ಜಿಲ್ಲೆಗಳು

ಮೈಸೂರು : ನಾಲಾಬೀದಿಯಲ್ಲಿ ಮುಗಿಯದ ಕಾಮಗಾರಿ

ಈ ರಸ್ತೆಯಲ್ಲಿ ಎರಡು ಆಸ್ಪತ್ರೆಗಳಿದ್ದು ಗರ್ಭಿಯರು ಓಡಾಡಂದತಹ ಸ್ಥಿತಿ ನಿರ್ಮಾಣವಾಗಿದೆ

ಆರ್.ಎಸ್.ಆಕಾಶ್

ಮೈಸೂರು: ಸುಣ್ಣದಕೇರಿಯ ನಾಲಾಬೀದಿಯಲ್ಲಿ ಯುಜಿಡಿ ಮತ್ತು ಚರಂಡಿ ದುಸ್ಥಿತಿಯಲ್ಲಿದ್ದು, ಸ್ಥಳೀಯರ ಅಹವಾಲು ಆಲಿಸದೆ ನಗರಪಾಲಿಕೆ ಕಣ್ಣುಮುಚ್ಚಿ ಕುಳಿತಿದೆ.

ಸುಣ್ಣದಕೇರಿಯ ನಾಲಾಬೀದಿಯಲ್ಲಿ ಯುಜಿಡಿ ಹಾಗೂ ಚರಂಡಿ ದುರಸ್ತಿಯಲ್ಲಿದ್ದು, ರಸ್ತೆ ಸಂಪರ್ಕವೇ ಕಡಿತವಾಗಿದೆ. ಇದರಿಂದ ಜನರಿಗೆ ಓಡಾಡಲು ತೊಂದರೆಯಾಗುತ್ತಿದೆ. ೬ ತಿಂಗಳ ಹಿಂದೆ ಯಜಿಡಿ ಲೈನ್ ಮಾಡಲು ಕಾಮಗಾರಿ ಆರಂಭಿಸಿದ್ದು, ಅದನ್ನು ಪೂರ್ಣಗೊಳಿಸದೆ ಪಾಲಿಕೆಯವರು ಹಾಗೇ ಬಿಟ್ಟಿದ್ದಾರೆ. ಈಗ ಚರಂಡಿ ನಿರ್ಮಾಣಕ್ಕೆ ಕೈ ಹಾಕಿದ್ದು, ಅದೂ ನಿಧಾನಗತಿಯಲ್ಲಿ ಸಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದು ಚಾಮರಾಜ ಜೋಡಿ ರಸ್ತೆಯಿಂದ ಅಗ್ರಹಾರದ ವಾಣಿವಿಲಾಸ ರಸ್ತೆಯನ್ನು ಸಂಪರ್ಕಕಿಸುವ ರಸ್ತೆಯಾಗಿದ್ದು, ಮುಗಿಯದ ಕಾಮಗಾರಿಯಿಂದ ಸ್ಥಳೀಯರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಈ ಬಡಾವಣೆಯ ಮನೆಗಳಿಗೆ ಸುರಂಗದ ಮೂಲಕ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಈ ಸಂಪರ್ಕಿತ ವೈರ್‌ಗಳಿಗೆ ಹಾನಿಯಾಗಿದ್ದು, ಅದನ್ನು ನಿವಾಸಿಗಳೇ ಸ್ವಂತ ಖರ್ಚಿನಲ್ಲಿ ಸರಿಪಡಿಸಿಕೊಳ್ಳುವಂತೆ ಸೂಚಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಕಾಮಗಾರಿ ಅಪೂರ್ಣವಾಗಿರುವುದರಿಂದ ಮಳೆ ಬಂದಾಗ ಕಾಮಗಾರಿಗೆಂದು ತೆಗೆದಿರುವ ಗುಂಡಿಗಳಲ್ಲಿ ಮಳೆ ನೀರು ನಿಂತು ಕಲುಷಿತಗೊಳ್ಳುತ್ತಿದೆ. ಅದರಿಂದ ಸೊಳ್ಳೆ ಸಂತತಿ ಹೆಚ್ಚಾಗಿ ರೋಗರುಜಿನಗಳಿಗೆ ಎಡೆಮಾಡಿಕೊಡುತ್ತದೆ. ಅದೇ ರಸ್ತೆಯಲ್ಲಿರುವ ಆಯುರ್ವೇದ ಆಸ್ಪತ್ರೆ ಮುಂಬಾಗಿಲಿಗೆ ಕಲುಷಿತ ನೀರು ತಾಗುತ್ತಿದೆ. ಇದರಿಂದ ದುರ್ವಾಸನೆ ಬೀರುತ್ತಿದೆ. ಕೆ.ಆರ್.ಕ್ಷೇತ್ರ ಶಾಸಕರು ಮತ್ತು ಈ ವಾರ್ಡಿನ ನಗರಪಾಲಿಕೆ ಸದಸ್ಯರು ಇತ್ತ ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

ರಸ್ತೆ ಕಾಮಗಾರಿ ಪೂರ್ಣಗೊಳ್ಳದೆ ಇರುವುದರಿಂದ ನಮಗೆ ಬಹಳ ಸಮಸ್ಯೆಯಾಗುತ್ತಿದೆ. ಇಲ್ಲಿನ ಜನರಿಗೆ ಇದರಿಂದ ಓಡಾಡಲು ತೊಂದರೆಯಾಗುತ್ತಿದೆ. ಮಳೆ ಬಂದರೆ ನೀರೆಲ್ಲಾ ಶೇಖರಣೆಯಾಗುದೆ; ಸೊಳ್ಳೆಗಳ ಸಂತತಿ ಹೆಚ್ಚುತ್ತಿದೆ.

– ಗಣೇಶ್, ಸ್ಥಳೀಯರು.

andolanait

Recent Posts

ಗಣೇಶೋತ್ಸವದ ವೇಳೆ ಪ್ರಸಾದಕ್ಕೆ ಪರವಾನಗಿ ಕಡ್ಡಾಯ ಆದೇಶಕ್ಕೆ ಪ್ರಹ್ಲಾದ್‌ ಜೋಶಿ ಆಕ್ರೋಶ

ಹುಬ್ಬಳ್ಳಿ: ಗಣೇಶೋತ್ಸವ ಆಚರಣೆ ವೇಳೆ ಪೆಂಡಾಲ್‌ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂಬ ರಾಜ್ಯ ಸರ್ಕಾರದ…

7 mins ago

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

23 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

40 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

53 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago