ಜಿಲ್ಲೆಗಳು

ಬಣಜಿಗ ವಿದ್ಯಾರ್ಥಿ ನಿಲಯಕ್ಕೆ ಡಾ. ಲಕ್ಷ್ಮೀ ನರಸಿಂಹಮೂರ್ತಿ ಭೇಟಿ

ಮೈಸೂರು : ನಗರದ ಸರಸ್ವತಿಪುರಂ ನಲ್ಲಿರುವ ಬಲಿಜ ಬಣಜಿಗ ವಿದ್ಯಾರ್ಥಿ ನಿಲಯಕ್ಕೆ ಅಮೇರಿಕಾದ ಮೆಡಿಕಲ್ ಸರ್ಜನ್ ಜನರಲ್  ಅಗಿರುವ ಡಾಕ್ಟರ್‌ ವಿವೇಕ್‌ ಮೂರ್ತಿ ಅವರ ತಂದೆ ಡಾಕ್ಟರ್ ಲಕ್ಷ್ಮೀ ನರಸಿಂಹಮೂರ್ತಿ ಅವರು ಇಂದು ಭೇಟಿ ನೀಡಿ ತಮ್ಮ ವಿದ್ಯಾರ್ಥಿ ಜೀವನದ ನೆನಪುಗಳನ್ನು ಮೆಲುಕು ಹಾಕಿದರು.

ಮೈಸೂರಿನಲ್ಲಿ ಪಿಯುಸಿ ಮತ್ತು ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿನಿಲಯದ ನೆನಪು ಗಳನ್ನು ಮೆಲಕು ಹಾಕಿದ ಅವರು ಇದೇ ಹಾಲಿನಲ್ಲಿ ಚಾಪೆಯ ಮೇಲೆ ಮಲಗುತ್ತಿದ್ದೆವು, ಚಪ್ಪಲಿ ಇರಲಿಲ್ಲ ಕಾಲೇಜಿಗೆ ಬರೀ ಕಾಲಿನಲ್ಲಿ ನಡೆಯುತ್ತಿದ್ದವು ಅದು ನಮಗೆ ಕೊರತೆ ಅನಿಸಲಿಲ್ಲ ಏಕೆಂದರೆ ನಮ್ಮ ಗುರಿ ಮುಖ್ಯವಾಗಿತ್ತು. ವಿದ್ಯಾರ್ಥಿಗಳನ್ನು ನೋಡಿ ಬಹಳ ಸಂತೋಷವಾಗಿದೆ ನಿಮಗಿರುವ ಸೌಲಭ್ಯಗಳು ನಮಗಿರಲಿಲ್ಲ.
ಹೆಚ್ಚು ಜನರನ್ನ ಬೆರೆಯುವ ಬದಲು ಮೊಬೈಲ್ ಹೆಚ್ಚಾಗಿದೆ. ಜನರ ಒಡನಾಟ ಹೆಚ್ಚು ತೃಪ್ತಿ ನೀಡುತ್ತದೆ. ಭಾರತದ ಧಾರ್ಮಿಕವಾಗಿ ಆಧ್ಯಾತ್ಮಿಕ ಚಿಂತನೆಗಳು ಪ್ರಪಂಚಕ್ಕೆ ಮಾದರಿಯಾಗಿದೆ. ಆದರೆ ಇವು ಕಡಿಮೆಯಾಗಿದೆ ಎಂದರು. ಇದೇ ಸಂದರ್ಭದಲ್ಲಿ  ಅವರನ್ನು ಸನ್ಮಾನಿಸಲಾಯಿತು.

