2 ಕಿ.ಮೀ.ವ್ಯಾಪ್ತಿಯಲ್ಲಿ ರಾಸಾಯನಿಕ ವಾಸನೆಯಿಂದ ಆತಂಕ
ಮೈಸೂರು : ಬಾತ್ ರೂಮ್ ಆಸಿಡ್ ತಯಾರು ಮಾಡುವ ಕಟ್ಟಡದಲ್ಲಿ ಬಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡಕ್ಕೆ ಭಾಗಶಃ ಹಾನಿಯಾಗಿದ್ದು, ಕಟ್ಟಡದಲ್ಲಿ ಇದ್ದ ರಸಾಯನಿಕಗಳು ಬೆಂಕಿಗೆ ಆಹುತಿಯಾಗಿವೆ. ಆದರೆ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ನಗರದ ಯಾದವಗಿರಿಯ ಮೇದರ್ ಬ್ಲಾಕ್ನಲ್ಲಿ ರೈಲ್ವೆ ಟ್ರ್ಯಾಕ್ ಎದುರು ನಾಗರಾಜ ಎಂಬವರಿಗೆ ಸೇರಿದ ಕಟ್ಟಡದಲ್ಲಿ ಬುಧವಾರ ಸಂಜೆ ೬ ಗಂಟೆ ಸಮಯದಲ್ಲಿ ಘಟನೆ ಸಂಭವಿಸಿದೆ. ಇಲ್ಲಿ ಬೆಂಕಿ ಹತ್ತಿಕೊಂಡ ಪರಿಣಾಮ ಹೊಗೆ ಮತ್ತು ವಾಸನೆ ಸುಮಾರು ೨ ರಿಂದ ೩ ಕಿ.ಮೀ.ನಗರದ ಸುತ್ತಲು ಒಂದುವರೆ ಗಂಟೆಗಳ ಕಾಲ ಸುತ್ತುವರಿದಿತ್ತು. ಇದರಿಂದ ಆತಂಕದ ವಾತಾವರಣ ಉಂಟಾಗಿತ್ತು.
ಈ ಕಟ್ಟಡವಿರುವ ಆವರಣವನ್ನು ನಾಗರಾಜು ಎಂಬವರು ನಾಲ್ವರಿಗೆ ಬಾಡಿಗೆ ನೀಡಿದ್ದು, ಈ ಜಾಗದಲ್ಲಿ ಒಂದು ಕಟ್ಟಡದಲ್ಲಿ ಆಸಿಡ್, ಥಿನ್ನರ್ ಮತ್ತು ಪೇಯಿಂಟ್ ಕೆಮಿಕಲ್ಗಳು ಇದ್ದರೆ. ಮತ್ತೊಂದು ಕಡೆ ರೂಲರ್ ಕೆಮಿಕಲ್, ಪೇಪರ್ ಸಂಬಂಧಿ ವಸ್ತುಗಳ ತಯಾರಿ ನಡೆಯುತ್ತದೆ. ಜೊತೆಗೆ ಪ್ಲಾಸ್ಟಿಕ್ ವೇಸ್ಟ್ ಹಾಕುವುದಕ್ಕೂ ಜಾಗ ಮಾಡಿಕೊಳ್ಳಲಾಗಿದ್ದು, ಬಾಡಿಗೆ ಪಡೆದಿರುವ ಇಮ್ರಾನ್ ಪಾಷ ಎಂಬವರು ಬಾತ್ ರೂಮ್ ಆಸಿಡ್ ತಯಾರಿಸುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇಲ್ಲಿ ಕೆಮಿಕಲ್ಗಳು ಇದ್ದ ಕಾರಣ ಕೆಲವೇ ನಿಮಿಷಗಳಲ್ಲಿ ಭಾರೀ ಪ್ರಮಾಣ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಕಟ್ಟಡದಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಅವರು ಹೊರೆಗೆ ಓಡಿ ಬಂದಿದ್ದಾರೆ. ತಕ್ಷಣ ಸ್ಥಳೀಯರು ಅಗ್ನಿಶಾಮಕ ಠಾಣಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ಕಾರ್ಯಾಚರಣೆ : ಮುಖ್ಯ ಅಗ್ನಿಶಾಮಕ ಅಧಿಕಾರಿ ಪಿ.ಎಸ್.ಜಯರಾಮಯ್ಯ ಅವರ ನೇತೃತ್ವದಲ್ಲಿ ನಗರದ ಹೆಬ್ಬಾಳ, ಬನ್ನಿಮಂಟಪ, ಸರಸ್ವತಿಪುರಂ ಮೂರು ಅಗ್ನಿಶಾಮಕ ಠಾಣೆಗಳಿಂದ ೬೦ ಸಿಬ್ಬಂದಿ, ೬ ಅಗ್ನಿಶಾಮಕ ವಾಹನಗಳಲ್ಲಿ ಬಂದು ಸುಮಾರು ಒಂದೂವರೆ ಘಂಟೆಗಳ ಕಾಲ ಕಾರ್ಯಾಚರಣೆ ನಡೆಸಲಾಗಿದೆ. ಏಕಿವಿಯಸ್ ಫಿಲ್ಮಂ ಫಾರ್ಮಿಂಗ್ ಪೋಮ್ (ಎಎಫ್ಎಫ್ಎಫ್) ಎಂಬ ರಾಸಾಯನಿಕವನ್ನು ಬಳಸಿ ಬೆಂಕಿಯನ್ನು ಆರಿಸಲಾಗಿದೆ.
ಬೆಂಕಿ ಹೇಗೆ ಹತ್ತಿಕೊಂಡಿದೆ ಎಂಬುದನ್ನು ಈಗ ತಿಳಿದುಕೊಳ್ಳಬೇಕು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಟ್ಟಡಕ್ಕೆ ಮಾಲೀಕರಾಗಲಿ, ಇದನ್ನು ಬಾಡಿಗೆ ಪಡೆದವರಾಗಲಿ ಯಾರೂ ಬಂದು ಏನೂ ಹೇಳುತ್ತಿಲ್ಲ. ಒಳಗೆ ಏನೆಲ್ಲ ಇತ್ತು. ಎಷ್ಟು ನಷ್ಟವಾಗಿದೆ ಎಂಬ ಅಂದಾಜನ್ನು ಅವರಿಂದ ಮಾಹಿತಿ ಪಡೆದ ನಂತರವೇ ಹೇಳಬೇಕು.
–ಪಿ.ಎಸ್.ಜಯರಾಮಯ್ಯ, ಅಗ್ನಿಶಾಮಕ ಅಧಿಕಾರಿ
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…