ಜಿಲ್ಲೆಗಳು

ಮೈಸೂರು : 2ನೇ ತಂಡದ ದಸರಾ ಗಜಪಡೆಗಳಿಗೆ ತೂಕ ಹಾಕುವ ಪ್ರಕ್ರಿಯೆ ಯಶಸ್ವಿ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಎರಡನೇ ತಂಡದ ಆನೆಗಳಿಗೆ ಇಂದು ತೂಕ ಹಾಕುವ ಪ್ರಕ್ರಿಯೆ ನಡೆದಿದ್ದು, ಮೊದಲ ತಂಡದಲ್ಲಿ ಆಗಮಿಸಿದ ಆನೆಗಳ ತೂಕವು ನಡೆಯಿತು.

 

ದಸರಾ ಗಜಪಡೆಗಳ ತೂಕ ಪ್ರಕ್ರಿಯೆಯು ಮೈಸೂರಿನ ಧನ್ವಂತ್ರಿಯಲ್ಲಿನ ವೇ ಬ್ರಿಡ್ಜ್ ನಲ್ಲಿ ಅಂದರೆ ಲಾರಿಗಳಿಗೆ ತೂಕ ಹಾಕುವ  ವೇವ್ ಬ್ರಿಡ್ಜ್ ನಲ್ಲಿ ನಡೆದಿದ್ದು, ಈ ಬಾರಿಯೂ ಅರ್ಜನನೇ ಬಲಶಾಲಿ ಅಂತ ನಿರೂಪಿಸಿದ್ದಾನೆ. ತೂಕದಲ್ಲಿ ಅರ್ಜುನನೇ ಬಲಶಾಲಿಯಾಗಿದ್ದು, ಬರೋಬ್ಬರಿ 5885 ಕೆ.ಜಿ ತೂಕ ಹೊಂದಿದ್ದಾನೆ. ದಸರಾ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು 5000, ಚೈತ್ರ 3235, ಭೀಮಾ 4345, ಗೋಪಾಲಸ್ವಾಮಿ 5460, ಮಹೇಂದ್ರ 4450, ವಿಜಯ 2760, ಗೋಪಿ 4670, ಧನಂಜಯ 4890, ಶ್ರೀರಾಮ 4475, ಲಕ್ಷ್ಮೀ 3150, ಸುಗ್ರೀವ 4785, ಕಾವೇರಿ 3245 ಇನ್ನೂ ಈ ಗಜಪಡೆಯಲ್ಲಿ ಕಿರಿಯವನಾಗಿರುವ ಪಾರ್ಥಸಾರಥಿ 3445 ಕೆಜಿ ತೂಕವನ್ನು ಹೊಂದಿದ್ದಾರೆ.

ಡಿಸಿಎಫ್ ಡಾ.ವಿ. ಕರಿಕಾಳನ್ ಮಾತನಾಡಿ, ಈ ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಿರುವ ಮೊದಲು ಮತ್ತು ಎರಡನೇ ತಂಡದ ಆನೆಗಳು ಒಟ್ಟು ಸೇರಿ 14 ಆನೆಗಳನ್ನು ನಾವು ತೂಕ ಮಾಡಿದ್ದೇವೆ, ಎರಡನೇ ತಂಡದ ಎಲ್ಲ ಗಂಡಾನೆಗಳೂ 4000 ದಿಂದ 4600 ಸಾವಿರ ಕೆಜಿ ವರೆಗೂ ಇದ್ದು, ಕಿರಿಯ ವಯಸ್ಸಿನ ಆನೆಯಾಗಿರುವ ಪಾರ್ಥಸಾರಥಿ ಆನೆ 3445 ತೂಕ ಹೊಂದಿದೆ, ಮೊದಲನೇ ತಂಡದ ಎಲ್ಲ ಆನೆಗಳ ತೂಕದಲ್ಲಿ ಹೆಚ್ಚಾಗಿದ್ದು, ನಮ್ಮ ತಾಲೀಮುಗಳಿಗೂ ಕೂಡ ತುಂಬ ಚೆನ್ನಾಗಿ ಸಹಕರಿಸುತ್ತಿವೆ ಎಂದು ತಿಳಿಸಿದರು.


