ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದ ಈ ಸಾಲಿನಲ್ಲಿ ಯುವ ಸಂಭ್ರಮ ಕಾರ್ಯಕ್ರಮವು ಸೆ. 16 ರಿಂದ 24ರವರೆಗೆ ಒಟ್ಟು 9 ದಿನಗಳ ಕಾಲ ನಡೆಯಲಿದೆ. ಈ ಯುವ ದಸರಾ ಕಾರ್ಯಕ್ರಮವು ಮೈಸೂರಿನ ಮಾನಸ ಗಂಗೋತ್ರಿಯ ಬಯಲು ರಂಗ ಮಂದಿರದಲ್ಲಿ ಸಂಜೆ 5.30 ರಿಂದ ರಾತ್ರಿ 10-00 ರವರೆಗೆ ನಡೆಯಲಿದೆ.
ಉದ್ಘಾಟನೆ : ಕಾರ್ಯಕ್ರಮದ ಉದ್ಘಾಟನೆಯನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮಾಡಲಿದ್ದಾರೆ. ಅಧ್ಯಕ್ಷತೆಯನು ಚಾಮರಾಜ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಲ್ ನಾಗೇಂದ್ರ ಅವರು ವಹಿಸಲಿದ್ದಾರೆ.
ಮೆರಗು ತರಲಿದ್ದಾರೆ ಡಾಲಿ ಧನಂಜಯ
ಕನ್ನಡ ಚಿತ್ರರಂಗದ ಖ್ಯಾತ ನಟರಾದ ಡಾಲಿ ಧನಂಜಯ್ ಅವರು ಯುವ ದಸರಾ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಕಾರ್ಯಕ್ರಮಕ್ಕೆ ಮೆರಗು ತರಲಿದ್ದಾರೆ.
ಯುವ ಸಂಭ್ರಮದಲ್ಲಿ ಒಟ್ಟು 253 ಕಾಲೇಜಿಗಳ ತಂಡವು ಭಾಗವಹಿಸಲಿವೆ. ವಿವಿಧ ಕಾಲೇಜುಗಳ ಒಟ್ಟು 10500 ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಂದ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
ಯುವ ದಸರಾದಲ್ಲಿರುವ ವಿಷಯಧಾರಿತ ಕಾರ್ಯಕ್ರಮಗಳು ಇಂತಿವೆ
– ಅಜಾದಿಕಾ ಅಮೃತ್ ಮಹೋತ್ಸವ್ ( 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ)
-ಭಾರತ ಸಾತಂತ್ರ್ಯ ಚಳುವಳಿಗೆ ಕರ್ನಾಟಕದ ಕೊಡುಗೆ
-ಭಾರತ ಸ್ವಾತಂತ್ರ ಚಳುವಳಿ
-ರಾಷ್ಟ್ರೀಯ ಭಾವೈಕ್ಯತೆ ಮತ್ತು ಪಾರಂಪರಿಕ ಆಸ್ತಿಗಳ ಸಂರಕ್ಷಣೆ
-ಮಹಿಳಾ ಸಬಲೀಕರಣ ಮತ್ತು ಸಮಾನತೆ
-ಕನ್ನಡ ಮತ್ತು ಸಂಸ್ಕೃತಿ, ಜಾನಪದ ಕಲೆ
-ಪರಿಸರ ಸಂರಕ್ಷಣೆ, ಮತ್ತು ಮಾನವ ನಿರ್ಮಿತ ಆಪತ್ತುಗಳು
– ಸ್ವಚ್ಚ ಭಾರತ-ಸ್ವಚ್ಚ ಕರ್ನಾಟಕ, ಆರೋಗ್ಯ ಮತ್ತು ನೈರ್ಮಲ್ಯ
-ಮಾದರಿ ಮೈಸೂರು ನಿರ್ಮಾಣದಲ್ಲಿ ಮೈಸೂರು ಮಾಹಾರಾಜರುಗಳ ಕೊಡುಗೆ
ಮುಂತಾದ ಕಾರ್ಯಕ್ರಮಗಳು ನಡೆಯಲಿದ್ದು. ಯುವ ಸಮೂಹವು ಕೌತುಕದಿಂದ ಈ ಸಂಭ್ರಮದ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ.
ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…
ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…
ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…
ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…
ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…
ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…