ಮೈಸೂರು : ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಗೆ ಮೂರನೇ ಹಂತದ ಹಾಗೂ ಅಂತಿಮ ಫಿರಂಗಿ ಸಿಡಿಸುವ ತಾಲೀಮು ನಡೆಯಿತು.
ವಸ್ತು ಪ್ರದರ್ಶನ ಆವರಣದ ವಾಹನ ನಿಲುಗಡೆ ಜಾಗದಲ್ಲಿ 13 ಆನೆಗಳು ಹಾಗೂ 35 ಕುದುರೆಗಳ ಸಮ್ಮುಖದಲ್ಲಿ ಶುಕ್ರವಾರ ಮಧ್ಯಾಹ್ನ ಮೂರನೇ ಹಂತದ ತಾಲೀಮು ನಡೆಸಲಾಯಿತು. ಏಳು ಫಿರಂಗಿ ಗಾಡಿಗಳಿಂದ ಸಿಎಆರ್ ಸಿಬ್ಬಂದಿಗಳು ಕುಶಾಲು ತೋಪು ಸಿಡಿಸಿದರು. ಒಟ್ಟು ಮೂರು ಸುತ್ತಿನಲ್ಲಿ 21 ಕುಶಾಲು ತೋಪು ಸಿಡಿಸಿ ತಾಲೀಮು ನಡೆಸಲಾಯಿತು. ಆನೆಗಳು ಹಾಗೂ ಕುದುರೆಗಳು ಶಬ್ದಕ್ಕೆ ಹೊಂದಿಕೊಂಡಂತೆ ಕಂಡುಬಂದಿದ್ದು, ಕುಶಾಲು ತೋಪು ಸಿಡಿಸಿದಾಗ ಬೆದರದೆ ನಿಂತಿದ್ದವು. ಈ ವೇಳೆ ಡಿಸಿಎಫ್ ಡಾ. ವಿ. ಕರಿಕಾಳನ್ ಮಾತನಾಡಿ, ಮೂರನೇ ಹಂತದ ಫಿರಂಗಿ ತಾಲೂಕು ಯಶಸ್ವಿಯಾಗಿ ನಡೆದಿದೆ. ವಿಶೇಷವೆಂದರೆ ಯಾವ ಆನೆಯ ಕಾಲಿಗೂ ಸರಪಳಿ ಕಟ್ಟಿರಲಿಲ್ಲ. ಮರಕ್ಕೆ ಕಟ್ಟಿ ಹಾಕಿರಲಿಲ್ಲ. ಆದರೂ ಆನೆಗಳು ಬೆಚ್ಚಲಿಲ್ಲ. ಹಾಗಾಗಿ ಜಂಬೂ ಸವಾರಿ ಯಶಸ್ವಿಯಾಗುವ ಭರವಸೆ ಇದೆ. ಆನೆಗಳು ಆರೋಗ್ಯವಾಗಿವೆ ತೂಕದಲ್ಲಿ 200 ರಿಂದ 400 ಕೆಜಿ ಹೆಚ್ಚಳವಾಗಿದೆ ಎಂದರು.
ಬಿಡದಿ : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಗದ್ದಲ–ಗಲಾಟೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಸರ್ಕಾರದ ನಿರ್ಧಾರಕ್ಕೆ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದು, ಜಮೀನು…
ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…
ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್ನಿಂದ ನೋಟಿಸ್…
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…