ವಿಮಾನ ನಿಲ್ದಾಣ ರನ್ವೇ ವಿಸ್ತರಣೆ ವೇಳೆ ಹೆಚ್ಚುವರಿ ಭೂಮಿ ವಶಕ್ಕೆ ಪರ್ಯಾಯ ಚಿಂತನೆ
ಮೈಸೂರು: ಹಲವು ವರ್ಷಗಳಿಂದ ಅವಳಿ ಜಿಲ್ಲೆಗಳ ಜನರು ಭಾರೀ ನಿರೀಕ್ಷೆಯೊಂದಿಗೆ ಕಾದಿದ್ದ ಮೈಸೂರು-ಚಾಮರಾಜನಗರ ನಡುವಿನ ವಿದ್ಯುತ್ ಚಾಲಿತ ರೈಲು ಸಂಚಾರ ಸದ್ಯಕ್ಕೆ ಆರಂಭವಾಗುವ ಲಕ್ಷಣಗಳಿಲ್ಲ.
ಮೈಸೂರು ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಂತೆ ಹಾದು ಹೋಗಿರುವ ರೈಲ್ವೆ ಹಳಿಯಲ್ಲಿ ಒಂದೂವರೆ ಕಿಲೋ ಮೀಟರ್ ವಿದ್ಯುತ್ ಲೇನ್ ಎಳೆಯಲು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅನುಮತಿ ಕೊಡದ ಕಾರಣ ವಿದ್ಯುತ್ ಚಾಲಿತ ರೈಲು ಸಂಚಾರ ವಿಳಂಬಕ್ಕೆ ಕಾರಣವಾಗಿದೆ. ಹೀಗಾಗಿ, ವಿಮಾನ ನಿಲ್ದಾಣ ರನ್ವೇ ವಿಸ್ತರಣೆ ಮಾಡಲು ಅಗತ್ಯವಿರುವ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವಾಗ ಹೆಚ್ಚುವರಿ ಭೂಮಿ ಪಡೆದುಕೊಂಡ ನಂತರ ಪರ್ಯಾಯ ಆಲೋಚನೆ ಮಾಡಲು ರೈಲ್ವೆ ಇಲಾಖೆ ಹಿರಿಯ ಅಧಿಕಾರಿಗಳು ಮುಂದಾಗಿದ್ದಾರೆ.
ಮೈಸೂರು-ಚಾಮರಾಜನಗರ ನಡುವೆ ಡಿಸೇಲ್ ಚಾಲಿತ ರೈಲುಗಳು ಸಂಚರಿಸುತ್ತಿದ್ದು, ಎಲೆಕ್ಟ್ರಿಕಲ್ ರೈಲುಗಳ ಓಡಾಟಕ್ಕೆ ಈಗಾಗಲೇ ವಿದ್ಯುತ್ ಲೇನ್ ಅಳವಡಿಸಲಾಗಿದೆ. ವಿದ್ಯುತ್ ಲೇನ್ ಅಲ್ಲದೆ ಎರಡು ಬದಿಗಳಲ್ಲಿ ಸಾರ್ವಜನಿಕರು, ದನಕರುಗಳು, ವಾಹನಗಳು ನುಗ್ಗದಂತೆ ತಡೆಗೋಡೆ ನಿರ್ಮಾಣ ಮಾಡಿಕೊಂಡು ಸಜ್ಜು ಮಾಡಲಾಗಿತ್ತು. ಆದರೆ, ಮೈಸೂರು ವಿಮಾನ ನಿಲ್ದಾಣ ಬಳಿ ಒಂದೂವರೆ ಕಿ.ಮೀ ನಷ್ಟು ವಿದ್ಯುತ್ ಲೇನ್ ಅಳವಡಿಸಲು ಪ್ರಾಧಿಕಾರವು ಒಪ್ಪಿಗೆ ಕೊಡದ ಕಾರಣ ಬಾಕಿ ಉಳಿದಿದೆ. ರನ್ ವೇ ವಿಸ್ತರಣೆ ಮಾಡಿದ ನಂತರ ವಿಮಾನ ಕೆಳಗಿಳಿಯುವಾಗ ಅಪಾಯ ಉಂಟಾಗುವ ಸಾಧ್ಯತೆಯಿದೆ ಎನ್ನುವ ವಿಚಾರವನ್ನು ಮುಂದಿಟ್ಟುಕೊಂಡು ಅನುಮತಿ ಕೊಡಲು ನಿರಾಕರಣೆ ಮಾಡಿದ್ದಾರೆ. ಹಾಗಾಗಿ ಈ ಸಮಸ್ಯೆ ಇತ್ಯರ್ಥವಾಗುವ ತನಕವೂ ಸಂಪೂರ್ಣ ಲೇನ್ ಎಳೆಯಲು ಸಾಧ್ಯವಿಲ್ಲ ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ.
