ಮೈಸೂರು: ವೇಶ್ಯಾವಾಟಿಕೆಗೆಂದು ಕರೆತರಲಾಗಿದ್ದ ಆಂಧ್ರ ಮೂಲದ ಅಪ್ರಾಪ್ತ ಬಾಲಕಿಯನ್ನು ಒಡನಾಡಿ ಸೇವಾ ಸಂಸ್ಥೆ, ನಗರ ಮಾನವ ಸಾಗಾಣಿಕೆ ನಿಗ್ರಹ ದಳ ಮತ್ತು ಜಿಲ್ಲಾ ಮಕ್ಕಳ ಪೊಲೀಸ್ ಘಟಕದ ಜಂಟಿ ಕಾರ್ಯಾಚರಣೆಯ ಮೂಲಕ ನಗರದ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ರಕ್ಷಿಸಲಾಗಿದೆ.
ಆಂಧ್ರ ಮೂಲದ ೧೫ ವರ್ಷದ ಅಪ್ರಾಪ್ತ ಬಾಲಕಿಯನ್ನು ರಕ್ಷಿಸಲಾಗಿದ್ದು, ಈಗಾಗಲೇ ಆಕೆ ಆಂಧ್ರದ ಅನಂತಪುರ ಜಿಲ್ಲೆಯಲ್ಲಿ ಒಂದು ವರ್ಷದಿಂದ ಲೈಂಗಿಕವಾಗಿ ವೇಶ್ಯಾವಾಟಿಕೆಗೆ ಬಳಕೆಯಾಗಿರುತ್ತಾಳೆ ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ.
ಕಳೆದ ಕೆಲವು ದಿನಗಳಿಂದ ಇಬ್ಬರು ಮಹಿಳೆಯರು ಈಕೆಯನ್ನು ತಮ್ಮ ಬಳಿ ಇಟ್ಟುಕೊಂಡಿದ್ದಾರೆ. ಅವರಲ್ಲಿ ಒಬ್ಬಳನ್ನು ಬಾಲಕಿಯು ಅಮ್ಮ ಎಂದು ಕರೆಯುತ್ತಾಳಾದರೂ, ಮಹಿಳೆಯರಿಬ್ಬರೂ ಲೈಂಗಿಕ ವೃತ್ತಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಇರುವುದು ಖಾತ್ರಿಯಾಗಿದೆ. ಬಾಲಕಿಗೂ ಅವರಿಗೂ ಯಾವುದೇ ರಕ್ತ ಸಂಬಂಧವಿಲ್ಲ.
ಬಾಲಕಿ ಹೇಳುವ ಪ್ರಕಾರ ಆಕೆ ೯ನೇ ತರಗತಿಯವರೆಗೆ ಓದಿದ್ದಾಳೆ. ಆಕೆಯ ತಂದೆ ತಾಯಿ ಇಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬಾಲಕಿಯ ಸಹೋದರಿಯರು ಎಂದು ಹೇಳಿಕೊಳ್ಳುವ ಸುಮಾರು ೨೩, ೨೪ ವಯಸ್ಸಿನ ಮಹಿಳೆಯರಿಬ್ಬರು ಈಕೆಯನ್ನು ಕರೆದುಕೊಂಡು ಮೈಸೂರಿಗೆ ಬಂದು ಲಾಡ್ಜ್ ಒಂದರಲ್ಲಿ ಉಳಿದುಕೊಂಡಿದ್ದರು.
ಇವರು ಈ ಮೊದಲು ಮೈಸೂರಿಗೆ ವೇಶ್ಯಾವಾಟಿಕೆ ನಡೆಸುವ ಉದ್ದೇಶದಿಂದ ಬಂದು ಹೋಗುತ್ತಿದ್ದರು ಎಂದು ಮಹಿಳೆಯರು ಖುದ್ದು ತಾವೇ ಹೇಳಿಕೊಂಡಿದ್ದಾರೆ. ಇಲ್ಲಿನ ಕೆಲ ಪಿಂಪ್ಗಳೊಂದಿಗೆ ಅವರು ಸಂಪರ್ಕದಲ್ಲಿದ್ದರು ಎಂದು ತಿಳಿದುಬಂದಿದೆ. ಈ ಸಂಬಂಧ ಒಡನಾಡಿ ಸೇವಾ ಸಂಸ್ಥೆಗೆ ಮಾಹಿತಿ ಬಂದಿತ್ತು.
ಹೀಗಾಗಿ ಮಂಗಳವಾರ ಬೆಳಿಗ್ಗೆ ಒಡನಾಡಿ ಸೇವಾ ಸಂಸ್ಥೆ ಕಾರ್ಯಕರ್ತರು ಬಾಲಕಿಯ ರಕ್ಷಣೆಗೆ ಕಾರ್ಯಾಚರಣೆ ನಡೆಸಿದ್ದರು. ಈ ವಿಚಾರ ತಿಳಿದ ಅವರು ಆಟೋದಲ್ಲಿ ಎಲ್ಲರನ್ನೂ ಕುಳ್ಳಿರಿಸಿಕೊಂಡು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಇವರನ್ನು ಇಳಿಸಿ ಪರಾರಿಯಾಗಿದ್ದಾನೆ.
ಈ ವೇಳೆ ಮಹಿಳೆಯರು ಹಾಗೂ ಬಾಲಕಿಯನ್ನು ನಗರ ಮಾನವ ಸಾಗಾಣಿಕೆ ನಿಗ್ರಹದಳದ ನಿರೀಕ್ಷಕಿ ಅರುಣ್ ಕುಮಾರಿ, ಜಿಲ್ಲಾ ಮಕ್ಕಳ ವಿಶೇಷ ಪೊಲೀಸ್ ಘಟಕದ ಎಸ್.ಶೀಲಾ ಅವರೊಂದಿಗೆ ಒಡನಾಡಿಯ ಸ್ಟ್ಯಾನ್ಲಿ, ಪರಶು, ಪ್ರದೀಪ್, ಶಶಾಂಕ್, ಸುಜನ, ಮಹಾಲಕ್ಷ್ಮಿ, ಸುಮಾ ಅವರ ತಂಡ ಬಾಲಕಿಯನ್ನು ರಕ್ಷಿಸಿದ್ದಾರೆ. ಬಾಲಕಿಯ ಹೇಳಿಕೆಯ ಆಧಾರದ ಮೇಲೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.
ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…
ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…
ಬೆಂಗಳೂರು : ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದ ಸವಾಲುಗಳ ಬಗ್ಗೆ…
ಬೆಂಗಳೂರು : ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಒಕ್ಕಲಿಗ ನಾಯಕರನ್ನು ಬೆಳೆಸಲಿಲ್ಲ ಎಂದು ಹೇಳಿರುವ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ…
ಮಡಿಕೇರಿ : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನಪ್ರಿಯ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಕರ್ನಾಟಕದ ರೈತರ…