ಜಿಲ್ಲೆಗಳು

ಮೈಸೂರಿನ ಚಾಮುಂಡೇಶ್ವರಿ ದರ್ಶನ ಪಡೆಯಲು ವಸ್ತ್ರ ಸಂಹಿತೆ ಜಾರಿಗಾಗಿ ಮನವಿ

ಮೈಸೂರು :  ಚಾಮುಂಡೇಶ್ವರಿ ದರ್ಶನಕ್ಕೆ ಪ್ರತಿಯೊಬ್ಬರೂ ಸಾಂಪ್ರದಾಯಿಕ ಉಡುಗೆಗಳನ್ನೇ ತೊಟ್ಟು ಬರಬೇಕೆಂದು ಒತ್ತಾಯಿಸಿ, ಸರ್ವ ಅರ್ಜತೆ ಫೌಂಡೇಶನ್ ಹಾಗೂ ಇತರೆ ಸಂಘಟನೆಗಳು ಚಾಮುಂಡಿ ಬೆಟ್ಟದ ಮುಖ್ಯ ಕಾರ್ಯದರ್ಶಿ ಗೋವಿಂದ್ ರಾಜ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಚಾಮುಂಡಿ ಅಮ್ಮನವರ ದರ್ಶನಕ್ಕೆ ದೇಶ ವಿದೇಶಗಳಿಂದ ಪ್ರವಾಸಿಗರು ಹಾಗೂ ಭಕ್ತರು ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಮೈಸೂರು ಅರಸರ ಕೊಡುಗೆಗಳಿಂದ ಮೈಸೂರು ಪ್ರವಾಸಿ ತಾಣವಾಗಿ ಪ್ರಸಿದ್ಧಿ ಪಡೆದಿದೆ. ಚಾಮುಂಡೇಶ್ವರಿ ಬೆಟ್ಟ ಧಾರ್ಮಿಕ ಕೇಂದ್ರವಾಗಿದ್ದು, ದೇಶದ ಶಕ್ತಿ ಪೀಠಗಳಲ್ಲೊಂದು. ಆದ್ದರಿಂದ ಇಲ್ಲಿಗೆ ಬರುವ ಭಕ್ತರಿಗೆ ವಸ್ತ್ರಸಂಹಿತೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿದ್ದಾರೆ.ಉಡುಪಿ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೇರಳದ ಗುರುವಾಯೂರ್​ನಲ್ಲಿ ಇರುವಂತೆ ವಸ್ತ್ರ ಸಂಹಿತೆಯನ್ನು ಎಲ್ಲರೂ ಪಾಲಿಸಬೇಕು. ಪುರುಷರು ಪಂಚೆ ಅಥವಾ ಪ್ಯಾಂಟ್ ಶರ್ಟ್ ಧರಿಸಿ ಹಾಗೂ ಮಹಿಳೆಯರು ಸೀರೆ ಅಥವಾ ಚೂಡಿದಾರ್‌ಗಳನ್ನು ಹಾಕಿಕೊಂಡು ಬರುವಂತೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಸರ್ವ ಅರ್ಜಿತೆ ಫೌಂಡೇಶನ್ ಅಧ್ಯಕ್ಷರಾದ ಪದ್ಮ ಮತ್ತಿತರರು ಉಪಸ್ಥಿತರಿದ್ದರು.

andolanait

Recent Posts

ಕೊಲೆ | ಶವವನ್ನು ಪಾಳು ಮನೆ ಮುಂದೆ ಎಸೆದು ಹೋದ ದುಷ್ಕರ್ಮಿ

ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…

5 hours ago

ಟಿ-20 ವಿಶ್ವಕಪ್‌ : ಇಟಲಿ ಮಣಿಸಿ ದಾಖಲೆ ಬರೆದ ಸ್ಕಾಟ್ಲೆಂಡ್‌

ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…

5 hours ago

ಈ ಊರಲ್ಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದೆ ಬೀಳುತ್ತೆ 30 ಸಾವಿರ ದಂಡ

ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…

5 hours ago

2027 ಸೆ.3ಕ್ಕೆ ಅಟ್ಲಾಂಟಾದಲ್ಲಿ 9ನೇ ನಾವಿಕ ವಿಶ್ವ ಸಮ್ಮೇಳನ

ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…

6 hours ago

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ ; ₹11,887 ಕೋಟಿ ಹೂಡಿಕೆ

ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…

6 hours ago

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

7 hours ago