ಜಿಲ್ಲೆಗಳು

ಆಸಿಡ್ ತಯಾರಿ ಕಟ್ಟಡದಲ್ಲಿ ಭಾರಿ ಬೆಂಕಿ

2 ಕಿ.ಮೀ.ವ್ಯಾಪ್ತಿಯಲ್ಲಿ ರಾಸಾಯನಿಕ ವಾಸನೆಯಿಂದ ಆತಂಕ

ಮೈಸೂರು : ಬಾತ್ ರೂಮ್ ಆಸಿಡ್ ತಯಾರು ಮಾಡುವ ಕಟ್ಟಡದಲ್ಲಿ ಬಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡಕ್ಕೆ ಭಾಗಶಃ ಹಾನಿಯಾಗಿದ್ದು, ಕಟ್ಟಡದಲ್ಲಿ ಇದ್ದ ರಸಾಯನಿಕಗಳು ಬೆಂಕಿಗೆ ಆಹುತಿಯಾಗಿವೆ. ಆದರೆ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ನಗರದ ಯಾದವಗಿರಿಯ ಮೇದರ್ ಬ್ಲಾಕ್‌ನಲ್ಲಿ ರೈಲ್ವೆ ಟ್ರ್ಯಾಕ್ ಎದುರು ನಾಗರಾಜ ಎಂಬವರಿಗೆ ಸೇರಿದ ಕಟ್ಟಡದಲ್ಲಿ ಬುಧವಾರ ಸಂಜೆ ೬ ಗಂಟೆ ಸಮಯದಲ್ಲಿ ಘಟನೆ ಸಂಭವಿಸಿದೆ. ಇಲ್ಲಿ ಬೆಂಕಿ ಹತ್ತಿಕೊಂಡ ಪರಿಣಾಮ ಹೊಗೆ ಮತ್ತು ವಾಸನೆ ಸುಮಾರು ೨ ರಿಂದ ೩ ಕಿ.ಮೀ.ನಗರದ ಸುತ್ತಲು ಒಂದುವರೆ ಗಂಟೆಗಳ ಕಾಲ ಸುತ್ತುವರಿದಿತ್ತು. ಇದರಿಂದ ಆತಂಕದ ವಾತಾವರಣ ಉಂಟಾಗಿತ್ತು.

ಈ ಕಟ್ಟಡವಿರುವ ಆವರಣವನ್ನು ನಾಗರಾಜು ಎಂಬವರು ನಾಲ್ವರಿಗೆ ಬಾಡಿಗೆ ನೀಡಿದ್ದು, ಈ ಜಾಗದಲ್ಲಿ ಒಂದು ಕಟ್ಟಡದಲ್ಲಿ ಆಸಿಡ್, ಥಿನ್ನರ್ ಮತ್ತು ಪೇಯಿಂಟ್ ಕೆಮಿಕಲ್‌ಗಳು ಇದ್ದರೆ. ಮತ್ತೊಂದು ಕಡೆ ರೂಲರ್ ಕೆಮಿಕಲ್, ಪೇಪರ್ ಸಂಬಂಧಿ ವಸ್ತುಗಳ ತಯಾರಿ ನಡೆಯುತ್ತದೆ. ಜೊತೆಗೆ ಪ್ಲಾಸ್ಟಿಕ್ ವೇಸ್ಟ್ ಹಾಕುವುದಕ್ಕೂ ಜಾಗ ಮಾಡಿಕೊಳ್ಳಲಾಗಿದ್ದು, ಬಾಡಿಗೆ ಪಡೆದಿರುವ ಇಮ್ರಾನ್ ಪಾಷ ಎಂಬವರು ಬಾತ್ ರೂಮ್ ಆಸಿಡ್ ತಯಾರಿಸುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇಲ್ಲಿ ಕೆಮಿಕಲ್‌ಗಳು ಇದ್ದ ಕಾರಣ ಕೆಲವೇ ನಿಮಿಷಗಳಲ್ಲಿ ಭಾರೀ ಪ್ರಮಾಣ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಕಟ್ಟಡದಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಅವರು ಹೊರೆಗೆ ಓಡಿ ಬಂದಿದ್ದಾರೆ. ತಕ್ಷಣ ಸ್ಥಳೀಯರು ಅಗ್ನಿಶಾಮಕ ಠಾಣಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಕಾರ್ಯಾಚರಣೆ : ಮುಖ್ಯ ಅಗ್ನಿಶಾಮಕ ಅಧಿಕಾರಿ ಪಿ.ಎಸ್.ಜಯರಾಮಯ್ಯ ಅವರ ನೇತೃತ್ವದಲ್ಲಿ ನಗರದ ಹೆಬ್ಬಾಳ, ಬನ್ನಿಮಂಟಪ, ಸರಸ್ವತಿಪುರಂ ಮೂರು ಅಗ್ನಿಶಾಮಕ ಠಾಣೆಗಳಿಂದ ೬೦ ಸಿಬ್ಬಂದಿ, ೬ ಅಗ್ನಿಶಾಮಕ ವಾಹನಗಳಲ್ಲಿ ಬಂದು ಸುಮಾರು ಒಂದೂವರೆ ಘಂಟೆಗಳ ಕಾಲ ಕಾರ್ಯಾಚರಣೆ ನಡೆಸಲಾಗಿದೆ. ಏಕಿವಿಯಸ್ ಫಿಲ್ಮಂ ಫಾರ್ಮಿಂಗ್ ಪೋಮ್ (ಎಎಫ್‌ಎಫ್‌ಎಫ್) ಎಂಬ ರಾಸಾಯನಿಕವನ್ನು ಬಳಸಿ ಬೆಂಕಿಯನ್ನು ಆರಿಸಲಾಗಿದೆ.


ಬೆಂಕಿ ಹೇಗೆ ಹತ್ತಿಕೊಂಡಿದೆ ಎಂಬುದನ್ನು ಈಗ ತಿಳಿದುಕೊಳ್ಳಬೇಕು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಟ್ಟಡಕ್ಕೆ ಮಾಲೀಕರಾಗಲಿ, ಇದನ್ನು ಬಾಡಿಗೆ ಪಡೆದವರಾಗಲಿ ಯಾರೂ ಬಂದು ಏನೂ ಹೇಳುತ್ತಿಲ್ಲ. ಒಳಗೆ ಏನೆಲ್ಲ ಇತ್ತು. ಎಷ್ಟು ನಷ್ಟವಾಗಿದೆ ಎಂಬ ಅಂದಾಜನ್ನು ಅವರಿಂದ ಮಾಹಿತಿ ಪಡೆದ ನಂತರವೇ ಹೇಳಬೇಕು.

ಪಿ.ಎಸ್.ಜಯರಾಮಯ್ಯ, ಅಗ್ನಿಶಾಮಕ ಅಧಿಕಾರಿ

andolanait

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

1 hour ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

1 hour ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

2 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

3 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago