ಎಚ್.ಎಸ್.ದಿನೇಶ್ಕುಮಾರ್
ಮೈಸೂರು: ದಸರಾದಲ್ಲಿ ಈ ಬಾರಿ ಶಾಲಾ ಮಕ್ಕಳನ್ನು ಒಳಗೊಂಡ ಮಕ್ಕಳ ದಸರಾ ಸೆ.29ರಿಂದ ಎರಡು ದಿನ ನಡೆಯಲಿದ್ದು, ಮಕ್ಕಳೇ ನಡೆಸಿಕೊಡಲಿರುವ ವಿವಿಧ ಕಾರ್ಯಕ್ರಮಗಳು ದಸರೆಗೆ ಮೆರುಗು ನೀಡಲಿವೆ.
ಮಕ್ಕಳ ದಸರಾ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಶಾಲೆಗಳ 7 ರಿಂದ 10ನೇ ತರಗತಿ ವರೆಗಿನ 1 ಸಾವಿರ ಮಕ್ಕಳು ತಮ್ಮ ಪ್ರತಿಭೆ ಪ್ರದರ್ಶಿಸಲಿದ್ದಾರೆ. ಜಿಲ್ಲೆಯಲ್ಲಿ 2 ಲಕ್ಷ ಮಕ್ಕಳಿದ್ದು, ಮಕ್ಕಳ ಪ್ರತಿಭೆಯನ್ನು ಮಾನದಂಡವಾಗಿಟ್ಟುಕೊಂಡು ಅಧಿಕಾರಿಗಳು ಹಾಗೂ ಶಿಕ್ಷಕರು 1 ಸಾವಿರ ಮಕ್ಕಳನ್ನು ಮಕ್ಕಳ ದಸರಾ ಕಾರ್ಯಕ್ರಮಕ್ಕೆ ಆ್ಂಕೆು ಮಾಡಲಿದ್ದಾರೆ.
ಜೂನಿಯರ್ ಮಹಾರಾಣಿ ಕಾಲೇಜಿನ ಆವರಣದಲ್ಲಿ ಎರಡು ದಿನಗಳ ಕಾಲ ನಡೆಯುವ ಮಕ್ಕಳ ದಸರಾದಲ್ಲಿ ಸಂಗೀತ, ನೃತ್ಯ, ಚರ್ಚಾ ಸ್ಪರ್ಧೆ, ಆಶುಭಾಷಣ, ಜಾನಪದ, ಚಲನಚಿತ್ರಗೀತೆ, ರಸಪ್ರಶ್ನೆ, ಪ್ರಬಂಧ, ವಿವಿಧ ವೇಷಭೂಷಣ ಸ್ಪರ್ಧೆ ಹೀಗೆ 31 ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಇದರೊಂದಿಗೆ ದೇಸಿ ಆಟಗಳಾದ ಲಗ್ಗೋರಿ, ಬುಗುರಿ, ಚೌಕಾಬಾರ, ಕುಂಟೆಬಿಲ್ಲೆ, ಹಗ್ಗಜಗ್ಗಾಟ ಸ್ಪರ್ಧೆಗಳು ನಡೆಯಲಿವೆ.
ವಿಶೇಷಚೇತನ ಮಕ್ಕಳು ಭಾಗಿ: ವಿಶೇಷಚೇತನ ಮಕ್ಕಳಿಗಾಗಿ ವೇಶಭೂಷಣ ಸ್ಪರ್ಧೆ, ನೃತ್ಯ ಪ್ರದರ್ಶನ ಏರ್ಪಡಿಸಲಾಗಿದೆ.
ಹಾಡಿ ಮಕ್ಕಳಿಂದ ಕಾರ್ಯಕ್ರಮ: ಮಾವುತರು ಹಾಗೂ ಕಾವಾಡಿಗಳ ಮಕ್ಕಳನ್ನೂ ಮಕ್ಕಳ ದಸರಾದಲ್ಲಿ ಜೊತೆಯಾಗಿಸಿಕೊಳ್ಳಲಾಗಿದೆ. ಅವರಿಂದ ಸೆ.29ರ ಮದ್ಯಾಹ್ನ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ.
9 ಸ್ಟಾಲ್ಗಳು: ಜಗನ್ಮೋಹನ ಅರಮನೆ ಆವರಣದಲ್ಲಿ ಶಿಕ್ಷಣ ಇಲಾಖೆ ವತಿಯಿಂದ 9 ಮಳಿಗೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಅಲ್ಲಿ ಮಕ್ಕಳಿಗಾಗಿ ಸರ್ಕಾರ ರೂಪಿಸಿರುವ ಸವಲತ್ತುಗಳು, ವಿಜ್ಞಾನ ಮತ್ತು ತಂತ್ರಜ್ಞಾನ, ಕರಕುಶಲ, ಚಿತ್ರಕಲೆಗಳ ಪ್ರದರ್ಶನ ಏರ್ಪಡಿಸಲಾಗುತ್ತಿದೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…