ಮೈಸೂರು : ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಗೆ ಮೂರನೇ ಹಂತದ ಹಾಗೂ ಅಂತಿಮ ಫಿರಂಗಿ ಸಿಡಿಸುವ ತಾಲೀಮು ನಡೆಯಿತು.
ವಸ್ತು ಪ್ರದರ್ಶನ ಆವರಣದ ವಾಹನ ನಿಲುಗಡೆ ಜಾಗದಲ್ಲಿ 13 ಆನೆಗಳು ಹಾಗೂ 35 ಕುದುರೆಗಳ ಸಮ್ಮುಖದಲ್ಲಿ ಶುಕ್ರವಾರ ಮಧ್ಯಾಹ್ನ ಮೂರನೇ ಹಂತದ ತಾಲೀಮು ನಡೆಸಲಾಯಿತು. ಏಳು ಫಿರಂಗಿ ಗಾಡಿಗಳಿಂದ ಸಿಎಆರ್ ಸಿಬ್ಬಂದಿಗಳು ಕುಶಾಲು ತೋಪು ಸಿಡಿಸಿದರು. ಒಟ್ಟು ಮೂರು ಸುತ್ತಿನಲ್ಲಿ 21 ಕುಶಾಲು ತೋಪು ಸಿಡಿಸಿ ತಾಲೀಮು ನಡೆಸಲಾಯಿತು. ಆನೆಗಳು ಹಾಗೂ ಕುದುರೆಗಳು ಶಬ್ದಕ್ಕೆ ಹೊಂದಿಕೊಂಡಂತೆ ಕಂಡುಬಂದಿದ್ದು, ಕುಶಾಲು ತೋಪು ಸಿಡಿಸಿದಾಗ ಬೆದರದೆ ನಿಂತಿದ್ದವು. ಈ ವೇಳೆ ಡಿಸಿಎಫ್ ಡಾ. ವಿ. ಕರಿಕಾಳನ್ ಮಾತನಾಡಿ, ಮೂರನೇ ಹಂತದ ಫಿರಂಗಿ ತಾಲೂಕು ಯಶಸ್ವಿಯಾಗಿ ನಡೆದಿದೆ. ವಿಶೇಷವೆಂದರೆ ಯಾವ ಆನೆಯ ಕಾಲಿಗೂ ಸರಪಳಿ ಕಟ್ಟಿರಲಿಲ್ಲ. ಮರಕ್ಕೆ ಕಟ್ಟಿ ಹಾಕಿರಲಿಲ್ಲ. ಆದರೂ ಆನೆಗಳು ಬೆಚ್ಚಲಿಲ್ಲ. ಹಾಗಾಗಿ ಜಂಬೂ ಸವಾರಿ ಯಶಸ್ವಿಯಾಗುವ ಭರವಸೆ ಇದೆ. ಆನೆಗಳು ಆರೋಗ್ಯವಾಗಿವೆ ತೂಕದಲ್ಲಿ 200 ರಿಂದ 400 ಕೆಜಿ ಹೆಚ್ಚಳವಾಗಿದೆ ಎಂದರು.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…