ಜಿಲ್ಲೆಗಳು

ಮೈಸೂರಿನಲ್ಲಿ ತಯಾರಿಕಾ ಘಟಕ ವಿಸ್ತರಣೆಗೆ ಎಬಿ-ಇನ್ಬೆವ್ ಆಸಕ್ತಿ

ಸುಮಾರು 500 ಕೋಟಿ ರೂ. ಹೂಡಿಕೆಗೆ ಮುಂದಾದ ಕಂಪೆನಿ

ಬೆಂಗಳೂರು :ಬಿಯರ್ ಮತ್ತು ಇತರ ಪಾನೀಯ ತಯಾರಿಕಾ ಕಂಪೆನಿ ಎಬಿ-ಇನ್ಬೆವ್ ನ ಅಧ್ಯಕ್ಷ ಹಾಗೂ ಸಿಇಓ (ಎಪಿಎಸಿ) ಜಾನ್ ಕ್ರಾಪ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ರಾಜ್ಯದಲ್ಲಿ ಇನ್ನಷ್ಟು ಹೂಡಿಕೆ ಮಾಡುವ ಉತ್ಸುಕತೆ ತೋರಿದರು.

ಎಬಿ-ಇನ್ಬೆವ್ನ ತಯಾರಿಕಾ ಘಟಕ ಈಗಾಗಲೇ ಮೈಸೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಂಸ್ಥೆಯು ಸುಮಾರು 500 ಕೋಟಿ ರೂ. ಹೂಡಿಕೆಯೊಂದಿಗೆ ಈ ಘಟಕವನ್ನು ವಿಸ್ತರಣೆ ಮಾಡಲು ಮುಂದಾಗಿದೆ. ರಾಜ್ಯದ ಕೈಗಾರಿಕಾ ಸೌಲಭ್ಯಗಳು ಉತ್ತಮವಾಗಿದ್ದು, ಅತ್ಯುತ್ತಮ ಅಬಕಾರಿ ನೀತಿ ಯನ್ನು ಹೊಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು ತಮ್ಮ ಕಂಪೆನಿಯು ಇನ್ನಷ್ಟು ಹೂಡಿಕೆಯನ್ನು ರಾಜ್ಯದಲ್ಲಿ ಮಾಡಲು ಉತ್ಸುಕವಾಗಿದೆ ಎಂದು ತಿಳಿಸಿದರು.

ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ಅಗತ್ಯವಿರುವ ಎಲ್ಲ ಸಹಕಾರ ನೀಡುವುದಾಗಿ ತಿಳಿಸಿದರು.
ಎಬಿ-ಇನ್ಬೆವ್ ವಿಶ್ವದ ಫಾರ್ಚೂನ್ 500 ಕಂಪೆನಿಗಳಲ್ಲಿ ಒಂದಾಗಿದ್ದು, 150 ದೇಶಗಳಲ್ಲಿ ತಯಾರಿಕಾ ಘಟಕಗಳನ್ನು ಹೊಂದಿದೆ. ಭಾರತದಲ್ಲಿ ತನ್ನ ಕೇಂದ್ರ ಕಚೇರಿಯನ್ನು ಬೆಂಗಳೂರಿನಲ್ಲಿ ಹೊಂದಿದೆ. ಮೈಸೂರು ಘಟಕದಲ್ಲಿ ಸುಮಾರು 2000 ಉದ್ಯೋಗಿಗಳಿದ್ದು, ಶೇ. 79 ರಷ್ಟು ಕಾರ್ಯಾಚರಣೆಯನ್ನು ನವೀಕರಿಸಬಹುದಾದ ಇಂಧನ ಬಳಕೆಯ ಮೂಲಕ ಮಾಡುತ್ತಿದೆ. ಈ ಬ್ರೂವರಿಯ ವಿಸ್ತರಣೆಯಿಂದ ರಾಜ್ಯದ ಬೊಕ್ಕಸಕ್ಕೆ 200-300 ಕೋಟಿ ರೂ. ಹೆಚ್ಚುವರಿ ತೆರಿಗೆ ಸಂಗ್ರಹವಾಗಲಿದ್ದು, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹೆಚ್ಚಿನ ಉದ್ಯೋಗ ಸೃಜನೆಯಾಗಲಿದೆ.
ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಮುಖ್ಯಮಂತ್ರಿಯವರ ಕಾರ್ಯದರ್ಶಿಗಳಾದ ಎಂ.ಎಸ್. ಶ್ರೀಕರ್ ಮತ್ತು ಜಯರಾಂ ರಾಯಪುರ, ಎಬಿ-ಇನ್ಬೆವ್ ಇಂಡಿಯಾ ಮತ್ತು ಸೌತ್ ಈಸ್ಟ್ ಏಷ್ಯಾದ ಅಧ್ಯಕ್ಷ ಕಾರ್ತಿಕೇಯ ಶರ್ಮಾ, ಚೀಫ್ ಲೀಗಲ್ ಅಂಡ್ ಕಾರ್ಪೊರೇಟ್ ಅಫೇರ್ಸ್ ಆಫೀಸರ್ ಕ್ರೆಗ್ ಕೇಟರ್ ಬರ್ಗ್, ಉಪಾಧ್ಯಕ್ಷೆ ಅನಸೂಯಾ ರೇ, ಪ್ರಾದೇಶಿಕ ನಿರ್ದೇಶಕ ವಿನೋದ್ ಬಾಬು ಮೊದಲಾದವರು ಉಪಸ್ಥಿತರಿದ್ದರು.

andolanait

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

1 hour ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

11 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

15 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

16 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

16 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

21 hours ago