ಜಿಲ್ಲೆಗಳು

ಆಸಿಡ್ ತಯಾರಿ ಕಟ್ಟಡದಲ್ಲಿ ಭಾರಿ ಬೆಂಕಿ

2 ಕಿ.ಮೀ.ವ್ಯಾಪ್ತಿಯಲ್ಲಿ ರಾಸಾಯನಿಕ ವಾಸನೆಯಿಂದ ಆತಂಕ

ಮೈಸೂರು : ಬಾತ್ ರೂಮ್ ಆಸಿಡ್ ತಯಾರು ಮಾಡುವ ಕಟ್ಟಡದಲ್ಲಿ ಬಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡಕ್ಕೆ ಭಾಗಶಃ ಹಾನಿಯಾಗಿದ್ದು, ಕಟ್ಟಡದಲ್ಲಿ ಇದ್ದ ರಸಾಯನಿಕಗಳು ಬೆಂಕಿಗೆ ಆಹುತಿಯಾಗಿವೆ. ಆದರೆ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ನಗರದ ಯಾದವಗಿರಿಯ ಮೇದರ್ ಬ್ಲಾಕ್‌ನಲ್ಲಿ ರೈಲ್ವೆ ಟ್ರ್ಯಾಕ್ ಎದುರು ನಾಗರಾಜ ಎಂಬವರಿಗೆ ಸೇರಿದ ಕಟ್ಟಡದಲ್ಲಿ ಬುಧವಾರ ಸಂಜೆ ೬ ಗಂಟೆ ಸಮಯದಲ್ಲಿ ಘಟನೆ ಸಂಭವಿಸಿದೆ. ಇಲ್ಲಿ ಬೆಂಕಿ ಹತ್ತಿಕೊಂಡ ಪರಿಣಾಮ ಹೊಗೆ ಮತ್ತು ವಾಸನೆ ಸುಮಾರು ೨ ರಿಂದ ೩ ಕಿ.ಮೀ.ನಗರದ ಸುತ್ತಲು ಒಂದುವರೆ ಗಂಟೆಗಳ ಕಾಲ ಸುತ್ತುವರಿದಿತ್ತು. ಇದರಿಂದ ಆತಂಕದ ವಾತಾವರಣ ಉಂಟಾಗಿತ್ತು.

ಈ ಕಟ್ಟಡವಿರುವ ಆವರಣವನ್ನು ನಾಗರಾಜು ಎಂಬವರು ನಾಲ್ವರಿಗೆ ಬಾಡಿಗೆ ನೀಡಿದ್ದು, ಈ ಜಾಗದಲ್ಲಿ ಒಂದು ಕಟ್ಟಡದಲ್ಲಿ ಆಸಿಡ್, ಥಿನ್ನರ್ ಮತ್ತು ಪೇಯಿಂಟ್ ಕೆಮಿಕಲ್‌ಗಳು ಇದ್ದರೆ. ಮತ್ತೊಂದು ಕಡೆ ರೂಲರ್ ಕೆಮಿಕಲ್, ಪೇಪರ್ ಸಂಬಂಧಿ ವಸ್ತುಗಳ ತಯಾರಿ ನಡೆಯುತ್ತದೆ. ಜೊತೆಗೆ ಪ್ಲಾಸ್ಟಿಕ್ ವೇಸ್ಟ್ ಹಾಕುವುದಕ್ಕೂ ಜಾಗ ಮಾಡಿಕೊಳ್ಳಲಾಗಿದ್ದು, ಬಾಡಿಗೆ ಪಡೆದಿರುವ ಇಮ್ರಾನ್ ಪಾಷ ಎಂಬವರು ಬಾತ್ ರೂಮ್ ಆಸಿಡ್ ತಯಾರಿಸುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇಲ್ಲಿ ಕೆಮಿಕಲ್‌ಗಳು ಇದ್ದ ಕಾರಣ ಕೆಲವೇ ನಿಮಿಷಗಳಲ್ಲಿ ಭಾರೀ ಪ್ರಮಾಣ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಕಟ್ಟಡದಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಅವರು ಹೊರೆಗೆ ಓಡಿ ಬಂದಿದ್ದಾರೆ. ತಕ್ಷಣ ಸ್ಥಳೀಯರು ಅಗ್ನಿಶಾಮಕ ಠಾಣಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಕಾರ್ಯಾಚರಣೆ : ಮುಖ್ಯ ಅಗ್ನಿಶಾಮಕ ಅಧಿಕಾರಿ ಪಿ.ಎಸ್.ಜಯರಾಮಯ್ಯ ಅವರ ನೇತೃತ್ವದಲ್ಲಿ ನಗರದ ಹೆಬ್ಬಾಳ, ಬನ್ನಿಮಂಟಪ, ಸರಸ್ವತಿಪುರಂ ಮೂರು ಅಗ್ನಿಶಾಮಕ ಠಾಣೆಗಳಿಂದ ೬೦ ಸಿಬ್ಬಂದಿ, ೬ ಅಗ್ನಿಶಾಮಕ ವಾಹನಗಳಲ್ಲಿ ಬಂದು ಸುಮಾರು ಒಂದೂವರೆ ಘಂಟೆಗಳ ಕಾಲ ಕಾರ್ಯಾಚರಣೆ ನಡೆಸಲಾಗಿದೆ. ಏಕಿವಿಯಸ್ ಫಿಲ್ಮಂ ಫಾರ್ಮಿಂಗ್ ಪೋಮ್ (ಎಎಫ್‌ಎಫ್‌ಎಫ್) ಎಂಬ ರಾಸಾಯನಿಕವನ್ನು ಬಳಸಿ ಬೆಂಕಿಯನ್ನು ಆರಿಸಲಾಗಿದೆ.


ಬೆಂಕಿ ಹೇಗೆ ಹತ್ತಿಕೊಂಡಿದೆ ಎಂಬುದನ್ನು ಈಗ ತಿಳಿದುಕೊಳ್ಳಬೇಕು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಟ್ಟಡಕ್ಕೆ ಮಾಲೀಕರಾಗಲಿ, ಇದನ್ನು ಬಾಡಿಗೆ ಪಡೆದವರಾಗಲಿ ಯಾರೂ ಬಂದು ಏನೂ ಹೇಳುತ್ತಿಲ್ಲ. ಒಳಗೆ ಏನೆಲ್ಲ ಇತ್ತು. ಎಷ್ಟು ನಷ್ಟವಾಗಿದೆ ಎಂಬ ಅಂದಾಜನ್ನು ಅವರಿಂದ ಮಾಹಿತಿ ಪಡೆದ ನಂತರವೇ ಹೇಳಬೇಕು.

ಪಿ.ಎಸ್.ಜಯರಾಮಯ್ಯ, ಅಗ್ನಿಶಾಮಕ ಅಧಿಕಾರಿ

andolanait

Recent Posts

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

7 hours ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

7 hours ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

8 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

9 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

9 hours ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

11 hours ago