ಜಿಲ್ಲೆಗಳು

ಮೈಸೂರು-ಚಾ.ನಗರ ನಡುವೆ ಸದ್ಯಕ್ಕಿಲ್ಲ ವಿದ್ಯುತ್ ಚಾಲಿತ ರೈಲು

ವಿಮಾನ ನಿಲ್ದಾಣ ರನ್‌ವೇ ವಿಸ್ತರಣೆ ವೇಳೆ ಹೆಚ್ಚುವರಿ ಭೂಮಿ ವಶಕ್ಕೆ ಪರ್ಯಾಯ ಚಿಂತನೆ 

 ಮೈಸೂರು: ಹಲವು ವರ್ಷಗಳಿಂದ ಅವಳಿ ಜಿಲ್ಲೆಗಳ ಜನರು ಭಾರೀ ನಿರೀಕ್ಷೆಯೊಂದಿಗೆ ಕಾದಿದ್ದ ಮೈಸೂರು-ಚಾಮರಾಜನಗರ ನಡುವಿನ ವಿದ್ಯುತ್ ಚಾಲಿತ ರೈಲು ಸಂಚಾರ ಸದ್ಯಕ್ಕೆ ಆರಂಭವಾಗುವ ಲಕ್ಷಣಗಳಿಲ್ಲ.
ಮೈಸೂರು ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಂತೆ ಹಾದು ಹೋಗಿರುವ ರೈಲ್ವೆ ಹಳಿಯಲ್ಲಿ ಒಂದೂವರೆ ಕಿಲೋ ಮೀಟರ್ ವಿದ್ಯುತ್ ಲೇನ್ ಎಳೆಯಲು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅನುಮತಿ ಕೊಡದ ಕಾರಣ ವಿದ್ಯುತ್ ಚಾಲಿತ ರೈಲು ಸಂಚಾರ ವಿಳಂಬಕ್ಕೆ ಕಾರಣವಾಗಿದೆ. ಹೀಗಾಗಿ, ವಿಮಾನ ನಿಲ್ದಾಣ ರನ್‌ವೇ ವಿಸ್ತರಣೆ ಮಾಡಲು ಅಗತ್ಯವಿರುವ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವಾಗ ಹೆಚ್ಚುವರಿ ಭೂಮಿ ಪಡೆದುಕೊಂಡ ನಂತರ ಪರ್ಯಾಯ ಆಲೋಚನೆ ಮಾಡಲು ರೈಲ್ವೆ ಇಲಾಖೆ ಹಿರಿಯ ಅಧಿಕಾರಿಗಳು ಮುಂದಾಗಿದ್ದಾರೆ.
ಮೈಸೂರು-ಚಾಮರಾಜನಗರ ನಡುವೆ ಡಿಸೇಲ್ ಚಾಲಿತ ರೈಲುಗಳು ಸಂಚರಿಸುತ್ತಿದ್ದು, ಎಲೆಕ್ಟ್ರಿಕಲ್ ರೈಲುಗಳ ಓಡಾಟಕ್ಕೆ ಈಗಾಗಲೇ ವಿದ್ಯುತ್ ಲೇನ್ ಅಳವಡಿಸಲಾಗಿದೆ. ವಿದ್ಯುತ್ ಲೇನ್ ಅಲ್ಲದೆ ಎರಡು ಬದಿಗಳಲ್ಲಿ ಸಾರ್ವಜನಿಕರು, ದನಕರುಗಳು, ವಾಹನಗಳು ನುಗ್ಗದಂತೆ ತಡೆಗೋಡೆ ನಿರ್ಮಾಣ ಮಾಡಿಕೊಂಡು ಸಜ್ಜು ಮಾಡಲಾಗಿತ್ತು. ಆದರೆ, ಮೈಸೂರು ವಿಮಾನ ನಿಲ್ದಾಣ ಬಳಿ ಒಂದೂವರೆ ಕಿ.ಮೀ ನಷ್ಟು ವಿದ್ಯುತ್ ಲೇನ್ ಅಳವಡಿಸಲು ಪ್ರಾಧಿಕಾರವು ಒಪ್ಪಿಗೆ ಕೊಡದ ಕಾರಣ ಬಾಕಿ ಉಳಿದಿದೆ. ರನ್ ವೇ ವಿಸ್ತರಣೆ ಮಾಡಿದ ನಂತರ ವಿಮಾನ ಕೆಳಗಿಳಿಯುವಾಗ ಅಪಾಯ ಉಂಟಾಗುವ ಸಾಧ್ಯತೆಯಿದೆ ಎನ್ನುವ ವಿಚಾರವನ್ನು ಮುಂದಿಟ್ಟುಕೊಂಡು ಅನುಮತಿ ಕೊಡಲು ನಿರಾಕರಣೆ ಮಾಡಿದ್ದಾರೆ. ಹಾಗಾಗಿ ಈ ಸಮಸ್ಯೆ ಇತ್ಯರ್ಥವಾಗುವ ತನಕವೂ ಸಂಪೂರ್ಣ ಲೇನ್ ಎಳೆಯಲು ಸಾಧ್ಯವಿಲ್ಲ ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ.
