ಮೈಸೂರು : ಚಾಮುಂಡೇಶ್ವರಿ ದರ್ಶನಕ್ಕೆ ಪ್ರತಿಯೊಬ್ಬರೂ ಸಾಂಪ್ರದಾಯಿಕ ಉಡುಗೆಗಳನ್ನೇ ತೊಟ್ಟು ಬರಬೇಕೆಂದು ಒತ್ತಾಯಿಸಿ, ಸರ್ವ ಅರ್ಜತೆ ಫೌಂಡೇಶನ್ ಹಾಗೂ ಇತರೆ ಸಂಘಟನೆಗಳು ಚಾಮುಂಡಿ ಬೆಟ್ಟದ ಮುಖ್ಯ ಕಾರ್ಯದರ್ಶಿ ಗೋವಿಂದ್ ರಾಜ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಚಾಮುಂಡಿ ಅಮ್ಮನವರ ದರ್ಶನಕ್ಕೆ ದೇಶ ವಿದೇಶಗಳಿಂದ ಪ್ರವಾಸಿಗರು ಹಾಗೂ ಭಕ್ತರು ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಮೈಸೂರು ಅರಸರ ಕೊಡುಗೆಗಳಿಂದ ಮೈಸೂರು ಪ್ರವಾಸಿ ತಾಣವಾಗಿ ಪ್ರಸಿದ್ಧಿ ಪಡೆದಿದೆ. ಚಾಮುಂಡೇಶ್ವರಿ ಬೆಟ್ಟ ಧಾರ್ಮಿಕ ಕೇಂದ್ರವಾಗಿದ್ದು, ದೇಶದ ಶಕ್ತಿ ಪೀಠಗಳಲ್ಲೊಂದು. ಆದ್ದರಿಂದ ಇಲ್ಲಿಗೆ ಬರುವ ಭಕ್ತರಿಗೆ ವಸ್ತ್ರಸಂಹಿತೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿದ್ದಾರೆ.ಉಡುಪಿ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೇರಳದ ಗುರುವಾಯೂರ್ನಲ್ಲಿ ಇರುವಂತೆ ವಸ್ತ್ರ ಸಂಹಿತೆಯನ್ನು ಎಲ್ಲರೂ ಪಾಲಿಸಬೇಕು. ಪುರುಷರು ಪಂಚೆ ಅಥವಾ ಪ್ಯಾಂಟ್ ಶರ್ಟ್ ಧರಿಸಿ ಹಾಗೂ ಮಹಿಳೆಯರು ಸೀರೆ ಅಥವಾ ಚೂಡಿದಾರ್ಗಳನ್ನು ಹಾಕಿಕೊಂಡು ಬರುವಂತೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಸರ್ವ ಅರ್ಜಿತೆ ಫೌಂಡೇಶನ್ ಅಧ್ಯಕ್ಷರಾದ ಪದ್ಮ ಮತ್ತಿತರರು ಉಪಸ್ಥಿತರಿದ್ದರು.
ಎಚ್.ಡಿ.ಕೋಟೆ: ಕೇರಳ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ…
ನವದೆಹಲಿ: ಇಂದಿನಿಂದ ಆರು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಇಂಡೋನೇಷ್ಯಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ಪ್ರವಾಸ ಕೈಗೊಂಡಿದ್ದಾರೆ. ಈ…
ಉದ್ಯಮವಾಗಿಯೂ ಬೆಳೆಯುವತ್ತ ಯೋಗ ಮಕ್ಕಳು ವಯೋವೃದ್ಧರನ್ನೂ ಸೆಳೆಯುವ ಯೋಗ ಯೋಗ ದೈಹಿಕ ಬಲ ಮತ್ತು ನಮ್ಯತೆ ಹೆಚ್ಚಿಸುವಲ್ಲಿ ಸಹಕಾರಿ ನಮಗೆ…
ಎಚ್.ಎಸ್.ದಿನೇಶ್ ಕುಮಾರ್ ಜಾಗತಿಕ ತಾಪಮಾನ ವಿಪರೀತ ಹೆಚ್ಚಳವಾಗುತ್ತಿದೆ. ಈ ಸಂದರ್ಭದಲ್ಲಿ ಪರಿಸರ ಸಮತೋಲನ ಕಾಪಾಡಿಕೊಳ್ಳದಿದ್ದರೆ ಇಡೀ ಮಾನವ ಕುಲವೇ ಸಂಕಷ್ಟಕ್ಕೀಡಾಗಬೇಕಾಗುತ್ತದೆ.…
ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್ ಕಡೆಗೆ ವಾಲುವ ಆತಂಕ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಯಡಿಯೂರಪ್ಪ ಚಿಂತೆಯಲ್ಲಿದ್ದಾರೆ. ಅವರ ಚಿಂತೆಗೆ ಕಾರಣ…
ʻಬದುಕಿ ನಿರ್ಗಮಿಸುವುದಾದರೆ ಕೋಟಿಯವರಂತೆ ಬಾಳಿ ಹೊರಡಬೇಕುʼ ಕನ್ನಡದ ಪಾಪು, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪನವರು ಸಂಪಾದಕರಾಗಿದ್ದ ಧಾರವಾಡದ ‘ವಿಶ್ವವಾಣಿ’ ಪತ್ರಿಕೆಯ…