ಈ ದಿನ ಮೊದಲನೇ ಬಾರಿಗೆ ಎಲ್ಲ 14 ಆನೆಗಳನ್ನು ತೂಕ ಮಾಡುವ ಸಲುವಾಗಿ ಅರಮನೆಯಿಂದ ಹೊರ ಕರೆತಂದಿದ್ದು, ಶ್ರೀರಾಮ ಮತ್ತು ಪಾರ್ಥಸಾರಥಿ ಆನೆಗಳು ಮೊದಲನೇ ತಂಡದ ಆನೆಗಳ ಜೊತೆ ಸೇರಿ ನಿನ್ನೆಯಿಂದಲೇ ತಾಲೀಮಿನಲ್ಲಿ ಭಾಗವಹಿಸಿವೆ. ಸೆ.12 ರಿಂದ ಎಲ್ಲ ಆನೆಗಳು ತಾಲೀಮಿನಲ್ಲಿ ಭಾಗವಹಿಸಲಿವೆ ಎಂದು ತಿಳಿಸಿದರು.

andolanait

Recent Posts

ಹೊಸವರ್ಷ : ಪೊಲೀಸರ ಕಾರ್ಯ ಶ್ಲಾಘಿಸಿದ ಸಿಎಂ

ಬೆಂಗಳೂರು : 2026ರ ಹೊಸವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಯಾವುದೆ ಅಹಿತಕರ ಘಟನೆ ನಡೆಯದೆ ಸುರಕ್ಷಿತವಾಗಿ ಹೊಸ ವರ್ಷಕ್ಕೆ ಕಾಲಿಟ್ಟಿದ್ದೇವೆ.…

55 mins ago

ಐಪಿಲ್‌ನಲ್ಲಿ ಬಾಂಗ್ಲಾ ಆಟಗಾರ : ಶಾರುಖ್‌ ಒಡೆತನದ ಕೆಕೆಆರ್‌ ವಿರುದ್ಧ ಬಿಜೆಪಿ ವಾಗ್ದಾಳಿ

ಮುಂಬೈ :  ಐಪಿಎಲ್‌ ತಂಡವಾದ ಕೋಲ್ಕತ್ತಾ ನೈಟ್ ರೈಡರ್ಸ್ ( ಕೆಕೆಆರ್) ತಂಡಕ್ಕೆ ನೆರೆಯ ಬಾಂಗ್ಲಾದೇಶದ ಆಟಗಾರನನ್ನು ಖರೀದಿಸಿರುವ ಬಾಲಿವುಡ್…

2 hours ago

ಮರ್ಯಾದೆಗೇಡು ಹತ್ಯೆ | ಮಾನ್ಯ ಹೆಸರಲ್ಲಿ ಕಾಯ್ದೆಗೆ ಚಿಂತನೆ ; ಸಚಿವ ಮಹದೇವಪ್ಪ

ಹುಬ್ಬಳ್ಳಿ : ಮರ್ಯಾದೆಗೇಡು ಹತ್ಯೆ ಅಂತಹ ಘಟನೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ಜಾರಿಗೊಳಿಸುವ ಬಗ್ಗೆ ಗಂಭೀರ ಚಿಂತನೆ…

2 hours ago

ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳ ತನಿಖೆ ಬಳಿಕ ಪುನರ್ವಸತಿ ಕಲ್ಪಿಸಿ: ಯತ್ನಾಳ್‌ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳು ಯಾರು ಅಂತ ತನಿಖೆ ಮಾಡಿ, ಬಳಿಕ ಪುನರ್‌ ವಸತಿ ಕಲ್ಪಿಸಬೇಕು ಎಂದು ಶಾಸಕ…

3 hours ago

ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಭೀಕರ ಸ್ಫೋಟ: 40 ಮಂದಿ ಸಾವು

ಸ್ವಿಟ್ಜರ್ಲೆಂಡ್‌: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.…

3 hours ago

ಹೊಸ ವರ್ಷಕ್ಕೆ ಮೆಟ್ರೋ ಧಮಾಕಾ: ಒಂದೇ ದಿನ 3.08 ಕೋಟಿ ಆದಾಯ

ಬೆಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಒಂದೇ ದಿನ 8.93 ಲಕ್ಷ ಜನರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು, 3.08 ಕೋಟಿ ರೂ…

3 hours ago