ಜಿಲ್ಲೆಗಳು

ಯಾವೆಲ್ಲ ನಾಯಕರು ಬಿಜೆಪಿಗೆ ಸೇರಲಿದ್ದಾರೆ ಎಂಬುದನ್ನು ಈಗ ಹೇಳುವುದಿಲ್ಲ : ಕೆ.ಸಿ.ನಾರಾಯಣಗೌಡ

ಮೈಸೂರು: ಮುಂಬರುವ ದಿನಗಳಲ್ಲಿ ಮಂಡ್ಯ ಜಿಲ್ಲೆಯ ಎರಡೂ ಪಕ್ಷಗಳ ಮತ್ತಷ್ಟು ನಾಯಕರು ಬಿಜೆಪಿಗೆ ಸೇರಲಿದ್ದಾರೆ. ಯಾವೆಲ್ಲಾ ನಾಯಕರು ಬಿಜೆಪಿ ಸೇರಲಿದ್ದಾರೆ ಎಂಬುದನ್ನು ಈಗ ಹೇಳುವುದಿಲ್ಲ ಎಂದು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತಗಳಿಸಿ ಮತ್ತೆ ಅಧಿಕಾರಕ್ಕೆ ಬರಲಿದೆ. ಗುಜರಾತ್ ನಂತೆ ಕರ್ನಾಟಕದಲ್ಲೂ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಹಿಮಾಚಲಪ್ರದೇಶದಲ್ಲಿ ಕೆಲವೊಂದು ಕಾರಣಗಳಿಂದ ಸೋಲಾಗಿದೆ. ಸ್ಥಳೀಯ ಕಾರಣಗಳಿಂದ ಅಲ್ಲಿ ಬಿಜೆಪಿಗೆ ಸೋಲಾಗಿದೆ. ಮುಂಬರುವ ವಿಧಾಸಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲೂ ಜನಸಂಕಲ್ಪ ಯಾತ್ರೆ ನಡೆಯಲಿದೆ. ಸಚ್ಚಿದಾನಂದ ಈಗಾಗಲೇ ಬಿಜೆಪಿ ಸೇರಿದ್ದು, ಮತ್ತಷ್ಟು ನಾಯಕರು ಸೇರುತ್ತಾರೆ ಎಂದರು.

ನಾವು ಹದಿನೇಳು ಮಂದಿ ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ. ಬಿಜೆಪಿ ಸೇರ್ಪಡೆ ಆದ ಬಳಿಕ ನಮ್ಮನ್ನು ಪಕ್ಷ ಚೆನ್ನಾಗಿ ನಡೆಸಿಕೊಂಡಿದೆ. ಸಚಿವ ಸ್ಥಾನ ಕೊಟ್ಟು ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಟ್ಟಿದೆ. ಹಾಗಾಗಿ ನಾವು ಬಿಜೆಪಿ ತೊರೆಯುವುದಿಲ್ಲ. ಬಿಜೆಪಿಯಲ್ಲೇ ಮುಂದುವರೆಯುತ್ತೇವೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್, ಜೆಡಿಎಸ್‌ಗೆ ಹೋಗುವುದಿಲ್ಲ ಎಂದರು.

ರೌಡಿಶೀಟರ್ ಗಳನ್ನು ಪಕ್ಷಗಳಿಗೆ ಸೇರ್ಪಡೆ ಕುರಿತು ಆರೋಪ ಪ್ರತ್ಯಾರೋಪಗಳು ಕೇಳಿಬರುತ್ತಿರುವ ವಿಚಾರ ಮಾತನಾಡಿದ ಅವರು, ರೌಡಿಗಳನ್ನು ಹುಟ್ಟು ಹಾಕಿದ್ದು ಯಾರು? ಗೂಂಡಾಗಳನ್ನು ಹುಟ್ಟು ಹಾಕಿದ್ದೇ ಕಾಂಗ್ರೆಸ್. ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಗಳಿಲ್ಲ ಹೇಳಿ, ಅವರನ್ನು ಏಕೆ ಓಡಿಸಿಲ್ಲ. ಅಲ್ಲಿಯೇ ರೌಡಿಗಳಿಗೆ ಟ್ರೈನಿಂಗ್ ಕೊಡಲಾಗುತ್ತದೆ. ಯಾವಾಗಲೂ ಗುಂಡಾಗಳೇ ಆಗಿರ್ತಾರೆ ಎನ್ನೋದು ಸರಿಯಲ್ಲ. ಬಿಜೆಪಿ ಸೇರ್ಪಡೆ ಆಗುವವರನ್ನು ರೌಡಿ ಶೀಟರ್ ಎಂದು ಹೇಳುತ್ತಿದ್ದಾರೆ. ಅವರಿಗೆ ಹೊಟ್ಟೆ ಉರಿ, ಅಲ್ಲಿದ್ದವರು ಬಿಜೆಪಿ ಸೇರುತ್ತಿರುವುದನ್ನು ಸಹಿಸಿಕೊಳ್ಳಲಾಗದೇ ಈ ರೀತಿ ಹೇಳ್ತಿದ್ದಾರೆ ಎಂದರು.

ಬಿಜೆಪಿ ಸೇರ್ಪಡೆಗೆ ಮುಂದಾಗಿರುವವರು ಅವರ ಪಕ್ಷದಲ್ಲಿ ಇರುವವರೆಗೂ ರೌಡಿಶೀಟರ್ ಗಳಾಗಿರಲಿಲ್ಲವೇ? ರೌಡಿಶೀಟರ್‌ಗಳಿಗೆ ಮನಿ ಫಂಡ್ ಮಾಡುತ್ತಿದ್ದವರು ಯಾರು? ಬಿಜೆಪಿಯಲ್ಲಿ ಇರುವವರು ಪುಣ್ಯಾತ್ಮರು, ವಿದ್ಯಾವಂತರು, ತ್ಯಾಗಿಗಳು, ಆರ್‌ಎಸ್ ಎಸ್ ಹಿನ್ನೆಲೆಯುಳ್ಳವರು. ಕುಡ್ಲು ಮಚ್ಚು ಹಿಡಿದಿರುವವರು ಬಿಜೆಪಿಯಲ್ಲಿಲ್ಲ. ಕುಡ್ಲು ಮಚ್ಚು ಹಿಡಿಯುವವರು ಯಾವ ಪಕ್ಷದಲ್ಲಿದ್ದಾರೆಂದು ಎಲ್ಲರಿಗೂ ಗೊತ್ತಿದೆ ಎಂದರು.

andolanait

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

6 hours ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

8 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

8 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

14 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

14 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

15 hours ago