ಒಂದು ವೇಳೆ ಎಲೆಕ್ಟ್ರಿಕಲ್ ರೈಲು ಓಡಾಡಬೇಕು ಅಂದರೆ ಮೈಸೂರಿನಿಂದ ಮಂಡಕಳ್ಳಿ, ಚಾಮರಾಜನಗರ ಕಡೆಯಿಂದ ಬರುವ ರೈಲು ಕಡಕೊಳ ಬಳಿ ಇಂಜಿನ್ ಬದಲಿಸಿ ಓಡಾಡಬೇಕಾಗಿದೆ. ಎರಡು ಕಡೆಗಳಿಂದಲೂ ಇಂಜಿನ್ ಬದಲಿಸುವುದಕ್ಕೆ ನಿಲುಗಡೆ ಮಾಡಬೇಕಿರುವ ಕಾರಣ ಅರ್ಧ ಗಂಟೆ ಸಮಯ ಬೇಕಾಗುವ ಕಾರಣ ಅಂತಹ ಸಾಹಸಕ್ಕೆ ಕೈ ಹಾಕದಿರಲು ತೀರ್ಮಾನಿಸಿದ್ದಾರೆ.
ಹೆಚ್ಚುವರಿ ಭೂಮಿ ಸ್ವಾಧೀನ: ರನ್ ವೇ ವಿಸ್ತರಣೆಗೆ ಅಗತ್ಯ ಇರುವ 247ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಿರುವ ಕಾರಣ ಮತ್ತೆ ಹೆಚ್ಚುವರಿಯಾಗಿ 50 ಎಕರೆ ಸ್ವಾಧೀನ ಮಾಡಿಕೊಂಡರೆ ಪರ್ಯಾಯ ವ್ಯವಸ್ಥೆ ಮಾಡಬಹುದೆಂಬುದು ಅಧಿಕಾರಿಗಳ ಆಲೋಚನೆಯಾಗಿದೆ. ಈಗಾಗಲೇ ಭೂ ಸ್ವಾಧೀನಕ್ಕೆ ರಾಜ್ಯ ಸರ್ಕಾರದಿಂದ ಕೆಐಎಡಿಬಿಗೆ ೧೦೦ ಕೋಟಿ ರೂ. ಅನುದಾನ  ಬಿಡುಗಡೆಯಾಗಿದೆ. ಹೆಚ್ಚುವರಿ ಭೂಮಿಗೆ 50 ಕೋಟಿ ರೂ. ಕೊಡುವಂತೆ ಮತ್ತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಒಂದೂವರೆ ಕಿ.ಮೀ.ನಷ್ಟು ವಿದ್ಯುತ್ ಲೇನ್ ಅಳವಡಿಸುವವರೆಗೆ ರೈಲು ಓಡಾಡಲು ಸಾಧ್ಯವಿಲ್ಲ. ಪರ್ಯಾಯ ವ್ಯವಸ್ಥೆ ಅಂದರೆ ಒಂದೂವರೆ ಕಿ.ಮೀ ಇಂಜಿನ್ ಬದಲಿಸುವಂತೆ ಅಥವಾ ಬೇರೆ ಏನಾದರೂ ಮಾಡಬಹುದೇ ಎನ್ನುವ ಬಗ್ಗೆ ಮುಂದಿನ ದಿನಗಳಲ್ಲಿ ಚಿಂತಿಸಲಾಗುವುದು ಎಂದು ಹೇಳಿದ್ದಾರೆ.


ಮೈಸೂರು-ಚಾಮರಾಜನಗರ ನಡುವೆ ಎಲೆಕ್ಟ್ರಿಕಲ್ ರೈಲು ಸಂಚಾರಕ್ಕೆ ಒಂದೂವರೆ ಕಿ.ಮೀ.ನಷ್ಟು ಉಂಟಾಗಿರುವ ತೊಡಕು ನಿವಾರಣೆಯಾದರೆ ಸಂಪೂರ್ಣ ಮಾಡುತ್ತೇವೆ. ಪರ್ಯಾಯ ವ್ಯವಸ್ಥೆ ಬಗ್ಗೆ ಚರ್ಚೆ ಮಾಡುವವರೆಗೆ ಎಲೆಕ್ಟ್ರಿಕಲ್ ರೈಲು ಓಡಾಡುವುದಕ್ಕೆ ವಿಳಂಬವಾಗಲಿದೆ.
-ಪ್ರತಾಪ್ ಸಿಂಹ, ಸಂಸದರು.

andolanait

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

6 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

6 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

7 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

7 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

7 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

7 hours ago