ್ಬ ದಸರಾದಲ್ಲಿ ಭಾಗವಹಿಸಲು ಆಗಮಿಸಿರುವ ಗಜಪಡೆಗೆ ಇಂದು ಎರಡನೇ ಕುಶಾಲತೋಪು ತಾಲೀಮನ್ನು ವಸ್ತು ಪ್ರದರ್ಶನ ಪಾರ್ಕಿಂಗ್ ಆವರಣದಲ್ಲಿ ನಡೆಸಲಾಯಿತು.
ಮೊದಲ ಬಾರಿಗೆ ಕುಶಾಲತೋಪು ತಾಲೀಮನ್ನು ಅರಮನೆ ಆವರಣದ ಪಕ್ಕದ ಕೋಟೆ ಮಾರಮ್ಮ ದೇವಾಲಯದ ಮುಂಭಾಗದಲ್ಲಿ ಆಯೋಜನೆ ಮಾಡಲಾಯಿತು. ಈ ಸಂದರ್ಭದಲ್ಲಿ ಮೂರು ಸುತ್ತಿನ 21 ಕುಶಾಲತೋಪುಗಳನ್ನು ಹಾರಿಸಲಾಗಿತ್ತು. ಆದರೇ, ಕುಶಾಲತೋಪಿನ ಶಬ್ಧಕ್ಕೆ ಪುರಾತನ ಅರಮನೆ ಕಟ್ಟಡಗಳಿಗೆ ಹಾನಿಯಾಗುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಅರಮನೆ ಆಡಳಿತ ಮಂಡಳಿಯ ಸೂಚನೆ ಮೇರೆಗೆ ಎರಡನೇ ತಾಲೀಮನ್ನು ವಸ್ತು ಪ್ರದರ್ಶನದ ಪಾರ್ಕಿಂಗ್ ಆವರಣಕ್ಕೆ ಸ್ಥಳಾಂತರಿಸಲಾಗಿದೆ ಎಂದು ಡಿಸಿಎಫ್ ಕರಿಕಾಲನ್ ಮಾಹಿತಿ ನೀಡಿದರು.

ಬೆದರಿದ ಆನೆ, ಕುದುರೆಗಳು: ಎರಡನೇ ಹಂತದ ಕುಶಾಲತೋಪು ತಾಲೀಮಿನಲ್ಲಿ 12 ಆನೆಗಳು ಭಾಗವಹಿಸಿದ್ದವು. ಅದರಲ್ಲಿ ಪಾರ್ಥಸಾರಥಿ ಸ್ವಲ್ಪ ಬೆದರಿದಂತೆ ಕಂಡು ಬಂತು. ಜೊತೆಗೆ ಉಳಿದ 11 ಆನೆಗಳು ಬೆದರದೇ ನಿಂತಿದ್ದವು. ಕುಶಾಲತೋಪು ಸಿಡಿಸುವ ಸಂದರ್ಭದಲ್ಲಿ ಕೆಲವು ಆನೆಗಳು ಶಬ್ದ ಮಾಡಿದವು. 7 ಫಿರಂಗಿ ಗಾಡಿಗಳಲ್ಲಿ 3 ಸುತ್ತಿನಲ್ಲಿ 21 ಕುಶಾಲತೋಪುಗಳನ್ನು ಸಿಡಿಸಲಾಗಿದ್ದು, ಇದರಲ್ಲಿ ನಗರ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಗಳು ಭಾಗವಹಿಸಿದ್ದರು.ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿಸಿಪಿ ಶಿವರಾಜ್ ಕುಶಾಲತೋಪು ತಾಲೀಮಿನ ನಂತರ ಮಾಧ್ಯಮಗಳ ಜೊತೆ ಮಾತನಾಡಿ, ಎರಡನೇ ತಾಲೀಮಿನಲ್ಲಿ 12 ಆನೆಗಳು ಹಾಗೂ 41 ಅಶ್ವಾರೋಹಿ ದಳದ ಕುದುರೆಗಳು ಭಾಗವಹಿಸಿದ್ದವು.

ಕುಶಾಲತೋಪು ಸಿಡಿಸಿದಾಗ ಸುಮಾರು ಸರಾಸರಿ 92.2 ಡೆಸಿಬಲ್ ಶಬ್ದ ಹೊರ ಹೊಮ್ಮಿದೆ. ಮೈಸೂರು ಅರಮನೆಯ ಆಡಳಿತ ಮಂಡಳಿಯ ಸೂಚನೆ ಮೇರೆಗೆ ಎರಡನೇ ಹಂತದ ತಾಲೀಮನ್ನು ವಸ್ತು ಪ್ರದರ್ಶನ ಆವರಣದಲ್ಲಿ ನಡೆಸಲಾಯಿತು. ಪ್ರತಿ ವರ್ಷದಂತೆ ಈ ಬಾರಿಯೂ ಜಂಬೂಸವಾರಿಯ ಮೆರವಣಿಗೆ ದಿನ 21 ಕುಶಾಲತೋಪುಗಳನ್ನು ಅರಮನೆಯ ಆವರಣದ ಪಕ್ಕದಲ್ಲಿರುವ ಕೋಟೆ ಮಾರಮ್ಮ ದೇವಾಲಯದ ಆವರಣದಲ್ಲಿ ಸಿಡಿಸಲಾಗುವುದು ಎಂದು ತಿಳಿಸಿದರು.

andolanait

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

13 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

16 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

17 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

18 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

18 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

18 hours ago