ಬಳಿಕ ಮಾತನಾಡಿದ ಮೈಲಾಕ್ ಮಾಜಿ ಅಧ್ಯಕ್ಷರಾದ ಹೆಚ್ .ಎ.ವೆಂಕಟೇಶ್ ಅವರು ಕೋವಿಡ್ ಸಂದರ್ಭದಲ್ಲಿ ಇವರ ಮಡಿಕೇರಿ, ಚಿಕ್ಕಬಳ್ಳಾಪುರ, ಮೈಸೂರು ಭಾಗದಲ್ಲಿ ಅನೇಕ ಸೇವೆ ನೀಡಿರುವುದು ಎಂದೆಂದಿಗೂ ಸ್ಮರಣೀಯ. ಈ ಸಮುದಾಯ ಭವನದ ವಿದ್ಯಾರ್ಥಿನಿಲಯದಿಂದ ಕಲಿತು ಹೋಗಿ ವೈದ್ಯ ವೃತ್ತಿಯಲ್ಲಿ ಅಪಾರ ಸಾಧನೆ ಮಾಡಿದ್ದಾರೆ. ಇಂತಹವರ ಸಾಧನೆ ನಮ್ಮೆಲ್ಲರಿಗೂ ಮಾದರಿಯಾಗಬೇಕೆಂಬ ಉದ್ದೇಶದಿಂದ ಈ ದಿನ ತಿಳಿಸಿದರು.
ಕಳೆದ ಬಾರಿ ಇಲ್ಲಿನ ವಿದ್ಯಾರ್ಥಿಗಳ ಅಭಿವೃದ್ಧಿ ಗೆ ಸೋಲಾರ್ ವ್ಯವಸ್ಥೆ ಕಲ್ಪಿಸಿಕೊಟ್ಟಿರುವುದು ಮಾತ್ರವಲ್ಲದೆ, ಸಾಕಷ್ಟು ಧನ ಸಹಾಯ ಸಹ ನೀಡಿದ್ದಾರೆ. ಅವರ ಸೇವೆಯನ್ನು ಸದಾ ಸಮುದಾಯ ಸ್ಮರಿಸಲಿದೆ. ಈ ದಿನ ಎಲ್ಲೆಡೆ ಕನಕ ಜಯಂತಿ ಮಹೋತ್ಸವ ಆಚರಿಸುತ್ತಿದ್ದು, ಆತನ ಜೀವನ ಚರಿತೆಗಳನ್ನು ಅರ್ಥೈಯಿಸಿಕೊಂಡು ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರ ಸ್ಮರಣೆ ನಿತ್ಯ ಮಾಡುವ ಕೆಲಸ ಆಗಬೇಕೆಂದು ಕನಕ‌ ಜಯಂತಿ ಶುಭಾಶಯ ಕೋರಿದರು.
ಇದೇ ಸಂದರ್ಭದಲ್ಲಿ  ಪಿಜಿ ಶೆಟ್ಟಿ ಕನ್ಸ್ಟ್ರಕ್ಷನ್ ವ್ಯವಸ್ಥಾಪಕ ನಿರ್ದೇಶಕರಾದ ಎಂ.ಜಿ. ಸೋಮಶೇಖರ್, ಉದ್ಯಮಿ ಡಿ. ಕೀರ್ತಿ ಕುಮಾರ್, ಸಂಘದ ಪ್ರಧಾನ ಕಾರ್ಯದರ್ಶಿಎಚ್.ಆರ್. ಗೋಪಾಲಕೃಷ್ಣ, ಉಪಾಧ್ಯಕ್ಷ ಜಿ. ರಮೇಶ್ ಆಂತರಿಕ ಲೆಕ್ಕ ಪರಿಶೋಧಕರು ಡಿ. ನಾಗರಾಜ್, ಪತ್ರಕರ್ತ ಹೆಚ್ ಕೆ ವಸಂತ ಕುಮಾರ್, ಹೆಚ್ .ವಿ .ಚೆಲುವರಾಜ್ ನಿರ್ದೇಶಕರುಗಳಾದ ಡಾ. ಟಿ. ರಮೇಶ್, ಎನ್ . ಹೇಮಂತ್ ಕುಮಾರ್, ಸರ್ಕಾರಿ ಪಿಯು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎನ್. ವಿಜಯ್ ಕುಮಾರ್, ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಅಧೀಕ್ಷಕ ಎಚ್. ವಿ. ನಾಗರಾಜು, ಬಿ.ಕೆ. ಸುರೇಶ್,
ವಿಶೇಷ ಆಹ್ವಾನಿತರಾದ ಪಾರ್ಥಸಾರಥಿ, ಎನ್ ಬಾಲರಾಜ್, ಜಿಲ್ಲಾ ಯೋಗಿ ನಾರಾಯಣ ಬಲಿಜ ಸಂಘದ ಅಧ್ಯಕ್ಷ ವಿ . ಕೃಷ್ಣಪ್ಪ, ಕಾರ್ಯದರ್ಶಿ ಜಿ.ರಾಮು, ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago