ಜಿಲ್ಲೆಗಳು

ಮೈಸೂರು : ನಾಲಾಬೀದಿಯಲ್ಲಿ ಮುಗಿಯದ ಕಾಮಗಾರಿ

ಈ ರಸ್ತೆಯಲ್ಲಿ ಎರಡು ಆಸ್ಪತ್ರೆಗಳಿದ್ದು ಗರ್ಭಿಯರು ಓಡಾಡಂದತಹ ಸ್ಥಿತಿ ನಿರ್ಮಾಣವಾಗಿದೆ

ಆರ್.ಎಸ್.ಆಕಾಶ್

ಮೈಸೂರು: ಸುಣ್ಣದಕೇರಿಯ ನಾಲಾಬೀದಿಯಲ್ಲಿ ಯುಜಿಡಿ ಮತ್ತು ಚರಂಡಿ ದುಸ್ಥಿತಿಯಲ್ಲಿದ್ದು, ಸ್ಥಳೀಯರ ಅಹವಾಲು ಆಲಿಸದೆ ನಗರಪಾಲಿಕೆ ಕಣ್ಣುಮುಚ್ಚಿ ಕುಳಿತಿದೆ.

ಸುಣ್ಣದಕೇರಿಯ ನಾಲಾಬೀದಿಯಲ್ಲಿ ಯುಜಿಡಿ ಹಾಗೂ ಚರಂಡಿ ದುರಸ್ತಿಯಲ್ಲಿದ್ದು, ರಸ್ತೆ ಸಂಪರ್ಕವೇ ಕಡಿತವಾಗಿದೆ. ಇದರಿಂದ ಜನರಿಗೆ ಓಡಾಡಲು ತೊಂದರೆಯಾಗುತ್ತಿದೆ. ೬ ತಿಂಗಳ ಹಿಂದೆ ಯಜಿಡಿ ಲೈನ್ ಮಾಡಲು ಕಾಮಗಾರಿ ಆರಂಭಿಸಿದ್ದು, ಅದನ್ನು ಪೂರ್ಣಗೊಳಿಸದೆ ಪಾಲಿಕೆಯವರು ಹಾಗೇ ಬಿಟ್ಟಿದ್ದಾರೆ. ಈಗ ಚರಂಡಿ ನಿರ್ಮಾಣಕ್ಕೆ ಕೈ ಹಾಕಿದ್ದು, ಅದೂ ನಿಧಾನಗತಿಯಲ್ಲಿ ಸಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದು ಚಾಮರಾಜ ಜೋಡಿ ರಸ್ತೆಯಿಂದ ಅಗ್ರಹಾರದ ವಾಣಿವಿಲಾಸ ರಸ್ತೆಯನ್ನು ಸಂಪರ್ಕಕಿಸುವ ರಸ್ತೆಯಾಗಿದ್ದು, ಮುಗಿಯದ ಕಾಮಗಾರಿಯಿಂದ ಸ್ಥಳೀಯರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಈ ಬಡಾವಣೆಯ ಮನೆಗಳಿಗೆ ಸುರಂಗದ ಮೂಲಕ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಈ ಸಂಪರ್ಕಿತ ವೈರ್‌ಗಳಿಗೆ ಹಾನಿಯಾಗಿದ್ದು, ಅದನ್ನು ನಿವಾಸಿಗಳೇ ಸ್ವಂತ ಖರ್ಚಿನಲ್ಲಿ ಸರಿಪಡಿಸಿಕೊಳ್ಳುವಂತೆ ಸೂಚಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಕಾಮಗಾರಿ ಅಪೂರ್ಣವಾಗಿರುವುದರಿಂದ ಮಳೆ ಬಂದಾಗ ಕಾಮಗಾರಿಗೆಂದು ತೆಗೆದಿರುವ ಗುಂಡಿಗಳಲ್ಲಿ ಮಳೆ ನೀರು ನಿಂತು ಕಲುಷಿತಗೊಳ್ಳುತ್ತಿದೆ. ಅದರಿಂದ ಸೊಳ್ಳೆ ಸಂತತಿ ಹೆಚ್ಚಾಗಿ ರೋಗರುಜಿನಗಳಿಗೆ ಎಡೆಮಾಡಿಕೊಡುತ್ತದೆ. ಅದೇ ರಸ್ತೆಯಲ್ಲಿರುವ ಆಯುರ್ವೇದ ಆಸ್ಪತ್ರೆ ಮುಂಬಾಗಿಲಿಗೆ ಕಲುಷಿತ ನೀರು ತಾಗುತ್ತಿದೆ. ಇದರಿಂದ ದುರ್ವಾಸನೆ ಬೀರುತ್ತಿದೆ. ಕೆ.ಆರ್.ಕ್ಷೇತ್ರ ಶಾಸಕರು ಮತ್ತು ಈ ವಾರ್ಡಿನ ನಗರಪಾಲಿಕೆ ಸದಸ್ಯರು ಇತ್ತ ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

ರಸ್ತೆ ಕಾಮಗಾರಿ ಪೂರ್ಣಗೊಳ್ಳದೆ ಇರುವುದರಿಂದ ನಮಗೆ ಬಹಳ ಸಮಸ್ಯೆಯಾಗುತ್ತಿದೆ. ಇಲ್ಲಿನ ಜನರಿಗೆ ಇದರಿಂದ ಓಡಾಡಲು ತೊಂದರೆಯಾಗುತ್ತಿದೆ. ಮಳೆ ಬಂದರೆ ನೀರೆಲ್ಲಾ ಶೇಖರಣೆಯಾಗುದೆ; ಸೊಳ್ಳೆಗಳ ಸಂತತಿ ಹೆಚ್ಚುತ್ತಿದೆ.

– ಗಣೇಶ್, ಸ್ಥಳೀಯರು.

andolanait

Recent Posts

30 ಹಾಡಿಗಳಿಗೂ ಅರಣ್ಯ ಹಕ್ಕು ಪತ್ರಗಳನ್ನು ನೀಡಲು ಆಗ್ರಹ

ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…

5 mins ago

ದಶಕದಿಂದ ಕಾದಿದ್ದ ವಿದ್ಯಾರ್ಥಿಗಳ ವನವಾಸಕ್ಕೆ ಮುಕ್ತಿ!

ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…

10 mins ago

ಎಚ್.ಡಿ.ಕೋಟೆ ಪೊಲೀಸ್ ಕ್ಯಾಂಟೀನ್ ಬಂದ್

ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ  ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…

14 mins ago

300 ಸಿಎ ನಿವೇಶನಗಳ ಹಂಚಿಕೆಗೆ ಎಂಡಿಎ ನಿರ್ಧಾರ

ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ  ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…

18 mins ago

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

9 hours ago