ಜಿಲ್ಲೆಗಳು

ಮೈಸೂರು : ನಾಲಾಬೀದಿಯಲ್ಲಿ ಮುಗಿಯದ ಕಾಮಗಾರಿ

ಈ ರಸ್ತೆಯಲ್ಲಿ ಎರಡು ಆಸ್ಪತ್ರೆಗಳಿದ್ದು ಗರ್ಭಿಯರು ಓಡಾಡಂದತಹ ಸ್ಥಿತಿ ನಿರ್ಮಾಣವಾಗಿದೆ

ಆರ್.ಎಸ್.ಆಕಾಶ್

ಮೈಸೂರು: ಸುಣ್ಣದಕೇರಿಯ ನಾಲಾಬೀದಿಯಲ್ಲಿ ಯುಜಿಡಿ ಮತ್ತು ಚರಂಡಿ ದುಸ್ಥಿತಿಯಲ್ಲಿದ್ದು, ಸ್ಥಳೀಯರ ಅಹವಾಲು ಆಲಿಸದೆ ನಗರಪಾಲಿಕೆ ಕಣ್ಣುಮುಚ್ಚಿ ಕುಳಿತಿದೆ.

ಸುಣ್ಣದಕೇರಿಯ ನಾಲಾಬೀದಿಯಲ್ಲಿ ಯುಜಿಡಿ ಹಾಗೂ ಚರಂಡಿ ದುರಸ್ತಿಯಲ್ಲಿದ್ದು, ರಸ್ತೆ ಸಂಪರ್ಕವೇ ಕಡಿತವಾಗಿದೆ. ಇದರಿಂದ ಜನರಿಗೆ ಓಡಾಡಲು ತೊಂದರೆಯಾಗುತ್ತಿದೆ. ೬ ತಿಂಗಳ ಹಿಂದೆ ಯಜಿಡಿ ಲೈನ್ ಮಾಡಲು ಕಾಮಗಾರಿ ಆರಂಭಿಸಿದ್ದು, ಅದನ್ನು ಪೂರ್ಣಗೊಳಿಸದೆ ಪಾಲಿಕೆಯವರು ಹಾಗೇ ಬಿಟ್ಟಿದ್ದಾರೆ. ಈಗ ಚರಂಡಿ ನಿರ್ಮಾಣಕ್ಕೆ ಕೈ ಹಾಕಿದ್ದು, ಅದೂ ನಿಧಾನಗತಿಯಲ್ಲಿ ಸಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದು ಚಾಮರಾಜ ಜೋಡಿ ರಸ್ತೆಯಿಂದ ಅಗ್ರಹಾರದ ವಾಣಿವಿಲಾಸ ರಸ್ತೆಯನ್ನು ಸಂಪರ್ಕಕಿಸುವ ರಸ್ತೆಯಾಗಿದ್ದು, ಮುಗಿಯದ ಕಾಮಗಾರಿಯಿಂದ ಸ್ಥಳೀಯರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಈ ಬಡಾವಣೆಯ ಮನೆಗಳಿಗೆ ಸುರಂಗದ ಮೂಲಕ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಈ ಸಂಪರ್ಕಿತ ವೈರ್‌ಗಳಿಗೆ ಹಾನಿಯಾಗಿದ್ದು, ಅದನ್ನು ನಿವಾಸಿಗಳೇ ಸ್ವಂತ ಖರ್ಚಿನಲ್ಲಿ ಸರಿಪಡಿಸಿಕೊಳ್ಳುವಂತೆ ಸೂಚಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಕಾಮಗಾರಿ ಅಪೂರ್ಣವಾಗಿರುವುದರಿಂದ ಮಳೆ ಬಂದಾಗ ಕಾಮಗಾರಿಗೆಂದು ತೆಗೆದಿರುವ ಗುಂಡಿಗಳಲ್ಲಿ ಮಳೆ ನೀರು ನಿಂತು ಕಲುಷಿತಗೊಳ್ಳುತ್ತಿದೆ. ಅದರಿಂದ ಸೊಳ್ಳೆ ಸಂತತಿ ಹೆಚ್ಚಾಗಿ ರೋಗರುಜಿನಗಳಿಗೆ ಎಡೆಮಾಡಿಕೊಡುತ್ತದೆ. ಅದೇ ರಸ್ತೆಯಲ್ಲಿರುವ ಆಯುರ್ವೇದ ಆಸ್ಪತ್ರೆ ಮುಂಬಾಗಿಲಿಗೆ ಕಲುಷಿತ ನೀರು ತಾಗುತ್ತಿದೆ. ಇದರಿಂದ ದುರ್ವಾಸನೆ ಬೀರುತ್ತಿದೆ. ಕೆ.ಆರ್.ಕ್ಷೇತ್ರ ಶಾಸಕರು ಮತ್ತು ಈ ವಾರ್ಡಿನ ನಗರಪಾಲಿಕೆ ಸದಸ್ಯರು ಇತ್ತ ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

ರಸ್ತೆ ಕಾಮಗಾರಿ ಪೂರ್ಣಗೊಳ್ಳದೆ ಇರುವುದರಿಂದ ನಮಗೆ ಬಹಳ ಸಮಸ್ಯೆಯಾಗುತ್ತಿದೆ. ಇಲ್ಲಿನ ಜನರಿಗೆ ಇದರಿಂದ ಓಡಾಡಲು ತೊಂದರೆಯಾಗುತ್ತಿದೆ. ಮಳೆ ಬಂದರೆ ನೀರೆಲ್ಲಾ ಶೇಖರಣೆಯಾಗುದೆ; ಸೊಳ್ಳೆಗಳ ಸಂತತಿ ಹೆಚ್ಚುತ್ತಿದೆ.

– ಗಣೇಶ್, ಸ್ಥಳೀಯರು.

andolanait

Recent Posts

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

14 mins ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

1 hour ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

2 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

2 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

3 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

5 hours ago