ಒಂದು ವೇಳೆ ಎಲೆಕ್ಟ್ರಿಕಲ್ ರೈಲು ಓಡಾಡಬೇಕು ಅಂದರೆ ಮೈಸೂರಿನಿಂದ ಮಂಡಕಳ್ಳಿ, ಚಾಮರಾಜನಗರ ಕಡೆಯಿಂದ ಬರುವ ರೈಲು ಕಡಕೊಳ ಬಳಿ ಇಂಜಿನ್ ಬದಲಿಸಿ ಓಡಾಡಬೇಕಾಗಿದೆ. ಎರಡು ಕಡೆಗಳಿಂದಲೂ ಇಂಜಿನ್ ಬದಲಿಸುವುದಕ್ಕೆ ನಿಲುಗಡೆ ಮಾಡಬೇಕಿರುವ ಕಾರಣ ಅರ್ಧ ಗಂಟೆ ಸಮಯ ಬೇಕಾಗುವ ಕಾರಣ ಅಂತಹ ಸಾಹಸಕ್ಕೆ ಕೈ ಹಾಕದಿರಲು ತೀರ್ಮಾನಿಸಿದ್ದಾರೆ.
ಹೆಚ್ಚುವರಿ ಭೂಮಿ ಸ್ವಾಧೀನ: ರನ್ ವೇ ವಿಸ್ತರಣೆಗೆ ಅಗತ್ಯ ಇರುವ 247ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಿರುವ ಕಾರಣ ಮತ್ತೆ ಹೆಚ್ಚುವರಿಯಾಗಿ 50 ಎಕರೆ ಸ್ವಾಧೀನ ಮಾಡಿಕೊಂಡರೆ ಪರ್ಯಾಯ ವ್ಯವಸ್ಥೆ ಮಾಡಬಹುದೆಂಬುದು ಅಧಿಕಾರಿಗಳ ಆಲೋಚನೆಯಾಗಿದೆ. ಈಗಾಗಲೇ ಭೂ ಸ್ವಾಧೀನಕ್ಕೆ ರಾಜ್ಯ ಸರ್ಕಾರದಿಂದ ಕೆಐಎಡಿಬಿಗೆ ೧೦೦ ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಹೆಚ್ಚುವರಿ ಭೂಮಿಗೆ 50 ಕೋಟಿ ರೂ. ಕೊಡುವಂತೆ ಮತ್ತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಒಂದೂವರೆ ಕಿ.ಮೀ.ನಷ್ಟು ವಿದ್ಯುತ್ ಲೇನ್ ಅಳವಡಿಸುವವರೆಗೆ ರೈಲು ಓಡಾಡಲು ಸಾಧ್ಯವಿಲ್ಲ. ಪರ್ಯಾಯ ವ್ಯವಸ್ಥೆ ಅಂದರೆ ಒಂದೂವರೆ ಕಿ.ಮೀ ಇಂಜಿನ್ ಬದಲಿಸುವಂತೆ ಅಥವಾ ಬೇರೆ ಏನಾದರೂ ಮಾಡಬಹುದೇ ಎನ್ನುವ ಬಗ್ಗೆ ಮುಂದಿನ ದಿನಗಳಲ್ಲಿ ಚಿಂತಿಸಲಾಗುವುದು ಎಂದು ಹೇಳಿದ್ದಾರೆ.
ಮೈಸೂರು-ಚಾಮರಾಜನಗರ ನಡುವೆ ಎಲೆಕ್ಟ್ರಿಕಲ್ ರೈಲು ಸಂಚಾರಕ್ಕೆ ಒಂದೂವರೆ ಕಿ.ಮೀ.ನಷ್ಟು ಉಂಟಾಗಿರುವ ತೊಡಕು ನಿವಾರಣೆಯಾದರೆ ಸಂಪೂರ್ಣ ಮಾಡುತ್ತೇವೆ. ಪರ್ಯಾಯ ವ್ಯವಸ್ಥೆ ಬಗ್ಗೆ ಚರ್ಚೆ ಮಾಡುವವರೆಗೆ ಎಲೆಕ್ಟ್ರಿಕಲ್ ರೈಲು ಓಡಾಡುವುದಕ್ಕೆ ವಿಳಂಬವಾಗಲಿದೆ.
-ಪ್ರತಾಪ್ ಸಿಂಹ, ಸಂಸದರು.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…
ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…
ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು…
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…