ಜಿಲ್ಲೆಗಳು

ಯಾವೆಲ್ಲ ನಾಯಕರು ಬಿಜೆಪಿಗೆ ಸೇರಲಿದ್ದಾರೆ ಎಂಬುದನ್ನು ಈಗ ಹೇಳುವುದಿಲ್ಲ : ಕೆ.ಸಿ.ನಾರಾಯಣಗೌಡ

ಮೈಸೂರು: ಮುಂಬರುವ ದಿನಗಳಲ್ಲಿ ಮಂಡ್ಯ ಜಿಲ್ಲೆಯ ಎರಡೂ ಪಕ್ಷಗಳ ಮತ್ತಷ್ಟು ನಾಯಕರು ಬಿಜೆಪಿಗೆ ಸೇರಲಿದ್ದಾರೆ. ಯಾವೆಲ್ಲಾ ನಾಯಕರು ಬಿಜೆಪಿ ಸೇರಲಿದ್ದಾರೆ ಎಂಬುದನ್ನು ಈಗ ಹೇಳುವುದಿಲ್ಲ ಎಂದು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತಗಳಿಸಿ ಮತ್ತೆ ಅಧಿಕಾರಕ್ಕೆ ಬರಲಿದೆ. ಗುಜರಾತ್ ನಂತೆ ಕರ್ನಾಟಕದಲ್ಲೂ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಹಿಮಾಚಲಪ್ರದೇಶದಲ್ಲಿ ಕೆಲವೊಂದು ಕಾರಣಗಳಿಂದ ಸೋಲಾಗಿದೆ. ಸ್ಥಳೀಯ ಕಾರಣಗಳಿಂದ ಅಲ್ಲಿ ಬಿಜೆಪಿಗೆ ಸೋಲಾಗಿದೆ. ಮುಂಬರುವ ವಿಧಾಸಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲೂ ಜನಸಂಕಲ್ಪ ಯಾತ್ರೆ ನಡೆಯಲಿದೆ. ಸಚ್ಚಿದಾನಂದ ಈಗಾಗಲೇ ಬಿಜೆಪಿ ಸೇರಿದ್ದು, ಮತ್ತಷ್ಟು ನಾಯಕರು ಸೇರುತ್ತಾರೆ ಎಂದರು.

ನಾವು ಹದಿನೇಳು ಮಂದಿ ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ. ಬಿಜೆಪಿ ಸೇರ್ಪಡೆ ಆದ ಬಳಿಕ ನಮ್ಮನ್ನು ಪಕ್ಷ ಚೆನ್ನಾಗಿ ನಡೆಸಿಕೊಂಡಿದೆ. ಸಚಿವ ಸ್ಥಾನ ಕೊಟ್ಟು ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಟ್ಟಿದೆ. ಹಾಗಾಗಿ ನಾವು ಬಿಜೆಪಿ ತೊರೆಯುವುದಿಲ್ಲ. ಬಿಜೆಪಿಯಲ್ಲೇ ಮುಂದುವರೆಯುತ್ತೇವೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್, ಜೆಡಿಎಸ್‌ಗೆ ಹೋಗುವುದಿಲ್ಲ ಎಂದರು.

ರೌಡಿಶೀಟರ್ ಗಳನ್ನು ಪಕ್ಷಗಳಿಗೆ ಸೇರ್ಪಡೆ ಕುರಿತು ಆರೋಪ ಪ್ರತ್ಯಾರೋಪಗಳು ಕೇಳಿಬರುತ್ತಿರುವ ವಿಚಾರ ಮಾತನಾಡಿದ ಅವರು, ರೌಡಿಗಳನ್ನು ಹುಟ್ಟು ಹಾಕಿದ್ದು ಯಾರು? ಗೂಂಡಾಗಳನ್ನು ಹುಟ್ಟು ಹಾಕಿದ್ದೇ ಕಾಂಗ್ರೆಸ್. ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಗಳಿಲ್ಲ ಹೇಳಿ, ಅವರನ್ನು ಏಕೆ ಓಡಿಸಿಲ್ಲ. ಅಲ್ಲಿಯೇ ರೌಡಿಗಳಿಗೆ ಟ್ರೈನಿಂಗ್ ಕೊಡಲಾಗುತ್ತದೆ. ಯಾವಾಗಲೂ ಗುಂಡಾಗಳೇ ಆಗಿರ್ತಾರೆ ಎನ್ನೋದು ಸರಿಯಲ್ಲ. ಬಿಜೆಪಿ ಸೇರ್ಪಡೆ ಆಗುವವರನ್ನು ರೌಡಿ ಶೀಟರ್ ಎಂದು ಹೇಳುತ್ತಿದ್ದಾರೆ. ಅವರಿಗೆ ಹೊಟ್ಟೆ ಉರಿ, ಅಲ್ಲಿದ್ದವರು ಬಿಜೆಪಿ ಸೇರುತ್ತಿರುವುದನ್ನು ಸಹಿಸಿಕೊಳ್ಳಲಾಗದೇ ಈ ರೀತಿ ಹೇಳ್ತಿದ್ದಾರೆ ಎಂದರು.

