ಜಿಲ್ಲೆಗಳು

ಮೈಸೂರಿನ ಹಲವು ಕಂಪನಿಗಳಿಂದ ₹10 ಸಾವಿರ ಕೋಟಿ ವಹಿವಾಟು ಸಾಧನೆ : ಅಶ್ವತ್ಥ್​ ನಾರಾಯಣ್​

ಮೈಸೂರು: ಮೈಸೂರಿನಲ್ಲಿ ಇಎಸ್ಡಿಎಂ ವಲಯದ 230 ಕಂಪನಿಗಳು ಈಗಾಗಲೇ ಸ್ಥಾಪನೆಯಾಗಿದ್ದು, ವರ್ಷಕ್ಕೆ 10,000 ಕೋಟಿ ರೂಪಾಯಿ ವಹಿವಾಟು ನಡೆಸುತ್ತಿವೆ ಎಂದು ಸಚಿವ ಡಾ ಸಿ ಎನ್ ಅಶ್ವತ್ಥನಾರಾಯಣ ಹೇಳಿದರು.
ನವೆಂಬರ್‌ನಲ್ಲಿ ನಡೆಯಲಿರುವ ಬೆಂಗಳೂರು ತಂತ್ರಜ್ಞಾನ ಸಮಾವೇಶಕ್ಕೆ ಪೂರ್ವಭಾವಿಯಾಗಿ ಏರ್ಪಡಿಸಿದ್ದ ಬಿಗ್ ಟೆಕ್ ಶೋ ಕಾರ್ಯಕ್ರಮದಲ್ಲಿ ಅವರು ಉದ್ಯಮಿಗಳನ್ನು ಉದ್ದೇಶಿಸಿ ಮಾತನಾಡಿದರು.ಕಳೆದ ಹತ್ತು ತಿಂಗಳಲ್ಲಿ ಮೈಸೂರಿನಲ್ಲಿ ಏಳು ಕಂಪನಿಗಳು ಕಾರ್ಯಾರಂಭಿಸಿವೆ.
1,400 ಕೋಟಿ ಬಂಡವಾಳ ಹೂಡಿಕೆ ಮಾಡುತ್ತಿರುವ ಇನ್ನೂ 7 ಕಂಪನಿಗಳ ಪ್ರಸ್ತಾವನೆಗಳು ಸರ್ಕಾರದ ಮುಂದಿವೆ. ಇವು 12,000 ಉದ್ಯೋಗಗಳನ್ನು ಸೃಷ್ಟಿಸುವ ಸಾಮರ್ಥ್ಯ ಹೊಂದಿದ್ದು ಸದ್ಯದಲ್ಲೇ ಒಪ್ಪಿಗೆ ನೀಡಲಾಗುವುದು ಎಂದರು.
ಐಟಿ ಬಿಟಿ ಸಚಿವ ಅಶ್ವತ್ಥ್​ ನಾರಾಯಣ್ ಅವರು ಮಾತನಾಡಿದರುನವೋದ್ಯಮ ಸ್ಥಾಪನೆ: ಮೈಸೂರಿನಲ್ಲಿ ಮುಂದಿನ ಒಂದು ವರ್ಷದಲ್ಲಿ ವಿದ್ಯಾರ್ಥಿಗಳೇ ನೇತೃತ್ವ ವಹಿಸಲಿರುವ 500 ನವೋದ್ಯಮಗಳನ್ನು ಸ್ಥಾಪಿಸಲಾಗುವುದು.

ಇದಲ್ಲದೆ ಸ್ಟಾರ್ಟ್ ಅಪ್ ಹಬ್ ಮುಖಾಂತರ ಈ ಕಂಪನಿಗಳನ್ನು ಬೆಸೆಯಲಾಗುವುದು. ಸೆಮಿಕಂಡಕ್ಟರ್ ಫ್ಯಾಬ್ ವಲಯಕ್ಕೆ ಇಲ್ಲಿ ಈಗಾಗಲೇ 200 ಎಕರೆ ಭೂಮಿ ನೀಡಲಾಗಿದೆ. ಇದರ ಜೊತೆಗೆ ಹೆಚ್ಚುವರಿಯಾಗಿ 250 ಎಕರೆ ಭೂಮಿ ಮೀಸಲಿಡಲಾಗಿದೆ ಎಂದು ತಿಳಿಸಿದರು

andolanait

Recent Posts

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

7 hours ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

8 hours ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

8 hours ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

8 hours ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

8 hours ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

8 hours ago