ಜಿಲ್ಲೆಗಳು

ಮೈಸೂರು-ಚಾ.ನಗರ ನಡುವೆ ಸದ್ಯಕ್ಕಿಲ್ಲ ವಿದ್ಯುತ್ ಚಾಲಿತ ರೈಲು

ವಿಮಾನ ನಿಲ್ದಾಣ ರನ್‌ವೇ ವಿಸ್ತರಣೆ ವೇಳೆ ಹೆಚ್ಚುವರಿ ಭೂಮಿ ವಶಕ್ಕೆ ಪರ್ಯಾಯ ಚಿಂತನೆ 

 ಮೈಸೂರು: ಹಲವು ವರ್ಷಗಳಿಂದ ಅವಳಿ ಜಿಲ್ಲೆಗಳ ಜನರು ಭಾರೀ ನಿರೀಕ್ಷೆಯೊಂದಿಗೆ ಕಾದಿದ್ದ ಮೈಸೂರು-ಚಾಮರಾಜನಗರ ನಡುವಿನ ವಿದ್ಯುತ್ ಚಾಲಿತ ರೈಲು ಸಂಚಾರ ಸದ್ಯಕ್ಕೆ ಆರಂಭವಾಗುವ ಲಕ್ಷಣಗಳಿಲ್ಲ.
ಮೈಸೂರು ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಂತೆ ಹಾದು ಹೋಗಿರುವ ರೈಲ್ವೆ ಹಳಿಯಲ್ಲಿ ಒಂದೂವರೆ ಕಿಲೋ ಮೀಟರ್ ವಿದ್ಯುತ್ ಲೇನ್ ಎಳೆಯಲು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅನುಮತಿ ಕೊಡದ ಕಾರಣ ವಿದ್ಯುತ್ ಚಾಲಿತ ರೈಲು ಸಂಚಾರ ವಿಳಂಬಕ್ಕೆ ಕಾರಣವಾಗಿದೆ. ಹೀಗಾಗಿ, ವಿಮಾನ ನಿಲ್ದಾಣ ರನ್‌ವೇ ವಿಸ್ತರಣೆ ಮಾಡಲು ಅಗತ್ಯವಿರುವ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವಾಗ ಹೆಚ್ಚುವರಿ ಭೂಮಿ ಪಡೆದುಕೊಂಡ ನಂತರ ಪರ್ಯಾಯ ಆಲೋಚನೆ ಮಾಡಲು ರೈಲ್ವೆ ಇಲಾಖೆ ಹಿರಿಯ ಅಧಿಕಾರಿಗಳು ಮುಂದಾಗಿದ್ದಾರೆ.
ಮೈಸೂರು-ಚಾಮರಾಜನಗರ ನಡುವೆ ಡಿಸೇಲ್ ಚಾಲಿತ ರೈಲುಗಳು ಸಂಚರಿಸುತ್ತಿದ್ದು, ಎಲೆಕ್ಟ್ರಿಕಲ್ ರೈಲುಗಳ ಓಡಾಟಕ್ಕೆ ಈಗಾಗಲೇ ವಿದ್ಯುತ್ ಲೇನ್ ಅಳವಡಿಸಲಾಗಿದೆ. ವಿದ್ಯುತ್ ಲೇನ್ ಅಲ್ಲದೆ ಎರಡು ಬದಿಗಳಲ್ಲಿ ಸಾರ್ವಜನಿಕರು, ದನಕರುಗಳು, ವಾಹನಗಳು ನುಗ್ಗದಂತೆ ತಡೆಗೋಡೆ ನಿರ್ಮಾಣ ಮಾಡಿಕೊಂಡು ಸಜ್ಜು ಮಾಡಲಾಗಿತ್ತು. ಆದರೆ, ಮೈಸೂರು ವಿಮಾನ ನಿಲ್ದಾಣ ಬಳಿ ಒಂದೂವರೆ ಕಿ.ಮೀ ನಷ್ಟು ವಿದ್ಯುತ್ ಲೇನ್ ಅಳವಡಿಸಲು ಪ್ರಾಧಿಕಾರವು ಒಪ್ಪಿಗೆ ಕೊಡದ ಕಾರಣ ಬಾಕಿ ಉಳಿದಿದೆ. ರನ್ ವೇ ವಿಸ್ತರಣೆ ಮಾಡಿದ ನಂತರ ವಿಮಾನ ಕೆಳಗಿಳಿಯುವಾಗ ಅಪಾಯ ಉಂಟಾಗುವ ಸಾಧ್ಯತೆಯಿದೆ ಎನ್ನುವ ವಿಚಾರವನ್ನು ಮುಂದಿಟ್ಟುಕೊಂಡು ಅನುಮತಿ ಕೊಡಲು ನಿರಾಕರಣೆ ಮಾಡಿದ್ದಾರೆ. ಹಾಗಾಗಿ ಈ ಸಮಸ್ಯೆ ಇತ್ಯರ್ಥವಾಗುವ ತನಕವೂ ಸಂಪೂರ್ಣ ಲೇನ್ ಎಳೆಯಲು ಸಾಧ್ಯವಿಲ್ಲ ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ.
