ಜಿಲ್ಲೆಗಳು

ಮೈಸೂರು ವಿಮಾನ ನಿಲ್ದಾಣ ಶೀಘ್ರವೇ ಮೇಲ್ದರ್ಜೆಗೆ : ಪ್ರತಾಪ್ ಸಿಂಹ

ಮೈಸೂರು: ಮೈಸೂರು ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.
ಇಲ್ಲಿನ ಜಲದರ್ಶಿನಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೊದಲ ಹಂತದಲ್ಲಿ 150 ಕೋಟಿ ರೂ. ಬಿಡುಗಡೆಯಾಗಿದೆ. ರನ್ ವೇ ವಿಸ್ತರಣೆಗೆ 160 ಎಕರೆ ಜಮೀನು ಬೇಕು. ಈವರೆಗೆ 47 ಎಕರೆಗೆ ಅಧಿಸೂಚನೆ ಹೊರಡಿಸಲಾಗಿದೆ. ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಮೈಸೂರು- ನಂಜನಗೂಡು ಹೆದ್ದಾರಿಯನ್ನು ಡೈವರ್ಟ್ ಮಾಡಲಾಗುವುದು ಎಂದು ಹೇಳಿದರು.
ಮೈಸೂರು- ಬೆಂಗಳೂರು ಎಕ್ಸ್‌ಪ್ರೆಸ್ ಹೈವೇ ಉದ್ಘಾಟನೆಯನ್ನು ಮಾರ್ಚ್ 11ರಂದು ಮಂಡ್ಯ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಅದೇ ದಿನ ಮೈಸೂರು- ಕುಶಾಲನಗರ ನಾಲ್ಕು ಪಥದ ಹೆದ್ದಾರಿ ನಿರ್ಮಾಣಕ್ಕೂ ಶಂಕುಸ್ಥಾಪನೆ ನೆರವೇರಲಿದೆ. ಮಂಡ್ಯ ಜಿಲ್ಲೆಯವರು ಬಿಜೆಪಿಯವರನ್ನೇನೂ ಗಲ್ಲಿಸದಿದ್ದರೂ ಅಭಿವೃದ್ಧಿ ವಿಚಾರದಲ್ಲಿ ನಾವೇನೂ ತಾರತಮ್ಯ ಮಾಡಿಲ್ಲ. ಮಂಡ್ಯದಲ್ಲೂ ಅಭಿವೃದ್ಧಿ ಮಾಡುತ್ತಿದ್ದೇವೆ. ದಶಪಥಕ್ಕೆ ಕಾವೇರಿ ಹೆಸರಿಡಲು ಎಲ್ಲರ ಸಹಕಾರ ಕೇಳುತ್ತೇನೆ ಎಂದರು.
ರಾಜ್ಯ ರಾಜಕಾರಣಕ್ಕೆ ಬರುತ್ತೀರಾ? ಎಂಬ ಪ್ರಶ್ನೆಗೆ, ನಾನು 2029ರವರೆಗೆ ಮಾತ್ರ ರಾಜಕೀಯದಲ್ಲಿರಲು ಯೋಜಿಸಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಕೈ ಕೆಳಗೆ ಕೆಲಸ ಮಾಡಲಷ್ಟೆ ನನಗಿಷ್ಟ. ನಾನು ದೀರ್ಘಾವಧಿಗೆ ರಾಜಕೀಯದಲ್ಲಿರಲು ಯೋಚಿಸಿಲ್ಲ ಎಂದು ಪ್ರತಿಕ್ರಿಯಿಸಿದರು.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

10 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

10 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

10 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

10 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

10 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

10 hours ago