ಮೈಸೂರು: ಕುಡಿದ ಮತ್ತಿನಲ್ಲಿದ್ದ ತಂದೆಯಿಂದಲೇ ಸುತ್ತಿಗೆಯಿಂದ ಹಲ್ಲೆಗೆ ಒಳಗಾಗಿ ತೀವ್ರಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ತಾಲ್ಲೂಕಿನ ಉದ್ಬೂರು ಗ್ರಾಮದ ಇಬ್ಬರು ಮಕ್ಕಳ ಪೈಕಿ ಹಿರಿಯ ಮಗಳು ಕುಸುಮ(೧೪) ಬುಧವಾರ ರಾತ್ರಿ ಕೊನೆಯುಸಿರೆಳೆದಿದ್ದಾಳೆ.
ನ.೧೭ರಂದು ಗುರುವಾರ ರಾತ್ರಿ ಮೈಸೂರು ತಾಲ್ಲೂಕಿನ ಉದ್ಬೂರು ಗ್ರಾಮದ ತಮ್ಮ ಮನೆಯಲ್ಲಿ ಕುಡಿದ ಮತ್ತಿನಲ್ಲಿದ್ದ ಡಿ.ಸ್ವಾಮಿ(೩೮) ಎಂಬಾತ ತನ್ನ ಮಕ್ಕಳಾದ ಕುಸುಮ(೧೪) ಹಾಗೂ ಧನ್ಯಶ್ರೀ(೪) ಮೇಲೆ ಸುತ್ತಿಗೆಯಿಂದ ತೀವ್ರವಾಗಿ ಹಲ್ಲೆ ನಡೆಸಿ, ಈಗ ಪೊಲೀಸರಿಂದ ಬಂಧಿತನಾಗಿದ್ದಾನೆ.
ಘಟನೆ ನಂತರ ತೀವ್ರ ಗಾಯಗೊಂಡಿದ್ದ ಇಬ್ಬರು ಮಕ್ಕಳನ್ನೂ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾಘಟಕದಲ್ಲಿರಿಸಿ ವೈದ್ಯರು ಕಳೆದ ಏಳು ದಿನಗಳಿಂದಲೂ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಸಾವು-ಬದುಕಿನೊಂದಿಗೆ ಹೋರಾಡುತ್ತಿದ್ದ ಹಿರಿಯ ಮಗಳು ಕುಸುಮ(೧೪) ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಒಂಬತ್ತು ಗಂಟೆ ಸಮಯದಲ್ಲಿ ಕೊನೆಯುಸಿರೆಳೆದಿದ್ದಾಳೆ.
ಘಟನೆ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಗುರುವಾರ ಬೆಳಿಗ್ಗೆ ಪೊಲೀಸರ ಸಮ್ಮುಖದಲ್ಲಿ ಮಹಜರು ನಡೆಸಿದ ನಂತರ ಮೃತ ದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗುತ್ತದೆ ಎಂದು ತಿಳಿದು ಬಂದಿದೆ.
ಕಿರಿಯ ಪುತ್ರಿ ಧನ್ಯಶ್ರೀ(೪)ಯನ್ನೂ ತೀವ್ರ ನಿಗಾಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆ ಇನ್ನೂ ಕಣ್ಣು ಬಿಟ್ಟು ಯಾರನ್ನೂ ಗುರುತಿಸುವ ಸ್ಥಿತಿಯಲ್ಲಿ ಇಲ್ಲ ಎನ್ನಲಾಗಿದೆ. ಆಕೆಯನ್ನು ಬದುಕುಳಿಸುವ ಪ್ರಯತ್ನವನ್ನು ವೈದ್ಯರು ಮುಂದುವರಿಸಿದ್ದಾರೆ.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…