ಜಿಲ್ಲೆಗಳು

ಮೈಸೂರಿನ ಹಲವು ಕಂಪನಿಗಳಿಂದ ₹10 ಸಾವಿರ ಕೋಟಿ ವಹಿವಾಟು ಸಾಧನೆ : ಅಶ್ವತ್ಥ್​ ನಾರಾಯಣ್​

ಮೈಸೂರು: ಮೈಸೂರಿನಲ್ಲಿ ಇಎಸ್ಡಿಎಂ ವಲಯದ 230 ಕಂಪನಿಗಳು ಈಗಾಗಲೇ ಸ್ಥಾಪನೆಯಾಗಿದ್ದು, ವರ್ಷಕ್ಕೆ 10,000 ಕೋಟಿ ರೂಪಾಯಿ ವಹಿವಾಟು ನಡೆಸುತ್ತಿವೆ ಎಂದು ಸಚಿವ ಡಾ ಸಿ ಎನ್ ಅಶ್ವತ್ಥನಾರಾಯಣ ಹೇಳಿದರು.
ನವೆಂಬರ್‌ನಲ್ಲಿ ನಡೆಯಲಿರುವ ಬೆಂಗಳೂರು ತಂತ್ರಜ್ಞಾನ ಸಮಾವೇಶಕ್ಕೆ ಪೂರ್ವಭಾವಿಯಾಗಿ ಏರ್ಪಡಿಸಿದ್ದ ಬಿಗ್ ಟೆಕ್ ಶೋ ಕಾರ್ಯಕ್ರಮದಲ್ಲಿ ಅವರು ಉದ್ಯಮಿಗಳನ್ನು ಉದ್ದೇಶಿಸಿ ಮಾತನಾಡಿದರು.ಕಳೆದ ಹತ್ತು ತಿಂಗಳಲ್ಲಿ ಮೈಸೂರಿನಲ್ಲಿ ಏಳು ಕಂಪನಿಗಳು ಕಾರ್ಯಾರಂಭಿಸಿವೆ.
1,400 ಕೋಟಿ ಬಂಡವಾಳ ಹೂಡಿಕೆ ಮಾಡುತ್ತಿರುವ ಇನ್ನೂ 7 ಕಂಪನಿಗಳ ಪ್ರಸ್ತಾವನೆಗಳು ಸರ್ಕಾರದ ಮುಂದಿವೆ. ಇವು 12,000 ಉದ್ಯೋಗಗಳನ್ನು ಸೃಷ್ಟಿಸುವ ಸಾಮರ್ಥ್ಯ ಹೊಂದಿದ್ದು ಸದ್ಯದಲ್ಲೇ ಒಪ್ಪಿಗೆ ನೀಡಲಾಗುವುದು ಎಂದರು.
ಐಟಿ ಬಿಟಿ ಸಚಿವ ಅಶ್ವತ್ಥ್​ ನಾರಾಯಣ್ ಅವರು ಮಾತನಾಡಿದರುನವೋದ್ಯಮ ಸ್ಥಾಪನೆ: ಮೈಸೂರಿನಲ್ಲಿ ಮುಂದಿನ ಒಂದು ವರ್ಷದಲ್ಲಿ ವಿದ್ಯಾರ್ಥಿಗಳೇ ನೇತೃತ್ವ ವಹಿಸಲಿರುವ 500 ನವೋದ್ಯಮಗಳನ್ನು ಸ್ಥಾಪಿಸಲಾಗುವುದು.

ಇದಲ್ಲದೆ ಸ್ಟಾರ್ಟ್ ಅಪ್ ಹಬ್ ಮುಖಾಂತರ ಈ ಕಂಪನಿಗಳನ್ನು ಬೆಸೆಯಲಾಗುವುದು. ಸೆಮಿಕಂಡಕ್ಟರ್ ಫ್ಯಾಬ್ ವಲಯಕ್ಕೆ ಇಲ್ಲಿ ಈಗಾಗಲೇ 200 ಎಕರೆ ಭೂಮಿ ನೀಡಲಾಗಿದೆ. ಇದರ ಜೊತೆಗೆ ಹೆಚ್ಚುವರಿಯಾಗಿ 250 ಎಕರೆ ಭೂಮಿ ಮೀಸಲಿಡಲಾಗಿದೆ ಎಂದು ತಿಳಿಸಿದರು

andolanait

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

2 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

2 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

2 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

3 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

3 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

3 hours ago