ಎಚ್.ಎಸ್.ದಿನೇಶ್ಕುಮಾರ್
ಮೈಸೂರು: ದಸರಾದಲ್ಲಿ ಈ ಬಾರಿ ಶಾಲಾ ಮಕ್ಕಳನ್ನು ಒಳಗೊಂಡ ಮಕ್ಕಳ ದಸರಾ ಸೆ.29ರಿಂದ ಎರಡು ದಿನ ನಡೆಯಲಿದ್ದು, ಮಕ್ಕಳೇ ನಡೆಸಿಕೊಡಲಿರುವ ವಿವಿಧ ಕಾರ್ಯಕ್ರಮಗಳು ದಸರೆಗೆ ಮೆರುಗು ನೀಡಲಿವೆ.
ಮಕ್ಕಳ ದಸರಾ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಶಾಲೆಗಳ 7 ರಿಂದ 10ನೇ ತರಗತಿ ವರೆಗಿನ 1 ಸಾವಿರ ಮಕ್ಕಳು ತಮ್ಮ ಪ್ರತಿಭೆ ಪ್ರದರ್ಶಿಸಲಿದ್ದಾರೆ. ಜಿಲ್ಲೆಯಲ್ಲಿ 2 ಲಕ್ಷ ಮಕ್ಕಳಿದ್ದು, ಮಕ್ಕಳ ಪ್ರತಿಭೆಯನ್ನು ಮಾನದಂಡವಾಗಿಟ್ಟುಕೊಂಡು ಅಧಿಕಾರಿಗಳು ಹಾಗೂ ಶಿಕ್ಷಕರು 1 ಸಾವಿರ ಮಕ್ಕಳನ್ನು ಮಕ್ಕಳ ದಸರಾ ಕಾರ್ಯಕ್ರಮಕ್ಕೆ ಆ್ಂಕೆು ಮಾಡಲಿದ್ದಾರೆ.
ಜೂನಿಯರ್ ಮಹಾರಾಣಿ ಕಾಲೇಜಿನ ಆವರಣದಲ್ಲಿ ಎರಡು ದಿನಗಳ ಕಾಲ ನಡೆಯುವ ಮಕ್ಕಳ ದಸರಾದಲ್ಲಿ ಸಂಗೀತ, ನೃತ್ಯ, ಚರ್ಚಾ ಸ್ಪರ್ಧೆ, ಆಶುಭಾಷಣ, ಜಾನಪದ, ಚಲನಚಿತ್ರಗೀತೆ, ರಸಪ್ರಶ್ನೆ, ಪ್ರಬಂಧ, ವಿವಿಧ ವೇಷಭೂಷಣ ಸ್ಪರ್ಧೆ ಹೀಗೆ 31 ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಇದರೊಂದಿಗೆ ದೇಸಿ ಆಟಗಳಾದ ಲಗ್ಗೋರಿ, ಬುಗುರಿ, ಚೌಕಾಬಾರ, ಕುಂಟೆಬಿಲ್ಲೆ, ಹಗ್ಗಜಗ್ಗಾಟ ಸ್ಪರ್ಧೆಗಳು ನಡೆಯಲಿವೆ.
ವಿಶೇಷಚೇತನ ಮಕ್ಕಳು ಭಾಗಿ: ವಿಶೇಷಚೇತನ ಮಕ್ಕಳಿಗಾಗಿ ವೇಶಭೂಷಣ ಸ್ಪರ್ಧೆ, ನೃತ್ಯ ಪ್ರದರ್ಶನ ಏರ್ಪಡಿಸಲಾಗಿದೆ.
ಹಾಡಿ ಮಕ್ಕಳಿಂದ ಕಾರ್ಯಕ್ರಮ: ಮಾವುತರು ಹಾಗೂ ಕಾವಾಡಿಗಳ ಮಕ್ಕಳನ್ನೂ ಮಕ್ಕಳ ದಸರಾದಲ್ಲಿ ಜೊತೆಯಾಗಿಸಿಕೊಳ್ಳಲಾಗಿದೆ. ಅವರಿಂದ ಸೆ.29ರ ಮದ್ಯಾಹ್ನ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ.
9 ಸ್ಟಾಲ್ಗಳು: ಜಗನ್ಮೋಹನ ಅರಮನೆ ಆವರಣದಲ್ಲಿ ಶಿಕ್ಷಣ ಇಲಾಖೆ ವತಿಯಿಂದ 9 ಮಳಿಗೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಅಲ್ಲಿ ಮಕ್ಕಳಿಗಾಗಿ ಸರ್ಕಾರ ರೂಪಿಸಿರುವ ಸವಲತ್ತುಗಳು, ವಿಜ್ಞಾನ ಮತ್ತು ತಂತ್ರಜ್ಞಾನ, ಕರಕುಶಲ, ಚಿತ್ರಕಲೆಗಳ ಪ್ರದರ್ಶನ ಏರ್ಪಡಿಸಲಾಗುತ್ತಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…