ಜಿಲ್ಲೆಗಳು

ಆಸಿಡ್ ತಯಾರಿ ಕಟ್ಟಡದಲ್ಲಿ ಭಾರಿ ಬೆಂಕಿ

2 ಕಿ.ಮೀ.ವ್ಯಾಪ್ತಿಯಲ್ಲಿ ರಾಸಾಯನಿಕ ವಾಸನೆಯಿಂದ ಆತಂಕ

ಮೈಸೂರು : ಬಾತ್ ರೂಮ್ ಆಸಿಡ್ ತಯಾರು ಮಾಡುವ ಕಟ್ಟಡದಲ್ಲಿ ಬಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡಕ್ಕೆ ಭಾಗಶಃ ಹಾನಿಯಾಗಿದ್ದು, ಕಟ್ಟಡದಲ್ಲಿ ಇದ್ದ ರಸಾಯನಿಕಗಳು ಬೆಂಕಿಗೆ ಆಹುತಿಯಾಗಿವೆ. ಆದರೆ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ನಗರದ ಯಾದವಗಿರಿಯ ಮೇದರ್ ಬ್ಲಾಕ್‌ನಲ್ಲಿ ರೈಲ್ವೆ ಟ್ರ್ಯಾಕ್ ಎದುರು ನಾಗರಾಜ ಎಂಬವರಿಗೆ ಸೇರಿದ ಕಟ್ಟಡದಲ್ಲಿ ಬುಧವಾರ ಸಂಜೆ ೬ ಗಂಟೆ ಸಮಯದಲ್ಲಿ ಘಟನೆ ಸಂಭವಿಸಿದೆ. ಇಲ್ಲಿ ಬೆಂಕಿ ಹತ್ತಿಕೊಂಡ ಪರಿಣಾಮ ಹೊಗೆ ಮತ್ತು ವಾಸನೆ ಸುಮಾರು ೨ ರಿಂದ ೩ ಕಿ.ಮೀ.ನಗರದ ಸುತ್ತಲು ಒಂದುವರೆ ಗಂಟೆಗಳ ಕಾಲ ಸುತ್ತುವರಿದಿತ್ತು. ಇದರಿಂದ ಆತಂಕದ ವಾತಾವರಣ ಉಂಟಾಗಿತ್ತು.

ಈ ಕಟ್ಟಡವಿರುವ ಆವರಣವನ್ನು ನಾಗರಾಜು ಎಂಬವರು ನಾಲ್ವರಿಗೆ ಬಾಡಿಗೆ ನೀಡಿದ್ದು, ಈ ಜಾಗದಲ್ಲಿ ಒಂದು ಕಟ್ಟಡದಲ್ಲಿ ಆಸಿಡ್, ಥಿನ್ನರ್ ಮತ್ತು ಪೇಯಿಂಟ್ ಕೆಮಿಕಲ್‌ಗಳು ಇದ್ದರೆ. ಮತ್ತೊಂದು ಕಡೆ ರೂಲರ್ ಕೆಮಿಕಲ್, ಪೇಪರ್ ಸಂಬಂಧಿ ವಸ್ತುಗಳ ತಯಾರಿ ನಡೆಯುತ್ತದೆ. ಜೊತೆಗೆ ಪ್ಲಾಸ್ಟಿಕ್ ವೇಸ್ಟ್ ಹಾಕುವುದಕ್ಕೂ ಜಾಗ ಮಾಡಿಕೊಳ್ಳಲಾಗಿದ್ದು, ಬಾಡಿಗೆ ಪಡೆದಿರುವ ಇಮ್ರಾನ್ ಪಾಷ ಎಂಬವರು ಬಾತ್ ರೂಮ್ ಆಸಿಡ್ ತಯಾರಿಸುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇಲ್ಲಿ ಕೆಮಿಕಲ್‌ಗಳು ಇದ್ದ ಕಾರಣ ಕೆಲವೇ ನಿಮಿಷಗಳಲ್ಲಿ ಭಾರೀ ಪ್ರಮಾಣ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಕಟ್ಟಡದಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಅವರು ಹೊರೆಗೆ ಓಡಿ ಬಂದಿದ್ದಾರೆ. ತಕ್ಷಣ ಸ್ಥಳೀಯರು ಅಗ್ನಿಶಾಮಕ ಠಾಣಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಕಾರ್ಯಾಚರಣೆ : ಮುಖ್ಯ ಅಗ್ನಿಶಾಮಕ ಅಧಿಕಾರಿ ಪಿ.ಎಸ್.ಜಯರಾಮಯ್ಯ ಅವರ ನೇತೃತ್ವದಲ್ಲಿ ನಗರದ ಹೆಬ್ಬಾಳ, ಬನ್ನಿಮಂಟಪ, ಸರಸ್ವತಿಪುರಂ ಮೂರು ಅಗ್ನಿಶಾಮಕ ಠಾಣೆಗಳಿಂದ ೬೦ ಸಿಬ್ಬಂದಿ, ೬ ಅಗ್ನಿಶಾಮಕ ವಾಹನಗಳಲ್ಲಿ ಬಂದು ಸುಮಾರು ಒಂದೂವರೆ ಘಂಟೆಗಳ ಕಾಲ ಕಾರ್ಯಾಚರಣೆ ನಡೆಸಲಾಗಿದೆ. ಏಕಿವಿಯಸ್ ಫಿಲ್ಮಂ ಫಾರ್ಮಿಂಗ್ ಪೋಮ್ (ಎಎಫ್‌ಎಫ್‌ಎಫ್) ಎಂಬ ರಾಸಾಯನಿಕವನ್ನು ಬಳಸಿ ಬೆಂಕಿಯನ್ನು ಆರಿಸಲಾಗಿದೆ.


ಬೆಂಕಿ ಹೇಗೆ ಹತ್ತಿಕೊಂಡಿದೆ ಎಂಬುದನ್ನು ಈಗ ತಿಳಿದುಕೊಳ್ಳಬೇಕು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಟ್ಟಡಕ್ಕೆ ಮಾಲೀಕರಾಗಲಿ, ಇದನ್ನು ಬಾಡಿಗೆ ಪಡೆದವರಾಗಲಿ ಯಾರೂ ಬಂದು ಏನೂ ಹೇಳುತ್ತಿಲ್ಲ. ಒಳಗೆ ಏನೆಲ್ಲ ಇತ್ತು. ಎಷ್ಟು ನಷ್ಟವಾಗಿದೆ ಎಂಬ ಅಂದಾಜನ್ನು ಅವರಿಂದ ಮಾಹಿತಿ ಪಡೆದ ನಂತರವೇ ಹೇಳಬೇಕು.

ಪಿ.ಎಸ್.ಜಯರಾಮಯ್ಯ, ಅಗ್ನಿಶಾಮಕ ಅಧಿಕಾರಿ

andolanait

Recent Posts

ಬಂಡೀಪುರ ಅರಣ್ಯದಲ್ಲಿ ನೀರಿನ ಸಮಸ್ಯೆಗೆ ಬ್ರೇಕ್: ಸೋಲಾರ್‌ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು ಪ್ಲಾನ್‌

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್‌ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…

6 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

30 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

50 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

1 hour ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

1 hour ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

5 hours ago