ಜಿಲ್ಲೆಗಳು

ಮೈಸೂರು : ನಾಲಾಬೀದಿಯಲ್ಲಿ ಮುಗಿಯದ ಕಾಮಗಾರಿ

ಈ ರಸ್ತೆಯಲ್ಲಿ ಎರಡು ಆಸ್ಪತ್ರೆಗಳಿದ್ದು ಗರ್ಭಿಯರು ಓಡಾಡಂದತಹ ಸ್ಥಿತಿ ನಿರ್ಮಾಣವಾಗಿದೆ

ಆರ್.ಎಸ್.ಆಕಾಶ್

ಮೈಸೂರು: ಸುಣ್ಣದಕೇರಿಯ ನಾಲಾಬೀದಿಯಲ್ಲಿ ಯುಜಿಡಿ ಮತ್ತು ಚರಂಡಿ ದುಸ್ಥಿತಿಯಲ್ಲಿದ್ದು, ಸ್ಥಳೀಯರ ಅಹವಾಲು ಆಲಿಸದೆ ನಗರಪಾಲಿಕೆ ಕಣ್ಣುಮುಚ್ಚಿ ಕುಳಿತಿದೆ.

ಸುಣ್ಣದಕೇರಿಯ ನಾಲಾಬೀದಿಯಲ್ಲಿ ಯುಜಿಡಿ ಹಾಗೂ ಚರಂಡಿ ದುರಸ್ತಿಯಲ್ಲಿದ್ದು, ರಸ್ತೆ ಸಂಪರ್ಕವೇ ಕಡಿತವಾಗಿದೆ. ಇದರಿಂದ ಜನರಿಗೆ ಓಡಾಡಲು ತೊಂದರೆಯಾಗುತ್ತಿದೆ. ೬ ತಿಂಗಳ ಹಿಂದೆ ಯಜಿಡಿ ಲೈನ್ ಮಾಡಲು ಕಾಮಗಾರಿ ಆರಂಭಿಸಿದ್ದು, ಅದನ್ನು ಪೂರ್ಣಗೊಳಿಸದೆ ಪಾಲಿಕೆಯವರು ಹಾಗೇ ಬಿಟ್ಟಿದ್ದಾರೆ. ಈಗ ಚರಂಡಿ ನಿರ್ಮಾಣಕ್ಕೆ ಕೈ ಹಾಕಿದ್ದು, ಅದೂ ನಿಧಾನಗತಿಯಲ್ಲಿ ಸಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದು ಚಾಮರಾಜ ಜೋಡಿ ರಸ್ತೆಯಿಂದ ಅಗ್ರಹಾರದ ವಾಣಿವಿಲಾಸ ರಸ್ತೆಯನ್ನು ಸಂಪರ್ಕಕಿಸುವ ರಸ್ತೆಯಾಗಿದ್ದು, ಮುಗಿಯದ ಕಾಮಗಾರಿಯಿಂದ ಸ್ಥಳೀಯರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಈ ಬಡಾವಣೆಯ ಮನೆಗಳಿಗೆ ಸುರಂಗದ ಮೂಲಕ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಈ ಸಂಪರ್ಕಿತ ವೈರ್‌ಗಳಿಗೆ ಹಾನಿಯಾಗಿದ್ದು, ಅದನ್ನು ನಿವಾಸಿಗಳೇ ಸ್ವಂತ ಖರ್ಚಿನಲ್ಲಿ ಸರಿಪಡಿಸಿಕೊಳ್ಳುವಂತೆ ಸೂಚಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಕಾಮಗಾರಿ ಅಪೂರ್ಣವಾಗಿರುವುದರಿಂದ ಮಳೆ ಬಂದಾಗ ಕಾಮಗಾರಿಗೆಂದು ತೆಗೆದಿರುವ ಗುಂಡಿಗಳಲ್ಲಿ ಮಳೆ ನೀರು ನಿಂತು ಕಲುಷಿತಗೊಳ್ಳುತ್ತಿದೆ. ಅದರಿಂದ ಸೊಳ್ಳೆ ಸಂತತಿ ಹೆಚ್ಚಾಗಿ ರೋಗರುಜಿನಗಳಿಗೆ ಎಡೆಮಾಡಿಕೊಡುತ್ತದೆ. ಅದೇ ರಸ್ತೆಯಲ್ಲಿರುವ ಆಯುರ್ವೇದ ಆಸ್ಪತ್ರೆ ಮುಂಬಾಗಿಲಿಗೆ ಕಲುಷಿತ ನೀರು ತಾಗುತ್ತಿದೆ. ಇದರಿಂದ ದುರ್ವಾಸನೆ ಬೀರುತ್ತಿದೆ. ಕೆ.ಆರ್.ಕ್ಷೇತ್ರ ಶಾಸಕರು ಮತ್ತು ಈ ವಾರ್ಡಿನ ನಗರಪಾಲಿಕೆ ಸದಸ್ಯರು ಇತ್ತ ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

