ಮೈಸೂರು : ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಗೆ ಮೂರನೇ ಹಂತದ ಹಾಗೂ ಅಂತಿಮ ಫಿರಂಗಿ ಸಿಡಿಸುವ ತಾಲೀಮು ನಡೆಯಿತು.
ವಸ್ತು ಪ್ರದರ್ಶನ ಆವರಣದ ವಾಹನ ನಿಲುಗಡೆ ಜಾಗದಲ್ಲಿ 13 ಆನೆಗಳು ಹಾಗೂ 35 ಕುದುರೆಗಳ ಸಮ್ಮುಖದಲ್ಲಿ ಶುಕ್ರವಾರ ಮಧ್ಯಾಹ್ನ ಮೂರನೇ ಹಂತದ ತಾಲೀಮು ನಡೆಸಲಾಯಿತು. ಏಳು ಫಿರಂಗಿ ಗಾಡಿಗಳಿಂದ ಸಿಎಆರ್ ಸಿಬ್ಬಂದಿಗಳು ಕುಶಾಲು ತೋಪು ಸಿಡಿಸಿದರು. ಒಟ್ಟು ಮೂರು ಸುತ್ತಿನಲ್ಲಿ 21 ಕುಶಾಲು ತೋಪು ಸಿಡಿಸಿ ತಾಲೀಮು ನಡೆಸಲಾಯಿತು. ಆನೆಗಳು ಹಾಗೂ ಕುದುರೆಗಳು ಶಬ್ದಕ್ಕೆ ಹೊಂದಿಕೊಂಡಂತೆ ಕಂಡುಬಂದಿದ್ದು, ಕುಶಾಲು ತೋಪು ಸಿಡಿಸಿದಾಗ ಬೆದರದೆ ನಿಂತಿದ್ದವು. ಈ ವೇಳೆ ಡಿಸಿಎಫ್ ಡಾ. ವಿ. ಕರಿಕಾಳನ್ ಮಾತನಾಡಿ, ಮೂರನೇ ಹಂತದ ಫಿರಂಗಿ ತಾಲೂಕು ಯಶಸ್ವಿಯಾಗಿ ನಡೆದಿದೆ. ವಿಶೇಷವೆಂದರೆ ಯಾವ ಆನೆಯ ಕಾಲಿಗೂ ಸರಪಳಿ ಕಟ್ಟಿರಲಿಲ್ಲ. ಮರಕ್ಕೆ ಕಟ್ಟಿ ಹಾಕಿರಲಿಲ್ಲ. ಆದರೂ ಆನೆಗಳು ಬೆಚ್ಚಲಿಲ್ಲ. ಹಾಗಾಗಿ ಜಂಬೂ ಸವಾರಿ ಯಶಸ್ವಿಯಾಗುವ ಭರವಸೆ ಇದೆ. ಆನೆಗಳು ಆರೋಗ್ಯವಾಗಿವೆ ತೂಕದಲ್ಲಿ 200 ರಿಂದ 400 ಕೆಜಿ ಹೆಚ್ಚಳವಾಗಿದೆ ಎಂದರು.
ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…
ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…