ಜಿಲ್ಲೆಗಳು

ಮೈಸೂರಿನ ಹಲವು ಕಂಪನಿಗಳಿಂದ ₹10 ಸಾವಿರ ಕೋಟಿ ವಹಿವಾಟು ಸಾಧನೆ : ಅಶ್ವತ್ಥ್​ ನಾರಾಯಣ್​

ಮೈಸೂರು: ಮೈಸೂರಿನಲ್ಲಿ ಇಎಸ್ಡಿಎಂ ವಲಯದ 230 ಕಂಪನಿಗಳು ಈಗಾಗಲೇ ಸ್ಥಾಪನೆಯಾಗಿದ್ದು, ವರ್ಷಕ್ಕೆ 10,000 ಕೋಟಿ ರೂಪಾಯಿ ವಹಿವಾಟು ನಡೆಸುತ್ತಿವೆ ಎಂದು ಸಚಿವ ಡಾ ಸಿ ಎನ್ ಅಶ್ವತ್ಥನಾರಾಯಣ ಹೇಳಿದರು.
ನವೆಂಬರ್‌ನಲ್ಲಿ ನಡೆಯಲಿರುವ ಬೆಂಗಳೂರು ತಂತ್ರಜ್ಞಾನ ಸಮಾವೇಶಕ್ಕೆ ಪೂರ್ವಭಾವಿಯಾಗಿ ಏರ್ಪಡಿಸಿದ್ದ ಬಿಗ್ ಟೆಕ್ ಶೋ ಕಾರ್ಯಕ್ರಮದಲ್ಲಿ ಅವರು ಉದ್ಯಮಿಗಳನ್ನು ಉದ್ದೇಶಿಸಿ ಮಾತನಾಡಿದರು.ಕಳೆದ ಹತ್ತು ತಿಂಗಳಲ್ಲಿ ಮೈಸೂರಿನಲ್ಲಿ ಏಳು ಕಂಪನಿಗಳು ಕಾರ್ಯಾರಂಭಿಸಿವೆ.
1,400 ಕೋಟಿ ಬಂಡವಾಳ ಹೂಡಿಕೆ ಮಾಡುತ್ತಿರುವ ಇನ್ನೂ 7 ಕಂಪನಿಗಳ ಪ್ರಸ್ತಾವನೆಗಳು ಸರ್ಕಾರದ ಮುಂದಿವೆ. ಇವು 12,000 ಉದ್ಯೋಗಗಳನ್ನು ಸೃಷ್ಟಿಸುವ ಸಾಮರ್ಥ್ಯ ಹೊಂದಿದ್ದು ಸದ್ಯದಲ್ಲೇ ಒಪ್ಪಿಗೆ ನೀಡಲಾಗುವುದು ಎಂದರು.
ಐಟಿ ಬಿಟಿ ಸಚಿವ ಅಶ್ವತ್ಥ್​ ನಾರಾಯಣ್ ಅವರು ಮಾತನಾಡಿದರುನವೋದ್ಯಮ ಸ್ಥಾಪನೆ: ಮೈಸೂರಿನಲ್ಲಿ ಮುಂದಿನ ಒಂದು ವರ್ಷದಲ್ಲಿ ವಿದ್ಯಾರ್ಥಿಗಳೇ ನೇತೃತ್ವ ವಹಿಸಲಿರುವ 500 ನವೋದ್ಯಮಗಳನ್ನು ಸ್ಥಾಪಿಸಲಾಗುವುದು.

ಇದಲ್ಲದೆ ಸ್ಟಾರ್ಟ್ ಅಪ್ ಹಬ್ ಮುಖಾಂತರ ಈ ಕಂಪನಿಗಳನ್ನು ಬೆಸೆಯಲಾಗುವುದು. ಸೆಮಿಕಂಡಕ್ಟರ್ ಫ್ಯಾಬ್ ವಲಯಕ್ಕೆ ಇಲ್ಲಿ ಈಗಾಗಲೇ 200 ಎಕರೆ ಭೂಮಿ ನೀಡಲಾಗಿದೆ. ಇದರ ಜೊತೆಗೆ ಹೆಚ್ಚುವರಿಯಾಗಿ 250 ಎಕರೆ ಭೂಮಿ ಮೀಸಲಿಡಲಾಗಿದೆ ಎಂದು ತಿಳಿಸಿದರು

andolanait

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

12 mins ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

6 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

6 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

6 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

6 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

7 hours ago