ಜಿಲ್ಲೆಗಳು

ತಂದೆಯಿಂದ ಹಲ್ಲೆಗೊಳಗಾಗಿದ್ದ ಮಕ್ಕಳು: ಹಿರಿಯ ಪುತ್ರಿ ಸಾವು

ಮೈಸೂರು: ಕುಡಿದ ಮತ್ತಿನಲ್ಲಿದ್ದ ತಂದೆಯಿಂದಲೇ ಸುತ್ತಿಗೆಯಿಂದ ಹಲ್ಲೆಗೆ ಒಳಗಾಗಿ ತೀವ್ರಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ತಾಲ್ಲೂಕಿನ ಉದ್ಬೂರು ಗ್ರಾಮದ ಇಬ್ಬರು ಮಕ್ಕಳ ಪೈಕಿ ಹಿರಿಯ ಮಗಳು ಕುಸುಮ(೧೪) ಬುಧವಾರ ರಾತ್ರಿ ಕೊನೆಯುಸಿರೆಳೆದಿದ್ದಾಳೆ.
ನ.೧೭ರಂದು ಗುರುವಾರ ರಾತ್ರಿ ಮೈಸೂರು ತಾಲ್ಲೂಕಿನ ಉದ್ಬೂರು ಗ್ರಾಮದ ತಮ್ಮ ಮನೆಯಲ್ಲಿ ಕುಡಿದ ಮತ್ತಿನಲ್ಲಿದ್ದ ಡಿ.ಸ್ವಾಮಿ(೩೮) ಎಂಬಾತ ತನ್ನ ಮಕ್ಕಳಾದ ಕುಸುಮ(೧೪) ಹಾಗೂ ಧನ್ಯಶ್ರೀ(೪) ಮೇಲೆ ಸುತ್ತಿಗೆಯಿಂದ ತೀವ್ರವಾಗಿ ಹಲ್ಲೆ ನಡೆಸಿ, ಈಗ ಪೊಲೀಸರಿಂದ ಬಂಧಿತನಾಗಿದ್ದಾನೆ.
ಘಟನೆ ನಂತರ ತೀವ್ರ ಗಾಯಗೊಂಡಿದ್ದ ಇಬ್ಬರು ಮಕ್ಕಳನ್ನೂ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾಘಟಕದಲ್ಲಿರಿಸಿ ವೈದ್ಯರು ಕಳೆದ ಏಳು ದಿನಗಳಿಂದಲೂ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಸಾವು-ಬದುಕಿನೊಂದಿಗೆ ಹೋರಾಡುತ್ತಿದ್ದ ಹಿರಿಯ ಮಗಳು ಕುಸುಮ(೧೪) ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಒಂಬತ್ತು ಗಂಟೆ ಸಮಯದಲ್ಲಿ ಕೊನೆಯುಸಿರೆಳೆದಿದ್ದಾಳೆ.
ಘಟನೆ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಗುರುವಾರ ಬೆಳಿಗ್ಗೆ ಪೊಲೀಸರ ಸಮ್ಮುಖದಲ್ಲಿ ಮಹಜರು ನಡೆಸಿದ ನಂತರ ಮೃತ ದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗುತ್ತದೆ ಎಂದು ತಿಳಿದು ಬಂದಿದೆ.
ಕಿರಿಯ ಪುತ್ರಿ ಧನ್ಯಶ್ರೀ(೪)ಯನ್ನೂ ತೀವ್ರ ನಿಗಾಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆ ಇನ್ನೂ ಕಣ್ಣು ಬಿಟ್ಟು ಯಾರನ್ನೂ ಗುರುತಿಸುವ ಸ್ಥಿತಿಯಲ್ಲಿ ಇಲ್ಲ ಎನ್ನಲಾಗಿದೆ. ಆಕೆಯನ್ನು ಬದುಕುಳಿಸುವ ಪ್ರಯತ್ನವನ್ನು ವೈದ್ಯರು ಮುಂದುವರಿಸಿದ್ದಾರೆ.

andolanait

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

14 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

15 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

17 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

20 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

20 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago