ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದ ಈ ಸಾಲಿನಲ್ಲಿ ಯುವ ಸಂಭ್ರಮ ಕಾರ್ಯಕ್ರಮವು ಸೆ. 16 ರಿಂದ 24ರವರೆಗೆ ಒಟ್ಟು 9 ದಿನಗಳ ಕಾಲ ನಡೆಯಲಿದೆ. ಈ ಯುವ ದಸರಾ ಕಾರ್ಯಕ್ರಮವು ಮೈಸೂರಿನ ಮಾನಸ ಗಂಗೋತ್ರಿಯ ಬಯಲು ರಂಗ ಮಂದಿರದಲ್ಲಿ ಸಂಜೆ 5.30 ರಿಂದ ರಾತ್ರಿ 10-00 ರವರೆಗೆ ನಡೆಯಲಿದೆ.
ಉದ್ಘಾಟನೆ : ಕಾರ್ಯಕ್ರಮದ ಉದ್ಘಾಟನೆಯನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮಾಡಲಿದ್ದಾರೆ. ಅಧ್ಯಕ್ಷತೆಯನು ಚಾಮರಾಜ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಲ್ ನಾಗೇಂದ್ರ ಅವರು ವಹಿಸಲಿದ್ದಾರೆ.
ಮೆರಗು ತರಲಿದ್ದಾರೆ ಡಾಲಿ ಧನಂಜಯ
ಕನ್ನಡ ಚಿತ್ರರಂಗದ ಖ್ಯಾತ ನಟರಾದ ಡಾಲಿ ಧನಂಜಯ್ ಅವರು ಯುವ ದಸರಾ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಕಾರ್ಯಕ್ರಮಕ್ಕೆ ಮೆರಗು ತರಲಿದ್ದಾರೆ.
ಯುವ ಸಂಭ್ರಮದಲ್ಲಿ ಒಟ್ಟು 253 ಕಾಲೇಜಿಗಳ ತಂಡವು ಭಾಗವಹಿಸಲಿವೆ. ವಿವಿಧ ಕಾಲೇಜುಗಳ ಒಟ್ಟು 10500 ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಂದ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
ಯುವ ದಸರಾದಲ್ಲಿರುವ ವಿಷಯಧಾರಿತ ಕಾರ್ಯಕ್ರಮಗಳು ಇಂತಿವೆ
– ಅಜಾದಿಕಾ ಅಮೃತ್ ಮಹೋತ್ಸವ್ ( 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ)
-ಭಾರತ ಸಾತಂತ್ರ್ಯ ಚಳುವಳಿಗೆ ಕರ್ನಾಟಕದ ಕೊಡುಗೆ
-ಭಾರತ ಸ್ವಾತಂತ್ರ ಚಳುವಳಿ
-ರಾಷ್ಟ್ರೀಯ ಭಾವೈಕ್ಯತೆ ಮತ್ತು ಪಾರಂಪರಿಕ ಆಸ್ತಿಗಳ ಸಂರಕ್ಷಣೆ
-ಮಹಿಳಾ ಸಬಲೀಕರಣ ಮತ್ತು ಸಮಾನತೆ
-ಕನ್ನಡ ಮತ್ತು ಸಂಸ್ಕೃತಿ, ಜಾನಪದ ಕಲೆ
-ಪರಿಸರ ಸಂರಕ್ಷಣೆ, ಮತ್ತು ಮಾನವ ನಿರ್ಮಿತ ಆಪತ್ತುಗಳು
– ಸ್ವಚ್ಚ ಭಾರತ-ಸ್ವಚ್ಚ ಕರ್ನಾಟಕ, ಆರೋಗ್ಯ ಮತ್ತು ನೈರ್ಮಲ್ಯ
-ಮಾದರಿ ಮೈಸೂರು ನಿರ್ಮಾಣದಲ್ಲಿ ಮೈಸೂರು ಮಾಹಾರಾಜರುಗಳ ಕೊಡುಗೆ
ಮುಂತಾದ ಕಾರ್ಯಕ್ರಮಗಳು ನಡೆಯಲಿದ್ದು. ಯುವ ಸಮೂಹವು ಕೌತುಕದಿಂದ ಈ ಸಂಭ್ರಮದ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…