ಜಿಲ್ಲೆಗಳು

ಯಾವೆಲ್ಲ ನಾಯಕರು ಬಿಜೆಪಿಗೆ ಸೇರಲಿದ್ದಾರೆ ಎಂಬುದನ್ನು ಈಗ ಹೇಳುವುದಿಲ್ಲ : ಕೆ.ಸಿ.ನಾರಾಯಣಗೌಡ

ಮೈಸೂರು: ಮುಂಬರುವ ದಿನಗಳಲ್ಲಿ ಮಂಡ್ಯ ಜಿಲ್ಲೆಯ ಎರಡೂ ಪಕ್ಷಗಳ ಮತ್ತಷ್ಟು ನಾಯಕರು ಬಿಜೆಪಿಗೆ ಸೇರಲಿದ್ದಾರೆ. ಯಾವೆಲ್ಲಾ ನಾಯಕರು ಬಿಜೆಪಿ ಸೇರಲಿದ್ದಾರೆ ಎಂಬುದನ್ನು ಈಗ ಹೇಳುವುದಿಲ್ಲ ಎಂದು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತಗಳಿಸಿ ಮತ್ತೆ ಅಧಿಕಾರಕ್ಕೆ ಬರಲಿದೆ. ಗುಜರಾತ್ ನಂತೆ ಕರ್ನಾಟಕದಲ್ಲೂ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಹಿಮಾಚಲಪ್ರದೇಶದಲ್ಲಿ ಕೆಲವೊಂದು ಕಾರಣಗಳಿಂದ ಸೋಲಾಗಿದೆ. ಸ್ಥಳೀಯ ಕಾರಣಗಳಿಂದ ಅಲ್ಲಿ ಬಿಜೆಪಿಗೆ ಸೋಲಾಗಿದೆ. ಮುಂಬರುವ ವಿಧಾಸಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲೂ ಜನಸಂಕಲ್ಪ ಯಾತ್ರೆ ನಡೆಯಲಿದೆ. ಸಚ್ಚಿದಾನಂದ ಈಗಾಗಲೇ ಬಿಜೆಪಿ ಸೇರಿದ್ದು, ಮತ್ತಷ್ಟು ನಾಯಕರು ಸೇರುತ್ತಾರೆ ಎಂದರು.

ನಾವು ಹದಿನೇಳು ಮಂದಿ ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ. ಬಿಜೆಪಿ ಸೇರ್ಪಡೆ ಆದ ಬಳಿಕ ನಮ್ಮನ್ನು ಪಕ್ಷ ಚೆನ್ನಾಗಿ ನಡೆಸಿಕೊಂಡಿದೆ. ಸಚಿವ ಸ್ಥಾನ ಕೊಟ್ಟು ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಟ್ಟಿದೆ. ಹಾಗಾಗಿ ನಾವು ಬಿಜೆಪಿ ತೊರೆಯುವುದಿಲ್ಲ. ಬಿಜೆಪಿಯಲ್ಲೇ ಮುಂದುವರೆಯುತ್ತೇವೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್, ಜೆಡಿಎಸ್‌ಗೆ ಹೋಗುವುದಿಲ್ಲ ಎಂದರು.

ರೌಡಿಶೀಟರ್ ಗಳನ್ನು ಪಕ್ಷಗಳಿಗೆ ಸೇರ್ಪಡೆ ಕುರಿತು ಆರೋಪ ಪ್ರತ್ಯಾರೋಪಗಳು ಕೇಳಿಬರುತ್ತಿರುವ ವಿಚಾರ ಮಾತನಾಡಿದ ಅವರು, ರೌಡಿಗಳನ್ನು ಹುಟ್ಟು ಹಾಕಿದ್ದು ಯಾರು? ಗೂಂಡಾಗಳನ್ನು ಹುಟ್ಟು ಹಾಕಿದ್ದೇ ಕಾಂಗ್ರೆಸ್. ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಗಳಿಲ್ಲ ಹೇಳಿ, ಅವರನ್ನು ಏಕೆ ಓಡಿಸಿಲ್ಲ. ಅಲ್ಲಿಯೇ ರೌಡಿಗಳಿಗೆ ಟ್ರೈನಿಂಗ್ ಕೊಡಲಾಗುತ್ತದೆ. ಯಾವಾಗಲೂ ಗುಂಡಾಗಳೇ ಆಗಿರ್ತಾರೆ ಎನ್ನೋದು ಸರಿಯಲ್ಲ. ಬಿಜೆಪಿ ಸೇರ್ಪಡೆ ಆಗುವವರನ್ನು ರೌಡಿ ಶೀಟರ್ ಎಂದು ಹೇಳುತ್ತಿದ್ದಾರೆ. ಅವರಿಗೆ ಹೊಟ್ಟೆ ಉರಿ, ಅಲ್ಲಿದ್ದವರು ಬಿಜೆಪಿ ಸೇರುತ್ತಿರುವುದನ್ನು ಸಹಿಸಿಕೊಳ್ಳಲಾಗದೇ ಈ ರೀತಿ ಹೇಳ್ತಿದ್ದಾರೆ ಎಂದರು.

ಬಿಜೆಪಿ ಸೇರ್ಪಡೆಗೆ ಮುಂದಾಗಿರುವವರು ಅವರ ಪಕ್ಷದಲ್ಲಿ ಇರುವವರೆಗೂ ರೌಡಿಶೀಟರ್ ಗಳಾಗಿರಲಿಲ್ಲವೇ? ರೌಡಿಶೀಟರ್‌ಗಳಿಗೆ ಮನಿ ಫಂಡ್ ಮಾಡುತ್ತಿದ್ದವರು ಯಾರು? ಬಿಜೆಪಿಯಲ್ಲಿ ಇರುವವರು ಪುಣ್ಯಾತ್ಮರು, ವಿದ್ಯಾವಂತರು, ತ್ಯಾಗಿಗಳು, ಆರ್‌ಎಸ್ ಎಸ್ ಹಿನ್ನೆಲೆಯುಳ್ಳವರು. ಕುಡ್ಲು ಮಚ್ಚು ಹಿಡಿದಿರುವವರು ಬಿಜೆಪಿಯಲ್ಲಿಲ್ಲ. ಕುಡ್ಲು ಮಚ್ಚು ಹಿಡಿಯುವವರು ಯಾವ ಪಕ್ಷದಲ್ಲಿದ್ದಾರೆಂದು ಎಲ್ಲರಿಗೂ ಗೊತ್ತಿದೆ ಎಂದರು.

andolanait

Recent Posts

ಓದುಗರ ಪತ್ರ: ಸುಂಕ ಕದನಕೆ ತೆರೆ!

ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…

4 hours ago

ಓದುಗರ ಪತ್ರ: ಶಾಲೆಗೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…

4 hours ago

ಓದುಗರ ಪತ್ರ: ಜಿಲ್ಲಾ ನ್ಯಾಯಾಲಯಗಳಿಗೆ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…

4 hours ago

ಓದುಗರ ಪತ್ರ: ಬೈಕ್ ವ್ಹೀಲಿಂಗ್ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸಿ

ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…

4 hours ago

ಓದುಗರ ಪತ್ರ: ಮಹಾರಾಣಿ ಕಾಲೇಜಿನಲ್ಲಿ ಕ್ಯಾಂಟೀನ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…

4 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಸೆರೆಬ್ರಲ್ ಪಾಲ್ಸಿಯನ್ನು ಮಣಿಸಿ ಬದುಕು ಕಟ್ಟಿಕೊಂಡ ಸುಮಿತ್

‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…

4 hours ago