ರಸ್ತೆ ಕಾಮಗಾರಿ ಪೂರ್ಣಗೊಳ್ಳದೆ ಇರುವುದರಿಂದ ನಮಗೆ ಬಹಳ ಸಮಸ್ಯೆಯಾಗುತ್ತಿದೆ. ಇಲ್ಲಿನ ಜನರಿಗೆ ಇದರಿಂದ ಓಡಾಡಲು ತೊಂದರೆಯಾಗುತ್ತಿದೆ. ಮಳೆ ಬಂದರೆ ನೀರೆಲ್ಲಾ ಶೇಖರಣೆಯಾಗುದೆ; ಸೊಳ್ಳೆಗಳ ಸಂತತಿ ಹೆಚ್ಚುತ್ತಿದೆ.

– ಗಣೇಶ್, ಸ್ಥಳೀಯರು.

andolanait

Recent Posts

ಬಜೆಟ್‌ ಪ್ರತಿ ಇರುವ ಸೂಟ್‌ಕೇಸ್‌ ಜೊತೆ ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಬಜೆಟ್‌ ಮಂಡನೆಗೆ ಕ್ಷಣಗಣನೆ ಶುರುವಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ 17ನೇ ಬಜೆಟ್‌ ಮಂಡಿಸಲು ಸಿದ್ಧರಾಗಿದ್ದಾರೆ. ಸಾಂಪ್ರದಾಯಿಕವಾಗಿ…

26 mins ago

ಓದುಗರ ಪತ್ರ: ಶಾಂತಿ ನೆಲೆಸಲಿ

ಏಕಸ್ವಾಮ್ಯ ಸಾಧಿಸಲು ತಯಾರು ಪರಮಾಣು ಅಣ್ವಸ್ತ್ರ ಅದಕ್ಕಾಗಿಯೇ ನಿಲ್ಲದೆ ನಡೆಯುತ್ತಿದೆ ವಾಯು, ಡ್ರೋನ್, ಕ್ಷಿಪಣಿ ದಾಳಿ ನೆತ್ತರು ಹರಿಯುತ್ತಿದೆ ಹಿಂಸೆ…

3 hours ago

ಓದುಗರ ಪತ್ರ: ಸಂಬಂಧ..!

ಸಂಬಂಧ..! ಒಂದೊಂದು ರೀತಿ ಒಬ್ಬೊಬ್ಬರ ಸಂಬಂಧ.. ಇವರದು ಹಾಲು-ಜೇನು ಅವರದು ಎಣ್ಣೆ-ಸೀಗೆಕಾಯಿ ಬೇಕಿದ್ದರೆ ಗಮನಿಸಿ.. ಇರಾನ್ -ಇಸ್ರೇಲ್ ಹಾವು-ಮುಂಗುಸಿ !…

3 hours ago

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ ನಿರ್ಗಮನ ದ್ವಾರದ ಬಳಿ ಮರವೊಂದು ಒಣಗಿ ನಿಂತಿದ್ದು, ಯಾವಾಗಲಾದರೂ ಬೀಳುವ ಸಾಧ್ಯತೆಯಿದೆ. ಕ್ರಾ-ರ್ಡ್ ಹಾಲ್…

3 hours ago

ಓದುಗರ ಪತ್ರ: ರೈಲು ನಿಲ್ದಾಣದಲ್ಲಿ ಕಾರ್ಯ ನಿರ್ವಹಿಸದ ಎಸ್ಕಲೇಟರ್

ಮೈಸೂರಿನ ಮುಖ್ಯ ರೈಲ್ವೆ ನಿಲ್ದಾಣದಲ್ಲಿರುವ ಎಸ್ಕಲೇಟರ್ ಕೇವಲ ತೋರಿಕೆಗೆ ಮಾತ್ರ ಇದೆ ಎನಿಸುತ್ತದೆ. ಒಂದನೇ ಪ್ಲಾಟ್ ಫಾರ್ಮ್ ಬಿಟ್ಟರೆ ಉಳಿದ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಗಂಭೀರ ಸಮಸ್ಯೆ ಎದುರಿಸಲು ಒಟ್ಟಾದವರೂ ಸಿನಿಮಾ ಪ್ರಚಾರವೂ

ಚಿತ್ರರಂಗದಲ್ಲಿರುವ ಮಹಿಳೆಯರಾಗಿ, ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ…

3 hours ago