ಬಿಜೆಪಿ ಸೇರ್ಪಡೆಗೆ ಮುಂದಾಗಿರುವವರು ಅವರ ಪಕ್ಷದಲ್ಲಿ ಇರುವವರೆಗೂ ರೌಡಿಶೀಟರ್ ಗಳಾಗಿರಲಿಲ್ಲವೇ? ರೌಡಿಶೀಟರ್‌ಗಳಿಗೆ ಮನಿ ಫಂಡ್ ಮಾಡುತ್ತಿದ್ದವರು ಯಾರು? ಬಿಜೆಪಿಯಲ್ಲಿ ಇರುವವರು ಪುಣ್ಯಾತ್ಮರು, ವಿದ್ಯಾವಂತರು, ತ್ಯಾಗಿಗಳು, ಆರ್‌ಎಸ್ ಎಸ್ ಹಿನ್ನೆಲೆಯುಳ್ಳವರು. ಕುಡ್ಲು ಮಚ್ಚು ಹಿಡಿದಿರುವವರು ಬಿಜೆಪಿಯಲ್ಲಿಲ್ಲ. ಕುಡ್ಲು ಮಚ್ಚು ಹಿಡಿಯುವವರು ಯಾವ ಪಕ್ಷದಲ್ಲಿದ್ದಾರೆಂದು ಎಲ್ಲರಿಗೂ ಗೊತ್ತಿದೆ ಎಂದರು.

andolanait

Recent Posts

ವಿರಾಜಪೇಟೆ ಐತಿಹಾಸಿಕ ಕೆರೆಗಳ ಒತ್ತುವರಿ ಆರೋಪ

ಕಾಂಗೀರ ಬೋಪಣ್ಣ ವಿರಾಜಪೇಟೆ : ಪುರಸಭೆ ವ್ಯಾಪ್ತಿಗೆ ಒಳಪಡುವ ೨ ಐತಿಹಾಸಿಕ ಕೆರೆಗಳು ಒತ್ತುವರಿಯಾಗಿರುವ ಆರೋಪ ಕೇಳಿ ಬಂದಿದ್ದು, ಈ…

1 hour ago

ಪಿಯುಸಿ : ಗುಂಡ್ಲುಪೇಟೆಯಲ್ಲಿ ಬಾಲಕಿಯರೇ ಮೇಲುಗೈ

ರೈತರು, ಕೂಲಿ ಕಾರ್ಮಿಕರ ಮಕ್ಕಳೇ ಟಾಪರ್ಸ್‌ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು ತಾಲ್ಲೂಕಿನ…

1 hour ago

ಮೈಸೂರು ಜಿಲ್ಲೆಯ 147 ಗ್ರಾಪಂಗಳೀಗ ಕ್ಷಯ ಮುಕ್ತ!

ಡಿಎಚ್‌ಒ ಡಾ.ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕ್ಷಯರೋಗ ಮುಕ್ತ ಗ್ರಾಪಂ ಅಭಿಯಾನ ಮೈಸೂರು : ಜಿಲ್ಲೆಯಲ್ಲಿ ಕ್ಷಯ ರೋಗ ಮತ್ತು ಸಾವಿನ ಪ್ರಮಾಣ…

1 hour ago

ಓದುಗರ ಪತ್ರ | ಜನಗಣತಿ ಪಾರದರ್ಶಕ,ನಿಖರವಾಗಿರಲಿ. . .

ಭಾರತದ ಜನಗಣತಿ ಕಾಯ್ದೆ ೧೯೪೮ರ ಪ್ರಕಾರ ಈ ಬಾರಿಯ ಜನಗಣತಿ ೨೦೨೭ರ ಕಾರ್ಯವು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಈ ಜನಗಣತಿಯು…

1 hour ago

ಬಾಪೂ ಆದರ್ಶ ಮಡದಿ ಕಸ್ತೂರ ಬಾ ಗಾಂಧಿ

ಡಾ.ಎಂ.ಡಿ.ಉಮೇಶ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪತ್ನಿ ಕಸ್ತೂರ ಬಾ ಅವರು ಏ. ೧೧, ೧೮೬೯ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಗೋಕುಲ್‌ದಾಸ್ ಕಪಾಡಿಯಾ…

2 hours ago

ದಳಪತಿ ವಿಜಯ್‌ಗೆ ಮತ್ತೆ ಸಂಕಷ್ಟ : ಬಿಡುಗಡೆಗೂ ಮೊದಲೆ ʻಜನ ನಾಯಗನ್‌ʼ ಸೋರಿಕೆ.

ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್‌ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್‌ʻ…

3 hours ago