ಜಿಲ್ಲೆಗಳು

ಮೈಸೂರಿಂದ ಅಹಮದಾಬಾದ್‌ಗೆ ತೆರಳಿದ ಮೋದಿ ಸಹೋದರ ಪ್ರಹ್ಲಾದ

ಮೈಸೂರು: ಕಾರು ಅಪಘಾತದಿಂದ ಗಾಯಗೊಂಡು ನಗರದ ಜೆಎಸ್‌ಎಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡ ಪ್ರಹ್ಲಾದ ಮೋದಿ ಹಾಗೂ ಕುಟುಂಬದ ಸದಸ್ಯರು ಬುಧವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆಗೊಂಡು, ಅಹಮದಾಬಾದ್‌ಗೆ ಪ್ರಯಾಣ ಬೆಳೆಸಿದರು.

ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್‌ ಆರೋಗ್ಯದ ಏರುಪೇರಿನಿಂದ ಆಸ್ಪತ್ರೆಗೆ ದಾಖಲಾದ ಕಾರಣ ಅವರನ್ನು ನೋಡಲು, ಇಲ್ಲಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿಶೇಷ ವಿಮಾನದ ಮೂಲಕ ಕಿರಿಯ ಸಹೋದರ ಪ್ರಹ್ಲಾದ್ ಕುಟಂಬವು ತೆರಳಿತು.

ಅದಕ್ಕೂ ಮೊದಲು ತಾಯಿ ಹೀರಾಬೆನ್‌ ಗುಣಮುಖರಾಗಲೆಂದು ಪ್ರಹ್ಲಾದ ಮೋದಿ ಅವರ ಮಗಳು ಹಾಗೂ ಅಳಿಯ ‌ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ತಾಲ್ಲೂಕಿನ ಕಡಕೊಳ ಬಳಿ ಮಂಗಳವಾರ ಪ್ರಹ್ಲಾದ ಮೋದಿ ಅವರು ಪ್ರಯಾಣಿಸುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಐವರು ಗಾಯಗೊಂಡಿದ್ದರು.

 

andolanait

Recent Posts

ಗಂಗಾ ಕಲ್ಯಾಣ ಪೋರ್ಟಲ್‌ನಲ್ಲೇ ವಿದ್ಯುತ್‌ ಮೂಲಸೌಕರ್ಯದ ಸ್ಥಿತಿಗತಿ ಮಾಹಿತಿ: ಇಂಧನ ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ…

14 mins ago

ಇರಾನ್‌ನ ಮುಂದಿನ ಸರ್ವೋಚ್ಛ ನಾಯಕನನ್ನೂ ಹತ್ಯೆ ಮಾಡುತ್ತೇವೆ: ಇಸ್ರೇಲ್‌ ಎಚ್ಚರಿಕೆ

ಇಸ್ರೇಲ್:‌ ಇರಾನ್‌ನ ಮುಂದಿನ ಸರ್ವೋಚ್ಛ ನಾಯಕನನ್ನೂ ಹತ್ಯೆ ಮಾಡುತ್ತೇವೆ ಎಂದು ಇಸ್ರೇಲ್‌ ಖಡಕ್‌ ಎಚ್ಚರಿಕೆ ಕೊಟ್ಟಿದೆ. ಇರಾನ್‌ನ ಮುಂದಿನ ನಾಯಕನ…

23 mins ago

ಹಾಸನ: ಪಾಠ ಮಾಡುವಾಗಲೇ ಶಿಕ್ಷಕ ಹೃದಯಾಘಾತದಿಂದ ಸಾವು

ಹಾಸನ: ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗಲೇ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.…

44 mins ago

90 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವು ರಕ್ಷಣೆ

ಮೈಸೂರು: 90 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವನ್ನು ರಕ್ಷಣೆ ಮಾಡುವಲ್ಲಿ ಉರಗ ಸಂರಕ್ಷಕ ಕೆಂಪರಾಜು ಯಶಸ್ವಿಯಾಗಿದ್ದಾರೆ. ಮೈಸೂರಿನ ಇಲವಾಲ ಗ್ರಾಮದಲ್ಲಿ…

53 mins ago

ಉಡುತೊರೆ ಹಳ್ಳ ಜಲಾಶಯಕ್ಕೆ ನೀರು ತುಂಬಿಸಲು ಬಜೆಟ್‌ನಲ್ಲಿ ಅನುಮೋದನೆ ಸಿಗುವ ವಿಶ್ವಾಸ: ಮಾಜಿ ಶಾಸಕ ಆರ್.‌ನರೇಂದ್ರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: 9 ವರ್ಷಗಳ ಕಾಲ ನಡೆಸಿದ ನಿರಂತರ ಹೋರಾಟ, ಕ್ಷೇತ್ರದ ರೈತ…

1 hour ago

ಕೆನಡಾದಲ್ಲಿ ಕನ್ನಡಿಗನ ಹತ್ಯೆ ಪ್ರಕರಣ: ಆರೋಪಿ ಭಾವಚಿತ್ರ ಬಿಡುಗಡೆ

ನೆಲಮಂಗಲ: ಕೆನಡಾ ದೇಶದಲ್ಲಿ ಕನ್ನಡಿಗನನ್ನು ಗುಂಡಿಟ್ಟು ಹತ್ಯೆ ಮಾಡಿದ ಪ್ರಕರಣದಲ್ಲಿ ಕೊಲೆ ಮಾಡಿರುವ ಆರೋಪಿ ಭಾವಚಿತ್ರವನ್ನು ಕೆನಡಾದ ಟೊರಂಟೊ ಪೊಲೀಸರು…

3 hours ago