ಜಿಲ್ಲೆಗಳು

ತಂದೆಯಿಂದ ಹಲ್ಲೆಗೊಳಗಾಗಿದ್ದ ಮಕ್ಕಳು: ಹಿರಿಯ ಪುತ್ರಿ ಸಾವು

ಮೈಸೂರು: ಕುಡಿದ ಮತ್ತಿನಲ್ಲಿದ್ದ ತಂದೆಯಿಂದಲೇ ಸುತ್ತಿಗೆಯಿಂದ ಹಲ್ಲೆಗೆ ಒಳಗಾಗಿ ತೀವ್ರಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ತಾಲ್ಲೂಕಿನ ಉದ್ಬೂರು ಗ್ರಾಮದ ಇಬ್ಬರು ಮಕ್ಕಳ ಪೈಕಿ ಹಿರಿಯ ಮಗಳು ಕುಸುಮ(೧೪) ಬುಧವಾರ ರಾತ್ರಿ ಕೊನೆಯುಸಿರೆಳೆದಿದ್ದಾಳೆ.
ನ.೧೭ರಂದು ಗುರುವಾರ ರಾತ್ರಿ ಮೈಸೂರು ತಾಲ್ಲೂಕಿನ ಉದ್ಬೂರು ಗ್ರಾಮದ ತಮ್ಮ ಮನೆಯಲ್ಲಿ ಕುಡಿದ ಮತ್ತಿನಲ್ಲಿದ್ದ ಡಿ.ಸ್ವಾಮಿ(೩೮) ಎಂಬಾತ ತನ್ನ ಮಕ್ಕಳಾದ ಕುಸುಮ(೧೪) ಹಾಗೂ ಧನ್ಯಶ್ರೀ(೪) ಮೇಲೆ ಸುತ್ತಿಗೆಯಿಂದ ತೀವ್ರವಾಗಿ ಹಲ್ಲೆ ನಡೆಸಿ, ಈಗ ಪೊಲೀಸರಿಂದ ಬಂಧಿತನಾಗಿದ್ದಾನೆ.
ಘಟನೆ ನಂತರ ತೀವ್ರ ಗಾಯಗೊಂಡಿದ್ದ ಇಬ್ಬರು ಮಕ್ಕಳನ್ನೂ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾಘಟಕದಲ್ಲಿರಿಸಿ ವೈದ್ಯರು ಕಳೆದ ಏಳು ದಿನಗಳಿಂದಲೂ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಸಾವು-ಬದುಕಿನೊಂದಿಗೆ ಹೋರಾಡುತ್ತಿದ್ದ ಹಿರಿಯ ಮಗಳು ಕುಸುಮ(೧೪) ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಒಂಬತ್ತು ಗಂಟೆ ಸಮಯದಲ್ಲಿ ಕೊನೆಯುಸಿರೆಳೆದಿದ್ದಾಳೆ.
ಘಟನೆ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಗುರುವಾರ ಬೆಳಿಗ್ಗೆ ಪೊಲೀಸರ ಸಮ್ಮುಖದಲ್ಲಿ ಮಹಜರು ನಡೆಸಿದ ನಂತರ ಮೃತ ದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗುತ್ತದೆ ಎಂದು ತಿಳಿದು ಬಂದಿದೆ.
ಕಿರಿಯ ಪುತ್ರಿ ಧನ್ಯಶ್ರೀ(೪)ಯನ್ನೂ ತೀವ್ರ ನಿಗಾಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆ ಇನ್ನೂ ಕಣ್ಣು ಬಿಟ್ಟು ಯಾರನ್ನೂ ಗುರುತಿಸುವ ಸ್ಥಿತಿಯಲ್ಲಿ ಇಲ್ಲ ಎನ್ನಲಾಗಿದೆ. ಆಕೆಯನ್ನು ಬದುಕುಳಿಸುವ ಪ್ರಯತ್ನವನ್ನು ವೈದ್ಯರು ಮುಂದುವರಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

5 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

5 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

5 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

5 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

5 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

5 hours ago