ಮೈಸೂರು: ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ದೇಶದ 150ಕ್ಕೂ ಹೆಚ್ಚು ಸಂಘಟನೆಗಳ ಜತೆಗೂಡಿ ಹಮ್ಮಿಕೊಳ್ಳಲಿರುವ ಭಾರತ್ ಜೋಡೋ ಅಭಿಯಾನದ ರೂಪುರೇಷೆ ತಯಾರಾಗಿದ್ದು, ಸೆ.7ರಿಂದ ಆರಂಭವಾಗುವ ಯಾತ್ರೆಯು ಮೈಸೂರು ಮೂಲಕವೂ ಹಾದು ಹೋಗಲಿದೆ.
ಸೆ.೭ರಿಂದ ಕನ್ಯಾಕುಮಾರಿಯಿಂದ ಕಾಶ್ಮೀರವರೆಗೆ 150 ದಿನಗಳ, ಸರಿಸುಮಾರು 3500 ಕಿಲೋಮೀಟರ್, 12 ರಾಜ್ಯಗಳ ಮೂಲಕ ಯಾತ್ರೆ ಹಾದು ಹೋಗಲಿದೆ. ಯಾತ್ರೆಯಲ್ಲಿ ಸಾಮಾಜಿಕ ಹೋರಾಟಗಾರರಾದ ಯೋಗೇಂದ್ರ ಯಾದವ್, ಅರುಣಾ ರಾಯ ಸಹಿತ ಅನೇಕ ಸಾಮಾಜಿಕ ಹೋರಾಟಗಾರರು, ಸಂಘಟನೆಗಳು ಪಾಲ್ಗೊಳ್ಳಲಿವೆ. ಈ ಯಾತ್ರೆಯು 12 ರಾಜ್ಯಗಳು, ಎರಡು ಯೂನಿಯನ್ ಟೆರಟರಿ ಮೂಲಕ ಹಾದು ಹೋಗಲಿದೆ.
ಅದರಲ್ಲಿ ಪ್ರಮುಖವಾಗಿ ಕನ್ಯಾಕುಮಾರಿ, ತಿರುವನಂತಪುರಂ, ಕೊಚ್ಚಿನ್, ನೀಲಂಬೂರು, ಮೈಸೂರು, ಬಳ್ಳಾರಿ, ರಾಯಚೂರು, ವಿಕರಾಬಾದ್, ನಂದೇಡ್, ಜಲ್ಗನ್ ಜಾಮೋದ್, ಇಂದೋರ್, ಕೋಟಾ, ಡುಸಾ, ಅಲ್ವಾರ್, ಭುಲಂದೇಶ್ವರ್, ದಿಲ್ಲಿ, ಅಂಬಲ, ಪಠಾಣ್ಕೋಟ್, ಜಮ್ಮು, ಶ್ರೀನಗರದಲ್ಲಿ ಮುಕ್ತಾಯವಾಗಲಿದೆ.
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…
ಬೆಂಗಳೂರು: ನಿಮಗೆಲ್ಲಾ ಡಿಬಾಸ್, ಆ ಡಿಬಾಸ್ ನನಗೆ ಮಗ ನೆನಪಿಟ್ಟುಕೊಳ್ಳಿ. ಇನ್ನೆರಡು ತಿಂಗಳಲ್ಲಿ ದರ್ಶನ್ ಹೊರಬರುತ್ತಾರೆ ಎಂದು ನಟ ರವಿಚಂದ್ರನ್…