ಎಚ್.ಎಸ್.ದಿನೇಶ್ಕುಮಾರ್
ಮೈಸೂರು: ದಸರಾದಲ್ಲಿ ಈ ಬಾರಿ ಶಾಲಾ ಮಕ್ಕಳನ್ನು ಒಳಗೊಂಡ ಮಕ್ಕಳ ದಸರಾ ಸೆ.29ರಿಂದ ಎರಡು ದಿನ ನಡೆಯಲಿದ್ದು, ಮಕ್ಕಳೇ ನಡೆಸಿಕೊಡಲಿರುವ ವಿವಿಧ ಕಾರ್ಯಕ್ರಮಗಳು ದಸರೆಗೆ ಮೆರುಗು ನೀಡಲಿವೆ.
ಮಕ್ಕಳ ದಸರಾ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಶಾಲೆಗಳ 7 ರಿಂದ 10ನೇ ತರಗತಿ ವರೆಗಿನ 1 ಸಾವಿರ ಮಕ್ಕಳು ತಮ್ಮ ಪ್ರತಿಭೆ ಪ್ರದರ್ಶಿಸಲಿದ್ದಾರೆ. ಜಿಲ್ಲೆಯಲ್ಲಿ 2 ಲಕ್ಷ ಮಕ್ಕಳಿದ್ದು, ಮಕ್ಕಳ ಪ್ರತಿಭೆಯನ್ನು ಮಾನದಂಡವಾಗಿಟ್ಟುಕೊಂಡು ಅಧಿಕಾರಿಗಳು ಹಾಗೂ ಶಿಕ್ಷಕರು 1 ಸಾವಿರ ಮಕ್ಕಳನ್ನು ಮಕ್ಕಳ ದಸರಾ ಕಾರ್ಯಕ್ರಮಕ್ಕೆ ಆ್ಂಕೆು ಮಾಡಲಿದ್ದಾರೆ.
ಜೂನಿಯರ್ ಮಹಾರಾಣಿ ಕಾಲೇಜಿನ ಆವರಣದಲ್ಲಿ ಎರಡು ದಿನಗಳ ಕಾಲ ನಡೆಯುವ ಮಕ್ಕಳ ದಸರಾದಲ್ಲಿ ಸಂಗೀತ, ನೃತ್ಯ, ಚರ್ಚಾ ಸ್ಪರ್ಧೆ, ಆಶುಭಾಷಣ, ಜಾನಪದ, ಚಲನಚಿತ್ರಗೀತೆ, ರಸಪ್ರಶ್ನೆ, ಪ್ರಬಂಧ, ವಿವಿಧ ವೇಷಭೂಷಣ ಸ್ಪರ್ಧೆ ಹೀಗೆ 31 ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಇದರೊಂದಿಗೆ ದೇಸಿ ಆಟಗಳಾದ ಲಗ್ಗೋರಿ, ಬುಗುರಿ, ಚೌಕಾಬಾರ, ಕುಂಟೆಬಿಲ್ಲೆ, ಹಗ್ಗಜಗ್ಗಾಟ ಸ್ಪರ್ಧೆಗಳು ನಡೆಯಲಿವೆ.
ವಿಶೇಷಚೇತನ ಮಕ್ಕಳು ಭಾಗಿ: ವಿಶೇಷಚೇತನ ಮಕ್ಕಳಿಗಾಗಿ ವೇಶಭೂಷಣ ಸ್ಪರ್ಧೆ, ನೃತ್ಯ ಪ್ರದರ್ಶನ ಏರ್ಪಡಿಸಲಾಗಿದೆ.
ಹಾಡಿ ಮಕ್ಕಳಿಂದ ಕಾರ್ಯಕ್ರಮ: ಮಾವುತರು ಹಾಗೂ ಕಾವಾಡಿಗಳ ಮಕ್ಕಳನ್ನೂ ಮಕ್ಕಳ ದಸರಾದಲ್ಲಿ ಜೊತೆಯಾಗಿಸಿಕೊಳ್ಳಲಾಗಿದೆ. ಅವರಿಂದ ಸೆ.29ರ ಮದ್ಯಾಹ್ನ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ.
9 ಸ್ಟಾಲ್ಗಳು: ಜಗನ್ಮೋಹನ ಅರಮನೆ ಆವರಣದಲ್ಲಿ ಶಿಕ್ಷಣ ಇಲಾಖೆ ವತಿಯಿಂದ 9 ಮಳಿಗೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಅಲ್ಲಿ ಮಕ್ಕಳಿಗಾಗಿ ಸರ್ಕಾರ ರೂಪಿಸಿರುವ ಸವಲತ್ತುಗಳು, ವಿಜ್ಞಾನ ಮತ್ತು ತಂತ್ರಜ್ಞಾನ, ಕರಕುಶಲ, ಚಿತ್ರಕಲೆಗಳ ಪ್ರದರ್ಶನ ಏರ್ಪಡಿಸಲಾಗುತ್ತಿದೆ.
ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…
ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…
ಓದುಗರ ಪತ್ರ: ಗಾಳಿ... ತಂಗಾಳಿ ! ಚಾಮರಾಜನಗರದ ಶುದ್ಧ ಗಾಳಿಗೆ ದೇಶದಲ್ಲಿ ೪ನೇ ಸ್ಥಾನ ಎಂಥ ಪ್ರಾಣವಾಯು ! ಮಲೆ ಮಾದಪ್ಪ…
ರಾಜ್ಯ ಸರ್ಕಾರ ಮಂಡಿಸಿದ ದ್ವೇಷ ಭಾಷಣ ಮಸೂದೆ ೨೦೨೫ ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ವ್ಯಾಪಕ…
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆಯಲ್ಲಿ ಹಲವು ಮಹತ್ವದ ಮಾಹಿತಿಗಳು ಬಯಲಾಗಿವೆ. ಮುಡಾ ಹಗರಣದ…
ಮೈಸೂರಿನ ಬಹುತೇಕ ಭಾಗಗಳಲ್ಲಿ ಪಾದಚಾರಿ ಮಾರ್ಗಗಳನ್ನು ಅಂಗಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದಾಗಿ ಸಾರ್ವಜನಿಕರು ರಸ್ತೆಯ ಮೇಲೆ ಸಂಚರಿಸುವುದು ಅನಿವಾರ್ಯವಾಗಿದೆ. ನಗರದ…