ಜಿಲ್ಲೆಗಳು

ಆಸಿಡ್ ತಯಾರಿ ಕಟ್ಟಡದಲ್ಲಿ ಭಾರಿ ಬೆಂಕಿ

2 ಕಿ.ಮೀ.ವ್ಯಾಪ್ತಿಯಲ್ಲಿ ರಾಸಾಯನಿಕ ವಾಸನೆಯಿಂದ ಆತಂಕ

ಮೈಸೂರು : ಬಾತ್ ರೂಮ್ ಆಸಿಡ್ ತಯಾರು ಮಾಡುವ ಕಟ್ಟಡದಲ್ಲಿ ಬಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡಕ್ಕೆ ಭಾಗಶಃ ಹಾನಿಯಾಗಿದ್ದು, ಕಟ್ಟಡದಲ್ಲಿ ಇದ್ದ ರಸಾಯನಿಕಗಳು ಬೆಂಕಿಗೆ ಆಹುತಿಯಾಗಿವೆ. ಆದರೆ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ನಗರದ ಯಾದವಗಿರಿಯ ಮೇದರ್ ಬ್ಲಾಕ್‌ನಲ್ಲಿ ರೈಲ್ವೆ ಟ್ರ್ಯಾಕ್ ಎದುರು ನಾಗರಾಜ ಎಂಬವರಿಗೆ ಸೇರಿದ ಕಟ್ಟಡದಲ್ಲಿ ಬುಧವಾರ ಸಂಜೆ ೬ ಗಂಟೆ ಸಮಯದಲ್ಲಿ ಘಟನೆ ಸಂಭವಿಸಿದೆ. ಇಲ್ಲಿ ಬೆಂಕಿ ಹತ್ತಿಕೊಂಡ ಪರಿಣಾಮ ಹೊಗೆ ಮತ್ತು ವಾಸನೆ ಸುಮಾರು ೨ ರಿಂದ ೩ ಕಿ.ಮೀ.ನಗರದ ಸುತ್ತಲು ಒಂದುವರೆ ಗಂಟೆಗಳ ಕಾಲ ಸುತ್ತುವರಿದಿತ್ತು. ಇದರಿಂದ ಆತಂಕದ ವಾತಾವರಣ ಉಂಟಾಗಿತ್ತು.

ಈ ಕಟ್ಟಡವಿರುವ ಆವರಣವನ್ನು ನಾಗರಾಜು ಎಂಬವರು ನಾಲ್ವರಿಗೆ ಬಾಡಿಗೆ ನೀಡಿದ್ದು, ಈ ಜಾಗದಲ್ಲಿ ಒಂದು ಕಟ್ಟಡದಲ್ಲಿ ಆಸಿಡ್, ಥಿನ್ನರ್ ಮತ್ತು ಪೇಯಿಂಟ್ ಕೆಮಿಕಲ್‌ಗಳು ಇದ್ದರೆ. ಮತ್ತೊಂದು ಕಡೆ ರೂಲರ್ ಕೆಮಿಕಲ್, ಪೇಪರ್ ಸಂಬಂಧಿ ವಸ್ತುಗಳ ತಯಾರಿ ನಡೆಯುತ್ತದೆ. ಜೊತೆಗೆ ಪ್ಲಾಸ್ಟಿಕ್ ವೇಸ್ಟ್ ಹಾಕುವುದಕ್ಕೂ ಜಾಗ ಮಾಡಿಕೊಳ್ಳಲಾಗಿದ್ದು, ಬಾಡಿಗೆ ಪಡೆದಿರುವ ಇಮ್ರಾನ್ ಪಾಷ ಎಂಬವರು ಬಾತ್ ರೂಮ್ ಆಸಿಡ್ ತಯಾರಿಸುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇಲ್ಲಿ ಕೆಮಿಕಲ್‌ಗಳು ಇದ್ದ ಕಾರಣ ಕೆಲವೇ ನಿಮಿಷಗಳಲ್ಲಿ ಭಾರೀ ಪ್ರಮಾಣ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಕಟ್ಟಡದಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಅವರು ಹೊರೆಗೆ ಓಡಿ ಬಂದಿದ್ದಾರೆ. ತಕ್ಷಣ ಸ್ಥಳೀಯರು ಅಗ್ನಿಶಾಮಕ ಠಾಣಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಕಾರ್ಯಾಚರಣೆ : ಮುಖ್ಯ ಅಗ್ನಿಶಾಮಕ ಅಧಿಕಾರಿ ಪಿ.ಎಸ್.ಜಯರಾಮಯ್ಯ ಅವರ ನೇತೃತ್ವದಲ್ಲಿ ನಗರದ ಹೆಬ್ಬಾಳ, ಬನ್ನಿಮಂಟಪ, ಸರಸ್ವತಿಪುರಂ ಮೂರು ಅಗ್ನಿಶಾಮಕ ಠಾಣೆಗಳಿಂದ ೬೦ ಸಿಬ್ಬಂದಿ, ೬ ಅಗ್ನಿಶಾಮಕ ವಾಹನಗಳಲ್ಲಿ ಬಂದು ಸುಮಾರು ಒಂದೂವರೆ ಘಂಟೆಗಳ ಕಾಲ ಕಾರ್ಯಾಚರಣೆ ನಡೆಸಲಾಗಿದೆ. ಏಕಿವಿಯಸ್ ಫಿಲ್ಮಂ ಫಾರ್ಮಿಂಗ್ ಪೋಮ್ (ಎಎಫ್‌ಎಫ್‌ಎಫ್) ಎಂಬ ರಾಸಾಯನಿಕವನ್ನು ಬಳಸಿ ಬೆಂಕಿಯನ್ನು ಆರಿಸಲಾಗಿದೆ.


ಬೆಂಕಿ ಹೇಗೆ ಹತ್ತಿಕೊಂಡಿದೆ ಎಂಬುದನ್ನು ಈಗ ತಿಳಿದುಕೊಳ್ಳಬೇಕು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಟ್ಟಡಕ್ಕೆ ಮಾಲೀಕರಾಗಲಿ, ಇದನ್ನು ಬಾಡಿಗೆ ಪಡೆದವರಾಗಲಿ ಯಾರೂ ಬಂದು ಏನೂ ಹೇಳುತ್ತಿಲ್ಲ. ಒಳಗೆ ಏನೆಲ್ಲ ಇತ್ತು. ಎಷ್ಟು ನಷ್ಟವಾಗಿದೆ ಎಂಬ ಅಂದಾಜನ್ನು ಅವರಿಂದ ಮಾಹಿತಿ ಪಡೆದ ನಂತರವೇ ಹೇಳಬೇಕು.

ಪಿ.ಎಸ್.ಜಯರಾಮಯ್ಯ, ಅಗ್ನಿಶಾಮಕ ಅಧಿಕಾರಿ

andolanait

Recent Posts

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

2 hours ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

4 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

4 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

4 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

8 hours ago

ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ನಿಧನ

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…

10 hours ago