ಜಿಲ್ಲೆಗಳು

ಮೈಸೂರು : ದಸರಾ ಯುವ ಸಂಭ್ರಮದಲ್ಲಿ ʼಡಾಲಿ ಧನಂಜಯ್‌ʼ ವಿಶೇಷ ಅತಿಥಿ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದ ಈ ಸಾಲಿನಲ್ಲಿ ಯುವ ಸಂಭ್ರಮ ಕಾರ್ಯಕ್ರಮವು ಸೆ. 16 ರಿಂದ 24ರವರೆಗೆ ಒಟ್ಟು 9 ದಿನಗಳ ಕಾಲ ನಡೆಯಲಿದೆ. ಈ ಯುವ ದಸರಾ ಕಾರ್ಯಕ್ರಮವು ಮೈಸೂರಿನ ಮಾನಸ ಗಂಗೋತ್ರಿಯ ಬಯಲು ರಂಗ ಮಂದಿರದಲ್ಲಿ ಸಂಜೆ 5.30 ರಿಂದ ರಾತ್ರಿ 10-00 ರವರೆಗೆ ನಡೆಯಲಿದೆ.

ಉದ್ಘಾಟನೆ : ಕಾರ್ಯಕ್ರಮದ ಉದ್ಘಾಟನೆಯನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್‌.ಟಿ.ಸೋಮಶೇಖರ್‌ ಅವರು ಮಾಡಲಿದ್ದಾರೆ. ಅಧ್ಯಕ್ಷತೆಯನು ಚಾಮರಾಜ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಲ್‌ ನಾಗೇಂದ್ರ ಅವರು ವಹಿಸಲಿದ್ದಾರೆ.

ಮೆರಗು ತರಲಿದ್ದಾರೆ ಡಾಲಿ ಧನಂಜಯ

ಮೆರಗು ತರಲಿದ್ದಾರೆ ಡಾಲಿ ಧನಂಜಯ
ಕನ್ನಡ ಚಿತ್ರರಂಗದ ಖ್ಯಾತ ನಟರಾದ ಡಾಲಿ ಧನಂಜಯ್‌ ಅವರು ಯುವ ದಸರಾ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಕಾರ್ಯಕ್ರಮಕ್ಕೆ ಮೆರಗು ತರಲಿದ್ದಾರೆ.

ದಸರಾ ಯುವ ಸಂಭ್ರಮ

ಯುವ ಸಂಭ್ರಮದಲ್ಲಿ ಒಟ್ಟು 253 ಕಾಲೇಜಿಗಳ ತಂಡವು ಭಾಗವಹಿಸಲಿವೆ. ವಿವಿಧ ಕಾಲೇಜುಗಳ ಒಟ್ಟು 10500 ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಂದ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.

ಯುವ ದಸರಾದಲ್ಲಿರುವ ವಿಷಯಧಾರಿತ ಕಾರ್ಯಕ್ರಮಗಳು ಇಂತಿವೆ
ಅಜಾದಿಕಾ ಅಮೃತ್‌ ಮಹೋತ್ಸವ್‌ ( 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ)
-ಭಾರತ ಸಾತಂತ್ರ್ಯ ಚಳುವಳಿಗೆ ಕರ್ನಾಟಕದ ಕೊಡುಗೆ
-ಭಾರತ ಸ್ವಾತಂತ್ರ ಚಳುವಳಿ
-ರಾಷ್ಟ್ರೀಯ ಭಾವೈಕ್ಯತೆ ಮತ್ತು ಪಾರಂಪರಿಕ ಆಸ್ತಿಗಳ ಸಂರಕ್ಷಣೆ
-ಮಹಿಳಾ ಸಬಲೀಕರಣ ಮತ್ತು ಸಮಾನತೆ
-ಕನ್ನಡ ಮತ್ತು ಸಂಸ್ಕೃತಿ, ಜಾನಪದ ಕಲೆ
-ಪರಿಸರ ಸಂರಕ್ಷಣೆ, ಮತ್ತು ಮಾನವ ನಿರ್ಮಿತ ಆಪತ್ತುಗಳು
– ಸ್ವಚ್ಚ ಭಾರತ-ಸ್ವಚ್ಚ ಕರ್ನಾಟಕ, ಆರೋಗ್ಯ ಮತ್ತು ನೈರ್ಮಲ್ಯ
-ಮಾದರಿ ಮೈಸೂರು ನಿರ್ಮಾಣದಲ್ಲಿ ಮೈಸೂರು ಮಾಹಾರಾಜರುಗಳ ಕೊಡುಗೆ 

ಮುಂತಾದ ಕಾರ್ಯಕ್ರಮಗಳು ನಡೆಯಲಿದ್ದು. ಯುವ ಸಮೂಹವು ಕೌತುಕದಿಂದ ಈ ಸಂಭ್ರಮದ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ.

andolanait

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

15 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

23 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

23 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

23 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

23 hours ago