ಒಂದು ವೇಳೆ ಎಲೆಕ್ಟ್ರಿಕಲ್ ರೈಲು ಓಡಾಡಬೇಕು ಅಂದರೆ ಮೈಸೂರಿನಿಂದ ಮಂಡಕಳ್ಳಿ, ಚಾಮರಾಜನಗರ ಕಡೆಯಿಂದ ಬರುವ ರೈಲು ಕಡಕೊಳ ಬಳಿ ಇಂಜಿನ್ ಬದಲಿಸಿ ಓಡಾಡಬೇಕಾಗಿದೆ. ಎರಡು ಕಡೆಗಳಿಂದಲೂ ಇಂಜಿನ್ ಬದಲಿಸುವುದಕ್ಕೆ ನಿಲುಗಡೆ ಮಾಡಬೇಕಿರುವ ಕಾರಣ ಅರ್ಧ ಗಂಟೆ ಸಮಯ ಬೇಕಾಗುವ ಕಾರಣ ಅಂತಹ ಸಾಹಸಕ್ಕೆ ಕೈ ಹಾಕದಿರಲು ತೀರ್ಮಾನಿಸಿದ್ದಾರೆ.
ಹೆಚ್ಚುವರಿ ಭೂಮಿ ಸ್ವಾಧೀನ: ರನ್ ವೇ ವಿಸ್ತರಣೆಗೆ ಅಗತ್ಯ ಇರುವ 247ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಿರುವ ಕಾರಣ ಮತ್ತೆ ಹೆಚ್ಚುವರಿಯಾಗಿ 50 ಎಕರೆ ಸ್ವಾಧೀನ ಮಾಡಿಕೊಂಡರೆ ಪರ್ಯಾಯ ವ್ಯವಸ್ಥೆ ಮಾಡಬಹುದೆಂಬುದು ಅಧಿಕಾರಿಗಳ ಆಲೋಚನೆಯಾಗಿದೆ. ಈಗಾಗಲೇ ಭೂ ಸ್ವಾಧೀನಕ್ಕೆ ರಾಜ್ಯ ಸರ್ಕಾರದಿಂದ ಕೆಐಎಡಿಬಿಗೆ ೧೦೦ ಕೋಟಿ ರೂ. ಅನುದಾನ  ಬಿಡುಗಡೆಯಾಗಿದೆ. ಹೆಚ್ಚುವರಿ ಭೂಮಿಗೆ 50 ಕೋಟಿ ರೂ. ಕೊಡುವಂತೆ ಮತ್ತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಒಂದೂವರೆ ಕಿ.ಮೀ.ನಷ್ಟು ವಿದ್ಯುತ್ ಲೇನ್ ಅಳವಡಿಸುವವರೆಗೆ ರೈಲು ಓಡಾಡಲು ಸಾಧ್ಯವಿಲ್ಲ. ಪರ್ಯಾಯ ವ್ಯವಸ್ಥೆ ಅಂದರೆ ಒಂದೂವರೆ ಕಿ.ಮೀ ಇಂಜಿನ್ ಬದಲಿಸುವಂತೆ ಅಥವಾ ಬೇರೆ ಏನಾದರೂ ಮಾಡಬಹುದೇ ಎನ್ನುವ ಬಗ್ಗೆ ಮುಂದಿನ ದಿನಗಳಲ್ಲಿ ಚಿಂತಿಸಲಾಗುವುದು ಎಂದು ಹೇಳಿದ್ದಾರೆ.


ಮೈಸೂರು-ಚಾಮರಾಜನಗರ ನಡುವೆ ಎಲೆಕ್ಟ್ರಿಕಲ್ ರೈಲು ಸಂಚಾರಕ್ಕೆ ಒಂದೂವರೆ ಕಿ.ಮೀ.ನಷ್ಟು ಉಂಟಾಗಿರುವ ತೊಡಕು ನಿವಾರಣೆಯಾದರೆ ಸಂಪೂರ್ಣ ಮಾಡುತ್ತೇವೆ. ಪರ್ಯಾಯ ವ್ಯವಸ್ಥೆ ಬಗ್ಗೆ ಚರ್ಚೆ ಮಾಡುವವರೆಗೆ ಎಲೆಕ್ಟ್ರಿಕಲ್ ರೈಲು ಓಡಾಡುವುದಕ್ಕೆ ವಿಳಂಬವಾಗಲಿದೆ.
-ಪ್ರತಾಪ್ ಸಿಂಹ, ಸಂಸದರು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

4 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

5 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

20 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

23 hours ago