ಜಿಲ್ಲೆಗಳು

ಮೈಸೂರು : 2ನೇ ತಂಡದ ದಸರಾ ಗಜಪಡೆಗಳಿಗೆ ತೂಕ ಹಾಕುವ ಪ್ರಕ್ರಿಯೆ ಯಶಸ್ವಿ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಎರಡನೇ ತಂಡದ ಆನೆಗಳಿಗೆ ಇಂದು ತೂಕ ಹಾಕುವ ಪ್ರಕ್ರಿಯೆ ನಡೆದಿದ್ದು, ಮೊದಲ ತಂಡದಲ್ಲಿ ಆಗಮಿಸಿದ ಆನೆಗಳ ತೂಕವು ನಡೆಯಿತು.

 

ದಸರಾ ಗಜಪಡೆಗಳ ತೂಕ ಪ್ರಕ್ರಿಯೆಯು ಮೈಸೂರಿನ ಧನ್ವಂತ್ರಿಯಲ್ಲಿನ ವೇ ಬ್ರಿಡ್ಜ್ ನಲ್ಲಿ ಅಂದರೆ ಲಾರಿಗಳಿಗೆ ತೂಕ ಹಾಕುವ  ವೇವ್ ಬ್ರಿಡ್ಜ್ ನಲ್ಲಿ ನಡೆದಿದ್ದು, ಈ ಬಾರಿಯೂ ಅರ್ಜನನೇ ಬಲಶಾಲಿ ಅಂತ ನಿರೂಪಿಸಿದ್ದಾನೆ. ತೂಕದಲ್ಲಿ ಅರ್ಜುನನೇ ಬಲಶಾಲಿಯಾಗಿದ್ದು, ಬರೋಬ್ಬರಿ 5885 ಕೆ.ಜಿ ತೂಕ ಹೊಂದಿದ್ದಾನೆ. ದಸರಾ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು 5000, ಚೈತ್ರ 3235, ಭೀಮಾ 4345, ಗೋಪಾಲಸ್ವಾಮಿ 5460, ಮಹೇಂದ್ರ 4450, ವಿಜಯ 2760, ಗೋಪಿ 4670, ಧನಂಜಯ 4890, ಶ್ರೀರಾಮ 4475, ಲಕ್ಷ್ಮೀ 3150, ಸುಗ್ರೀವ 4785, ಕಾವೇರಿ 3245 ಇನ್ನೂ ಈ ಗಜಪಡೆಯಲ್ಲಿ ಕಿರಿಯವನಾಗಿರುವ ಪಾರ್ಥಸಾರಥಿ 3445 ಕೆಜಿ ತೂಕವನ್ನು ಹೊಂದಿದ್ದಾರೆ.

ಡಿಸಿಎಫ್ ಡಾ.ವಿ. ಕರಿಕಾಳನ್ ಮಾತನಾಡಿ, ಈ ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಿರುವ ಮೊದಲು ಮತ್ತು ಎರಡನೇ ತಂಡದ ಆನೆಗಳು ಒಟ್ಟು ಸೇರಿ 14 ಆನೆಗಳನ್ನು ನಾವು ತೂಕ ಮಾಡಿದ್ದೇವೆ, ಎರಡನೇ ತಂಡದ ಎಲ್ಲ ಗಂಡಾನೆಗಳೂ 4000 ದಿಂದ 4600 ಸಾವಿರ ಕೆಜಿ ವರೆಗೂ ಇದ್ದು, ಕಿರಿಯ ವಯಸ್ಸಿನ ಆನೆಯಾಗಿರುವ ಪಾರ್ಥಸಾರಥಿ ಆನೆ 3445 ತೂಕ ಹೊಂದಿದೆ, ಮೊದಲನೇ ತಂಡದ ಎಲ್ಲ ಆನೆಗಳ ತೂಕದಲ್ಲಿ ಹೆಚ್ಚಾಗಿದ್ದು, ನಮ್ಮ ತಾಲೀಮುಗಳಿಗೂ ಕೂಡ ತುಂಬ ಚೆನ್ನಾಗಿ ಸಹಕರಿಸುತ್ತಿವೆ ಎಂದು ತಿಳಿಸಿದರು.


ಈ ದಿನ ಮೊದಲನೇ ಬಾರಿಗೆ ಎಲ್ಲ 14 ಆನೆಗಳನ್ನು ತೂಕ ಮಾಡುವ ಸಲುವಾಗಿ ಅರಮನೆಯಿಂದ ಹೊರ ಕರೆತಂದಿದ್ದು, ಶ್ರೀರಾಮ ಮತ್ತು ಪಾರ್ಥಸಾರಥಿ ಆನೆಗಳು ಮೊದಲನೇ ತಂಡದ ಆನೆಗಳ ಜೊತೆ ಸೇರಿ ನಿನ್ನೆಯಿಂದಲೇ ತಾಲೀಮಿನಲ್ಲಿ ಭಾಗವಹಿಸಿವೆ. ಸೆ.12 ರಿಂದ ಎಲ್ಲ ಆನೆಗಳು ತಾಲೀಮಿನಲ್ಲಿ ಭಾಗವಹಿಸಲಿವೆ ಎಂದು ತಿಳಿಸಿದರು.

andolanait

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

9 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

10 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

10 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

11 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

11 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

12 hours ago