Mysore
23
broken clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

ಮೈಸೂರು: ನನ್ನನೂ ಬಿಜೆಪಿಗೆ ಸೇರಿಸಿಕೊಳ್ಳಿ: ರೌಡಿಶೀಟರ್‌ ಪಾನಿಪುರಿ ಮಂಜ

ಮೈಸೂರು: ‘ಬಿಜೆಪಿಗರೇ, ನಾನು ರೌಡಿಶೀಟರ್‌, ನನಗೂ ನಿಮ್ಮ ಪಕ್ಷದಲ್ಲಿ ಸ್ಥಾನ ಕೊಡುವಿರಾ?’ ಎಂದು ಬರೆದಿದ್ದ ಬ್ಯಾನರ್ ಹಿಡಿದು, ಮಂಜು ಅಲಿಯಾಸ್ ಪಾನಿಪುರಿ ಮಂಜ ಎನ್ನುವವರು ನ್ಯಾಯಾಲಯದ ಮುಂಭಾಗದ ಗಾಂಧಿ ಪುತ್ಥಳಿ ಎದುರು ಶನಿವಾರ ಸಾರ್ವಜನಿಕರ ಗಮನಸೆಳೆದರು.

ಬಾಲಗಂಗಾಧರನಾಥ ಸ್ವಾಮೀಜಿ, ಸಿದ್ಧಗಂಗಾ ಸ್ವಾಮೀಜಿ, ಕನಕದಾಸ, ವಾಲ್ಮೀಕಿ, ಅಂಬೇಡ್ಕರ್ ಚಿತ್ರ ಹಾಕಿದ್ದ ಬ್ಯಾನರ್‌ ಹಿಡಿದಿದ್ದರು. ಗಣೇಶ ನಗರದ ನಿವಾಸಿಯಾದ ಅವರು, 2013ರಲ್ಲಿ ಕೊಲೆ ಯತ್ನ ಪ್ರಕರಣದಲ್ಲಿ ಜೈಲು ಸೇರಿದ್ದರು ಎಂದು ತಿಳಿದುಬಂದಿದೆ.

ಅವರನ್ನು ಪೊಲೀಸರು ವಶಕ್ಕೆ ಪಡೆದು, ಹೆಚ್ಚಿನ ವಿಚಾರಣೆ ಸಂಬಂಧ ಉದಯಗಿರಿ ಠಾಣೆ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!