ಮೈಸೂರು: ಕುಡಿದ ಮತ್ತಿನಲ್ಲಿದ್ದ ತಂದೆಯಿಂದಲೇ ಸುತ್ತಿಗೆಯಿಂದ ಹಲ್ಲೆಗೆ ಒಳಗಾಗಿ ತೀವ್ರಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ತಾಲ್ಲೂಕಿನ ಉದ್ಬೂರು ಗ್ರಾಮದ ಇಬ್ಬರು ಮಕ್ಕಳ ಪೈಕಿ ಹಿರಿಯ ಮಗಳು ಕುಸುಮ(೧೪) ಬುಧವಾರ ರಾತ್ರಿ ಕೊನೆಯುಸಿರೆಳೆದಿದ್ದಾಳೆ.
ನ.೧೭ರಂದು ಗುರುವಾರ ರಾತ್ರಿ ಮೈಸೂರು ತಾಲ್ಲೂಕಿನ ಉದ್ಬೂರು ಗ್ರಾಮದ ತಮ್ಮ ಮನೆಯಲ್ಲಿ ಕುಡಿದ ಮತ್ತಿನಲ್ಲಿದ್ದ ಡಿ.ಸ್ವಾಮಿ(೩೮) ಎಂಬಾತ ತನ್ನ ಮಕ್ಕಳಾದ ಕುಸುಮ(೧೪) ಹಾಗೂ ಧನ್ಯಶ್ರೀ(೪) ಮೇಲೆ ಸುತ್ತಿಗೆಯಿಂದ ತೀವ್ರವಾಗಿ ಹಲ್ಲೆ ನಡೆಸಿ, ಈಗ ಪೊಲೀಸರಿಂದ ಬಂಧಿತನಾಗಿದ್ದಾನೆ.
ಘಟನೆ ನಂತರ ತೀವ್ರ ಗಾಯಗೊಂಡಿದ್ದ ಇಬ್ಬರು ಮಕ್ಕಳನ್ನೂ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾಘಟಕದಲ್ಲಿರಿಸಿ ವೈದ್ಯರು ಕಳೆದ ಏಳು ದಿನಗಳಿಂದಲೂ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಸಾವು-ಬದುಕಿನೊಂದಿಗೆ ಹೋರಾಡುತ್ತಿದ್ದ ಹಿರಿಯ ಮಗಳು ಕುಸುಮ(೧೪) ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಒಂಬತ್ತು ಗಂಟೆ ಸಮಯದಲ್ಲಿ ಕೊನೆಯುಸಿರೆಳೆದಿದ್ದಾಳೆ.
ಘಟನೆ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಗುರುವಾರ ಬೆಳಿಗ್ಗೆ ಪೊಲೀಸರ ಸಮ್ಮುಖದಲ್ಲಿ ಮಹಜರು ನಡೆಸಿದ ನಂತರ ಮೃತ ದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗುತ್ತದೆ ಎಂದು ತಿಳಿದು ಬಂದಿದೆ.
ಕಿರಿಯ ಪುತ್ರಿ ಧನ್ಯಶ್ರೀ(೪)ಯನ್ನೂ ತೀವ್ರ ನಿಗಾಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆ ಇನ್ನೂ ಕಣ್ಣು ಬಿಟ್ಟು ಯಾರನ್ನೂ ಗುರುತಿಸುವ ಸ್ಥಿತಿಯಲ್ಲಿ ಇಲ್ಲ ಎನ್ನಲಾಗಿದೆ. ಆಕೆಯನ್ನು ಬದುಕುಳಿಸುವ ಪ್ರಯತ್ನವನ್ನು ವೈದ್ಯರು ಮುಂದುವರಿಸಿದ್ದಾರೆ.
ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…
ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…
ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…
ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್…
ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…