ಜಿಲ್ಲೆಗಳು

ಮೈಸೂರು ವಿಮಾನ ನಿಲ್ದಾಣ ಶೀಘ್ರವೇ ಮೇಲ್ದರ್ಜೆಗೆ : ಪ್ರತಾಪ್ ಸಿಂಹ

ಮೈಸೂರು: ಮೈಸೂರು ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.
ಇಲ್ಲಿನ ಜಲದರ್ಶಿನಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೊದಲ ಹಂತದಲ್ಲಿ 150 ಕೋಟಿ ರೂ. ಬಿಡುಗಡೆಯಾಗಿದೆ. ರನ್ ವೇ ವಿಸ್ತರಣೆಗೆ 160 ಎಕರೆ ಜಮೀನು ಬೇಕು. ಈವರೆಗೆ 47 ಎಕರೆಗೆ ಅಧಿಸೂಚನೆ ಹೊರಡಿಸಲಾಗಿದೆ. ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಮೈಸೂರು- ನಂಜನಗೂಡು ಹೆದ್ದಾರಿಯನ್ನು ಡೈವರ್ಟ್ ಮಾಡಲಾಗುವುದು ಎಂದು ಹೇಳಿದರು.
ಮೈಸೂರು- ಬೆಂಗಳೂರು ಎಕ್ಸ್‌ಪ್ರೆಸ್ ಹೈವೇ ಉದ್ಘಾಟನೆಯನ್ನು ಮಾರ್ಚ್ 11ರಂದು ಮಂಡ್ಯ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಅದೇ ದಿನ ಮೈಸೂರು- ಕುಶಾಲನಗರ ನಾಲ್ಕು ಪಥದ ಹೆದ್ದಾರಿ ನಿರ್ಮಾಣಕ್ಕೂ ಶಂಕುಸ್ಥಾಪನೆ ನೆರವೇರಲಿದೆ. ಮಂಡ್ಯ ಜಿಲ್ಲೆಯವರು ಬಿಜೆಪಿಯವರನ್ನೇನೂ ಗಲ್ಲಿಸದಿದ್ದರೂ ಅಭಿವೃದ್ಧಿ ವಿಚಾರದಲ್ಲಿ ನಾವೇನೂ ತಾರತಮ್ಯ ಮಾಡಿಲ್ಲ. ಮಂಡ್ಯದಲ್ಲೂ ಅಭಿವೃದ್ಧಿ ಮಾಡುತ್ತಿದ್ದೇವೆ. ದಶಪಥಕ್ಕೆ ಕಾವೇರಿ ಹೆಸರಿಡಲು ಎಲ್ಲರ ಸಹಕಾರ ಕೇಳುತ್ತೇನೆ ಎಂದರು.
ರಾಜ್ಯ ರಾಜಕಾರಣಕ್ಕೆ ಬರುತ್ತೀರಾ? ಎಂಬ ಪ್ರಶ್ನೆಗೆ, ನಾನು 2029ರವರೆಗೆ ಮಾತ್ರ ರಾಜಕೀಯದಲ್ಲಿರಲು ಯೋಜಿಸಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಕೈ ಕೆಳಗೆ ಕೆಲಸ ಮಾಡಲಷ್ಟೆ ನನಗಿಷ್ಟ. ನಾನು ದೀರ್ಘಾವಧಿಗೆ ರಾಜಕೀಯದಲ್ಲಿರಲು ಯೋಚಿಸಿಲ್ಲ ಎಂದು ಪ್ರತಿಕ್ರಿಯಿಸಿದರು.

andolanait

Recent Posts

ಬಿಟ್‌ಕಾಯಿಲ್‌ ಪ್ರಕರಣ; ನಲಪಾಡ್‌ ಹ್ಯಾರಿಸ್‌ ಮನೆ ಸೇರಿ 17 ಕಡೆ ಇ.ಡಿ ದಾಳಿ

ಬೆಂಗಳೂರು : ಕಾಂಗ್ರೆಸ್ ಶಾಸಕ ಎನ್.​ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಸೋಮವಾರ ಬೆಳಗ್ಗೆ…

9 mins ago

ಪ್ರಸ್ತುತ ದಲಿತ ರಾಜಕಾರಣದಲ್ಲಿ ಮಹದೇವಪ್ಪ ಎಂಬ ವಿದ್ಯಮಾನ

ರಮೇಶ್‌ ಎಚ್.ಕೆ. ಶಿವಮೊಗ್ಗ ಕರ್ನಾಟಕದಲ್ಲಿ ದಲಿತ ವರ್ಗಗಳ ರಾಜಕಾರಣ ಎಂದಾಕ್ಷಣ ಕೆ. ಹೆಚ್. ರಂಗನಾಥ್, ಬಿ. ರಾಚಯ್ಯ, ಎನ್. ರಾಚಯ್ಯ,…

45 mins ago

ಬೆಂ-ಮೈ ಹೆದ್ದಾರಿಯಲ್ಲಿ ಕಾರು-ಬಸ್ ಡಿಕ್ಕಿ ; ತಪ್ಪಿದ ಭಾರೀ ಅನಾಹುತ, ಪ್ರಯಾಣಿಕರು ಪಾರು

ಮಂಡ್ಯ : ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್…

1 hour ago

ಅಮೆರಿಕ ವಶವಾದ ಇರಾನ್‌ ಹಡಗು ; ಸಶಸ್ತ್ರ ಕಡಲ್ಗಳ್ಳತನ ಎಂದ ಇರಾನ್‌

ವಾಷಿಂಗ್ಟನ್ : ಇರಾನ್ ಧ್ವಜವಿರುವ ಸರಕು ಹಡಗನ್ನು (ಟೂಸ್ಕಾ) ಒಮಾನ್ ಕೊಲ್ಲಿಯಲ್ಲಿ (ಹಾರ್ಮುಜ್ ಜಲಸಂಧಿ ಸಮೀಪ) ನಮ್ಮ ಭದ್ರತಾ ಪಡೆಗಳು…

1 hour ago

ದಲಿತ ಚಿಂತಕ ಧೀಮಂತ ನಾಯಕ ಡಾ.ಎಚ್.ಸಿ.ಮಹದೇವಪ್ಪ ಅವರ ಹೋರಾಟದ ಕತೆ……

‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರ ಮನದಾಳದ ಮಾತು ಇಲ್ಲಿದೆ ನಿರೂಪಣೆ.. ಆರ್‌.ಟಿ.ವಿಠ್ಠಲಮೂರ್ತಿ ನಾನು…

2 hours ago

ಬಿಸಿ ಗಾಳಿ ; ಸಮವಸ್ತ್ರ ಕಡ್ಡಾಯಗೊಳಿಸದಂತೆ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…

5 hours ago