ಮೈಸೂರು : ಚಾಮುಂಡೇಶ್ವರಿ ದರ್ಶನಕ್ಕೆ ಪ್ರತಿಯೊಬ್ಬರೂ ಸಾಂಪ್ರದಾಯಿಕ ಉಡುಗೆಗಳನ್ನೇ ತೊಟ್ಟು ಬರಬೇಕೆಂದು ಒತ್ತಾಯಿಸಿ, ಸರ್ವ ಅರ್ಜತೆ ಫೌಂಡೇಶನ್ ಹಾಗೂ ಇತರೆ ಸಂಘಟನೆಗಳು ಚಾಮುಂಡಿ ಬೆಟ್ಟದ ಮುಖ್ಯ ಕಾರ್ಯದರ್ಶಿ ಗೋವಿಂದ್ ರಾಜ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಚಾಮುಂಡಿ ಅಮ್ಮನವರ ದರ್ಶನಕ್ಕೆ ದೇಶ ವಿದೇಶಗಳಿಂದ ಪ್ರವಾಸಿಗರು ಹಾಗೂ ಭಕ್ತರು ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಮೈಸೂರು ಅರಸರ ಕೊಡುಗೆಗಳಿಂದ ಮೈಸೂರು ಪ್ರವಾಸಿ ತಾಣವಾಗಿ ಪ್ರಸಿದ್ಧಿ ಪಡೆದಿದೆ. ಚಾಮುಂಡೇಶ್ವರಿ ಬೆಟ್ಟ ಧಾರ್ಮಿಕ ಕೇಂದ್ರವಾಗಿದ್ದು, ದೇಶದ ಶಕ್ತಿ ಪೀಠಗಳಲ್ಲೊಂದು. ಆದ್ದರಿಂದ ಇಲ್ಲಿಗೆ ಬರುವ ಭಕ್ತರಿಗೆ ವಸ್ತ್ರಸಂಹಿತೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿದ್ದಾರೆ.ಉಡುಪಿ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೇರಳದ ಗುರುವಾಯೂರ್ನಲ್ಲಿ ಇರುವಂತೆ ವಸ್ತ್ರ ಸಂಹಿತೆಯನ್ನು ಎಲ್ಲರೂ ಪಾಲಿಸಬೇಕು. ಪುರುಷರು ಪಂಚೆ ಅಥವಾ ಪ್ಯಾಂಟ್ ಶರ್ಟ್ ಧರಿಸಿ ಹಾಗೂ ಮಹಿಳೆಯರು ಸೀರೆ ಅಥವಾ ಚೂಡಿದಾರ್ಗಳನ್ನು ಹಾಕಿಕೊಂಡು ಬರುವಂತೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಸರ್ವ ಅರ್ಜಿತೆ ಫೌಂಡೇಶನ್ ಅಧ್ಯಕ್ಷರಾದ ಪದ್ಮ ಮತ್ತಿತರರು ಉಪಸ್ಥಿತರಿದ್ದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…