ಜಿಲ್ಲೆಗಳು

ಆಸಿಡ್ ತಯಾರಿ ಕಟ್ಟಡದಲ್ಲಿ ಭಾರಿ ಬೆಂಕಿ

2 ಕಿ.ಮೀ.ವ್ಯಾಪ್ತಿಯಲ್ಲಿ ರಾಸಾಯನಿಕ ವಾಸನೆಯಿಂದ ಆತಂಕ

ಮೈಸೂರು : ಬಾತ್ ರೂಮ್ ಆಸಿಡ್ ತಯಾರು ಮಾಡುವ ಕಟ್ಟಡದಲ್ಲಿ ಬಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡಕ್ಕೆ ಭಾಗಶಃ ಹಾನಿಯಾಗಿದ್ದು, ಕಟ್ಟಡದಲ್ಲಿ ಇದ್ದ ರಸಾಯನಿಕಗಳು ಬೆಂಕಿಗೆ ಆಹುತಿಯಾಗಿವೆ. ಆದರೆ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ನಗರದ ಯಾದವಗಿರಿಯ ಮೇದರ್ ಬ್ಲಾಕ್‌ನಲ್ಲಿ ರೈಲ್ವೆ ಟ್ರ್ಯಾಕ್ ಎದುರು ನಾಗರಾಜ ಎಂಬವರಿಗೆ ಸೇರಿದ ಕಟ್ಟಡದಲ್ಲಿ ಬುಧವಾರ ಸಂಜೆ ೬ ಗಂಟೆ ಸಮಯದಲ್ಲಿ ಘಟನೆ ಸಂಭವಿಸಿದೆ. ಇಲ್ಲಿ ಬೆಂಕಿ ಹತ್ತಿಕೊಂಡ ಪರಿಣಾಮ ಹೊಗೆ ಮತ್ತು ವಾಸನೆ ಸುಮಾರು ೨ ರಿಂದ ೩ ಕಿ.ಮೀ.ನಗರದ ಸುತ್ತಲು ಒಂದುವರೆ ಗಂಟೆಗಳ ಕಾಲ ಸುತ್ತುವರಿದಿತ್ತು. ಇದರಿಂದ ಆತಂಕದ ವಾತಾವರಣ ಉಂಟಾಗಿತ್ತು.

ಈ ಕಟ್ಟಡವಿರುವ ಆವರಣವನ್ನು ನಾಗರಾಜು ಎಂಬವರು ನಾಲ್ವರಿಗೆ ಬಾಡಿಗೆ ನೀಡಿದ್ದು, ಈ ಜಾಗದಲ್ಲಿ ಒಂದು ಕಟ್ಟಡದಲ್ಲಿ ಆಸಿಡ್, ಥಿನ್ನರ್ ಮತ್ತು ಪೇಯಿಂಟ್ ಕೆಮಿಕಲ್‌ಗಳು ಇದ್ದರೆ. ಮತ್ತೊಂದು ಕಡೆ ರೂಲರ್ ಕೆಮಿಕಲ್, ಪೇಪರ್ ಸಂಬಂಧಿ ವಸ್ತುಗಳ ತಯಾರಿ ನಡೆಯುತ್ತದೆ. ಜೊತೆಗೆ ಪ್ಲಾಸ್ಟಿಕ್ ವೇಸ್ಟ್ ಹಾಕುವುದಕ್ಕೂ ಜಾಗ ಮಾಡಿಕೊಳ್ಳಲಾಗಿದ್ದು, ಬಾಡಿಗೆ ಪಡೆದಿರುವ ಇಮ್ರಾನ್ ಪಾಷ ಎಂಬವರು ಬಾತ್ ರೂಮ್ ಆಸಿಡ್ ತಯಾರಿಸುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇಲ್ಲಿ ಕೆಮಿಕಲ್‌ಗಳು ಇದ್ದ ಕಾರಣ ಕೆಲವೇ ನಿಮಿಷಗಳಲ್ಲಿ ಭಾರೀ ಪ್ರಮಾಣ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಕಟ್ಟಡದಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಅವರು ಹೊರೆಗೆ ಓಡಿ ಬಂದಿದ್ದಾರೆ. ತಕ್ಷಣ ಸ್ಥಳೀಯರು ಅಗ್ನಿಶಾಮಕ ಠಾಣಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಕಾರ್ಯಾಚರಣೆ : ಮುಖ್ಯ ಅಗ್ನಿಶಾಮಕ ಅಧಿಕಾರಿ ಪಿ.ಎಸ್.ಜಯರಾಮಯ್ಯ ಅವರ ನೇತೃತ್ವದಲ್ಲಿ ನಗರದ ಹೆಬ್ಬಾಳ, ಬನ್ನಿಮಂಟಪ, ಸರಸ್ವತಿಪುರಂ ಮೂರು ಅಗ್ನಿಶಾಮಕ ಠಾಣೆಗಳಿಂದ ೬೦ ಸಿಬ್ಬಂದಿ, ೬ ಅಗ್ನಿಶಾಮಕ ವಾಹನಗಳಲ್ಲಿ ಬಂದು ಸುಮಾರು ಒಂದೂವರೆ ಘಂಟೆಗಳ ಕಾಲ ಕಾರ್ಯಾಚರಣೆ ನಡೆಸಲಾಗಿದೆ. ಏಕಿವಿಯಸ್ ಫಿಲ್ಮಂ ಫಾರ್ಮಿಂಗ್ ಪೋಮ್ (ಎಎಫ್‌ಎಫ್‌ಎಫ್) ಎಂಬ ರಾಸಾಯನಿಕವನ್ನು ಬಳಸಿ ಬೆಂಕಿಯನ್ನು ಆರಿಸಲಾಗಿದೆ.


ಬೆಂಕಿ ಹೇಗೆ ಹತ್ತಿಕೊಂಡಿದೆ ಎಂಬುದನ್ನು ಈಗ ತಿಳಿದುಕೊಳ್ಳಬೇಕು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಟ್ಟಡಕ್ಕೆ ಮಾಲೀಕರಾಗಲಿ, ಇದನ್ನು ಬಾಡಿಗೆ ಪಡೆದವರಾಗಲಿ ಯಾರೂ ಬಂದು ಏನೂ ಹೇಳುತ್ತಿಲ್ಲ. ಒಳಗೆ ಏನೆಲ್ಲ ಇತ್ತು. ಎಷ್ಟು ನಷ್ಟವಾಗಿದೆ ಎಂಬ ಅಂದಾಜನ್ನು ಅವರಿಂದ ಮಾಹಿತಿ ಪಡೆದ ನಂತರವೇ ಹೇಳಬೇಕು.

ಪಿ.ಎಸ್.ಜಯರಾಮಯ್ಯ, ಅಗ್ನಿಶಾಮಕ ಅಧಿಕಾರಿ

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

9 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

37 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago