ಜಿಲ್ಲೆಗಳು

ವೇಶ್ಯಾವಾಟಿಕೆಯಿಂದ ಅಪ್ರಾಪ್ತ ಬಾಲಕಿಯ ರಕ್ಷಣೆ

ಮೈಸೂರು: ವೇಶ್ಯಾವಾಟಿಕೆಗೆಂದು ಕರೆತರಲಾಗಿದ್ದ ಆಂಧ್ರ ಮೂಲದ ಅಪ್ರಾಪ್ತ ಬಾಲಕಿಯನ್ನು ಒಡನಾಡಿ ಸೇವಾ ಸಂಸ್ಥೆ, ನಗರ ಮಾನವ ಸಾಗಾಣಿಕೆ ನಿಗ್ರಹ ದಳ ಮತ್ತು ಜಿಲ್ಲಾ ಮಕ್ಕಳ ಪೊಲೀಸ್ ಘಟಕದ ಜಂಟಿ ಕಾರ್ಯಾಚರಣೆಯ ಮೂಲಕ ನಗರದ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ರಕ್ಷಿಸಲಾಗಿದೆ.
ಆಂಧ್ರ ಮೂಲದ ೧೫ ವರ್ಷದ ಅಪ್ರಾಪ್ತ ಬಾಲಕಿಯನ್ನು ರಕ್ಷಿಸಲಾಗಿದ್ದು, ಈಗಾಗಲೇ ಆಕೆ ಆಂಧ್ರದ ಅನಂತಪುರ ಜಿಲ್ಲೆಯಲ್ಲಿ ಒಂದು ವರ್ಷದಿಂದ ಲೈಂಗಿಕವಾಗಿ ವೇಶ್ಯಾವಾಟಿಕೆಗೆ ಬಳಕೆಯಾಗಿರುತ್ತಾಳೆ ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ.
ಕಳೆದ ಕೆಲವು ದಿನಗಳಿಂದ ಇಬ್ಬರು ಮಹಿಳೆಯರು ಈಕೆಯನ್ನು ತಮ್ಮ ಬಳಿ ಇಟ್ಟುಕೊಂಡಿದ್ದಾರೆ. ಅವರಲ್ಲಿ ಒಬ್ಬಳನ್ನು ಬಾಲಕಿಯು ಅಮ್ಮ ಎಂದು ಕರೆಯುತ್ತಾಳಾದರೂ, ಮಹಿಳೆಯರಿಬ್ಬರೂ ಲೈಂಗಿಕ ವೃತ್ತಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಇರುವುದು ಖಾತ್ರಿಯಾಗಿದೆ. ಬಾಲಕಿಗೂ ಅವರಿಗೂ ಯಾವುದೇ ರಕ್ತ ಸಂಬಂಧವಿಲ್ಲ.
ಬಾಲಕಿ ಹೇಳುವ ಪ್ರಕಾರ ಆಕೆ ೯ನೇ ತರಗತಿಯವರೆಗೆ ಓದಿದ್ದಾಳೆ. ಆಕೆಯ ತಂದೆ ತಾಯಿ ಇಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬಾಲಕಿಯ ಸಹೋದರಿಯರು ಎಂದು ಹೇಳಿಕೊಳ್ಳುವ ಸುಮಾರು ೨೩, ೨೪ ವಯಸ್ಸಿನ ಮಹಿಳೆಯರಿಬ್ಬರು ಈಕೆಯನ್ನು ಕರೆದುಕೊಂಡು ಮೈಸೂರಿಗೆ ಬಂದು ಲಾಡ್ಜ್ ಒಂದರಲ್ಲಿ ಉಳಿದುಕೊಂಡಿದ್ದರು.
ಇವರು ಈ ಮೊದಲು ಮೈಸೂರಿಗೆ ವೇಶ್ಯಾವಾಟಿಕೆ ನಡೆಸುವ ಉದ್ದೇಶದಿಂದ ಬಂದು ಹೋಗುತ್ತಿದ್ದರು ಎಂದು ಮಹಿಳೆಯರು ಖುದ್ದು ತಾವೇ ಹೇಳಿಕೊಂಡಿದ್ದಾರೆ. ಇಲ್ಲಿನ ಕೆಲ ಪಿಂಪ್‌ಗಳೊಂದಿಗೆ ಅವರು ಸಂಪರ್ಕದಲ್ಲಿದ್ದರು ಎಂದು ತಿಳಿದುಬಂದಿದೆ. ಈ ಸಂಬಂಧ ಒಡನಾಡಿ ಸೇವಾ ಸಂಸ್ಥೆಗೆ ಮಾಹಿತಿ ಬಂದಿತ್ತು.
ಹೀಗಾಗಿ ಮಂಗಳವಾರ ಬೆಳಿಗ್ಗೆ ಒಡನಾಡಿ ಸೇವಾ ಸಂಸ್ಥೆ ಕಾರ್ಯಕರ್ತರು ಬಾಲಕಿಯ ರಕ್ಷಣೆಗೆ ಕಾರ್ಯಾಚರಣೆ ನಡೆಸಿದ್ದರು. ಈ ವಿಚಾರ ತಿಳಿದ ಅವರು ಆಟೋದಲ್ಲಿ ಎಲ್ಲರನ್ನೂ ಕುಳ್ಳಿರಿಸಿಕೊಂಡು ಗ್ರಾಮಾಂತರ ಬಸ್‌  ನಿಲ್ದಾಣದಲ್ಲಿ ಇವರನ್ನು ಇಳಿಸಿ ಪರಾರಿಯಾಗಿದ್ದಾನೆ.
ಈ ವೇಳೆ ಮಹಿಳೆಯರು ಹಾಗೂ ಬಾಲಕಿಯನ್ನು ನಗರ ಮಾನವ ಸಾಗಾಣಿಕೆ ನಿಗ್ರಹದಳದ ನಿರೀಕ್ಷಕಿ ಅರುಣ್ ಕುಮಾರಿ, ಜಿಲ್ಲಾ ಮಕ್ಕಳ ವಿಶೇಷ ಪೊಲೀಸ್ ಘಟಕದ ಎಸ್.ಶೀಲಾ ಅವರೊಂದಿಗೆ ಒಡನಾಡಿಯ ಸ್ಟ್ಯಾನ್ಲಿ, ಪರಶು, ಪ್ರದೀಪ್, ಶಶಾಂಕ್, ಸುಜನ, ಮಹಾಲಕ್ಷ್ಮಿ, ಸುಮಾ ಅವರ ತಂಡ ಬಾಲಕಿಯನ್ನು ರಕ್ಷಿಸಿದ್ದಾರೆ. ಬಾಲಕಿಯ ಹೇಳಿಕೆಯ ಆಧಾರದ ಮೇಲೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago