ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದ ಈ ಸಾಲಿನಲ್ಲಿ ಯುವ ಸಂಭ್ರಮ ಕಾರ್ಯಕ್ರಮವು ಸೆ. 16 ರಿಂದ 24ರವರೆಗೆ ಒಟ್ಟು 9 ದಿನಗಳ ಕಾಲ ನಡೆಯಲಿದೆ. ಈ ಯುವ ದಸರಾ ಕಾರ್ಯಕ್ರಮವು ಮೈಸೂರಿನ ಮಾನಸ ಗಂಗೋತ್ರಿಯ ಬಯಲು ರಂಗ ಮಂದಿರದಲ್ಲಿ ಸಂಜೆ 5.30 ರಿಂದ ರಾತ್ರಿ 10-00 ರವರೆಗೆ ನಡೆಯಲಿದೆ.
ಉದ್ಘಾಟನೆ : ಕಾರ್ಯಕ್ರಮದ ಉದ್ಘಾಟನೆಯನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮಾಡಲಿದ್ದಾರೆ. ಅಧ್ಯಕ್ಷತೆಯನು ಚಾಮರಾಜ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಲ್ ನಾಗೇಂದ್ರ ಅವರು ವಹಿಸಲಿದ್ದಾರೆ.
ಮೆರಗು ತರಲಿದ್ದಾರೆ ಡಾಲಿ ಧನಂಜಯ
ಕನ್ನಡ ಚಿತ್ರರಂಗದ ಖ್ಯಾತ ನಟರಾದ ಡಾಲಿ ಧನಂಜಯ್ ಅವರು ಯುವ ದಸರಾ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಕಾರ್ಯಕ್ರಮಕ್ಕೆ ಮೆರಗು ತರಲಿದ್ದಾರೆ.
ಯುವ ಸಂಭ್ರಮದಲ್ಲಿ ಒಟ್ಟು 253 ಕಾಲೇಜಿಗಳ ತಂಡವು ಭಾಗವಹಿಸಲಿವೆ. ವಿವಿಧ ಕಾಲೇಜುಗಳ ಒಟ್ಟು 10500 ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಂದ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
ಯುವ ದಸರಾದಲ್ಲಿರುವ ವಿಷಯಧಾರಿತ ಕಾರ್ಯಕ್ರಮಗಳು ಇಂತಿವೆ
– ಅಜಾದಿಕಾ ಅಮೃತ್ ಮಹೋತ್ಸವ್ ( 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ)
-ಭಾರತ ಸಾತಂತ್ರ್ಯ ಚಳುವಳಿಗೆ ಕರ್ನಾಟಕದ ಕೊಡುಗೆ
-ಭಾರತ ಸ್ವಾತಂತ್ರ ಚಳುವಳಿ
-ರಾಷ್ಟ್ರೀಯ ಭಾವೈಕ್ಯತೆ ಮತ್ತು ಪಾರಂಪರಿಕ ಆಸ್ತಿಗಳ ಸಂರಕ್ಷಣೆ
-ಮಹಿಳಾ ಸಬಲೀಕರಣ ಮತ್ತು ಸಮಾನತೆ
-ಕನ್ನಡ ಮತ್ತು ಸಂಸ್ಕೃತಿ, ಜಾನಪದ ಕಲೆ
-ಪರಿಸರ ಸಂರಕ್ಷಣೆ, ಮತ್ತು ಮಾನವ ನಿರ್ಮಿತ ಆಪತ್ತುಗಳು
– ಸ್ವಚ್ಚ ಭಾರತ-ಸ್ವಚ್ಚ ಕರ್ನಾಟಕ, ಆರೋಗ್ಯ ಮತ್ತು ನೈರ್ಮಲ್ಯ
-ಮಾದರಿ ಮೈಸೂರು ನಿರ್ಮಾಣದಲ್ಲಿ ಮೈಸೂರು ಮಾಹಾರಾಜರುಗಳ ಕೊಡುಗೆ
ಮುಂತಾದ ಕಾರ್ಯಕ್ರಮಗಳು ನಡೆಯಲಿದ್ದು. ಯುವ ಸಮೂಹವು ಕೌತುಕದಿಂದ ಈ ಸಂಭ್ರಮದ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ.
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…