ಜಿಲ್ಲೆಗಳು

ಮೈಸೂರು ದಸರಾ : ಮನೆಗಳಲ್ಲಿ ದಸರಾ ಗೊಂಬೆ ಕೂರಿಸುವ ಸ್ಪರ್ಧೆ, 3ನಿಮಿಷದ ವಿಡಿಯೋ ಮಾಡಿ ಈ ನಂಬರ್‌ಗೆ ಕಳುಹಿಸಿ!

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2022 ರ ಅಂಗವಾಗಿ ಕೆ ಎಂ ಪ್ರವೀಣ್ ಕುಮಾರ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಮನೆ ಮನೆಗಳಲ್ಲಿ ದಸರಾ ಗೊಂಬೆ ಕೂರಿಸುವ ಸ್ಪರ್ಧೆಯನ್ನು ಆಯೋಜಿಸಿದ್ದು, ಈ ಸಂಬಂಧವಾಗಿ ಇಂದು ಪ್ರಚಾರ ಸಾಮಗ್ರಿಗಳನ್ನು  ಶಾಸಕ ಎಲ್‌. ನಾಗೇಂದ್ರ ಅವರು ಬಿ ಎನ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ನಲ್ಲಿ
ಬಿಡುಗಡೆ ಮಾಡಿದರು.

ಬಿಡುಗಡೆ ಮಾಡಿ ಮಾತನಾಡಿದ ಅವರು ಮನೆಮನೆಗಳಲ್ಲಿ ಗೊಂಬೆ ಕೂರಿಸುವುದರಿಂದ ಗೃಹಿಣಿಯರು ನಮ್ಮ ಪರಂಪರೆಯನ್ನು ಉಳಿಸಿ ಬೆಳೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಸಂಸ್ಕೃತಿಯ ಮತ್ತು ನಮ್ಮ ಪರಂಪರೆಯ ಉಳಿವಿಗಾಗಿ ಹೋರಾಡುವ ಸಂದರ್ಭ ಎದುರಾಗಿದೆ ಪ್ರತಿಯೊಬ್ಬರು ಅದಕ್ಕಾಗಿ ಶ್ರಮಿಸಬೇಕು.ನಮ್ಮ ಸಂಪ್ರದಾಯ ಮತ್ತು ಧಾರ್ಮಿಕತೆಯ ರಕ್ಷಣೆಗಾಗಿ ಪ್ರತಿಯೊಬ್ಬ ಹಿಂದುಗಳು ಒಗ್ಗಟ್ಟಾಗಿ ಕಲೆತು ಮುಂದಿನ ಪೀಳಿಗೆಗೆ ಸಂರಕ್ಷಿಸಬೇಕು ಎಂದು ಕರೆ ನೀಡಿದರು.
ಮುಂದುವರಿದು, ನವರಾತ್ರಿಯು ಮೈಸೂರು ಪರಂಪರೆಯಲ್ಲಿ ಅತ್ಯಂತ ಪವಿತ್ರವಾದದ್ದು ದಸರಾ ಗೊಂಬೆ ಪ್ರದರ್ಶನಕ್ಕೆ ಅತ್ಯಂತ ಮಹತ್ವವಿದೆ .ಪಟ್ಟದ ಗೊಂಬೆಗಳನ್ನು ಲಕ್ಷ್ಮಿನಾರಾಯಣ ಸ್ವರೂಪದಲ್ಲಿ ಪೂಜಿಸಿ ಪುರಾಣ ಪುಣ್ಯಕಥೆಗಳನ್ನು ಗೊಂಬೆಗಳ ಮೂಲಕ ರೂಪಕವಾಗಿ ಪ್ರಚುರಪಡಿಸಿ ಅದನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದೇ ಇದರ ಮೂಲ ಉದ್ದೇಶ .ಮೈಸೂರಿನ ಮನೆಮನೆಗಳಲ್ಲಿ ಕೂರಿಸುವುದರಿಂದ ಗೃಹಿಣಿಯರು ನಮ್ಮ ಪರಂಪರೆಯನ್ನು ಉಳಿಸಿ ಬೆಳೆಸುತ್ತಿದ್ದಾರೆ ಎಂದರು.
ನಂತರ ಮಾತನಾಡಿದ ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್ ಅವರು ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ನೋಂದಣಿ ಶುಲ್ಕ 200 ರೂ ಇರುತ್ತದೆ. ದಸರಾ ಗೊಂಬೆ ಸ್ಪರ್ಧೆಯು ಸಂಸ್ಕೃತಿ ಇತಿಹಾಸ ಸಾರುವ ಹಾಗೂ ಐತಿಹಾಸಿಕ ಹಿನ್ನಲೆ ಒಳಗೊಂಡಂತೆ ಗೊಂಬೆಗಳನ್ನು ಕೂರಿಸಿದವರಿಗೆ ಮೊದಲನೇ ಬಹುಮಾನ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನಲ್ಲೇ 2000 ರೂ ನಗದು ಹಾಗೂ ಪಾರಿತೋಷಕ ಹಾಗೂ ಪ್ರಮಾಣಪತ್ರ ನೀಡಲಾಗುವುದು, ಎರಡನೇ ಬಹುಮಾನ 1000 ರೂ ನಗದು ಪಾರಿತೋಷಕ ಹಾಗೂ ಪ್ರಮಾಣಪತ್ರ,ಮೂರನೇ ಬಹುಮಾನ 500ರೂ ನಗದು
ಪಾರಿತೋಷಕ ಹಾಗೂ 10 ಸ್ಪರ್ಧಿಗಳಿಗೆ ಸಮಾಧಾನಕರ ಬಹುಮಾನ ಹಾಗೂ ಪ್ರಮಾಣಪತ್ರನೀಡಲಾಗುವುದು ಸ್ಪರ್ಧೆಯಲ್ಲಿ ಸ್ಪರ್ಧಿಸಿದ ಎಲ್ಲಾ ಸ್ಪರ್ಧಾಳುಗಳಿಗೆ ಪ್ರಮಾಣ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಲಾಗುವುದು ಎಂದರು.

ಕಡೆಯ ದಿನಾಂಕ 5/10/2022 ರ ಒಳಗೆ 9880752727ಈ ದೂರವಾಣಿ ಸಂಖ್ಯೆಗೆ ವಾಟ್ಸ್ ಆ್ಯಪ್ ಮೂಲಕ ಗೊಂಬೆ ಜೋಡಣೆ ಮಾಡಿರುವ ಚಿತ್ರ ಹಾಗೂ 3ನಿಮಿಷದ ವೀಡಿಯೊವನ್ನು ಕಲಿಸಿಕೊಡಬೇಕು ಆನಂತರ ನುರಿತ ತೀರ್ಪುಗಾರರು ಅವರ ನಿವಾಸಕ್ಕೆ ತೆರಳಿ ವೀಕ್ಷಿಸಿ ಸಂಸ್ಕೃತಿ ಇತಿಹಾಸ ಸಾರುವ ಹಾಗೂ ಐತಿಹಾಸಿಕ ಹಿನ್ನಲೆ ಒಳಗೊಂಡ ಅದ್ಭುತವಾಗಿ ಗೊಂಬೆ ಜೋಡಣೆ ಮಾಡಿದಂತಹ ಸ್ಪರ್ಧಿಗಳನ್ನು ಆಯ್ಕೆ ಮಾಡುತ್ತಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ,ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್ ,ಉಪಾಧ್ಯಕ್ಷರಾದ ಎಸ್ ಎನ್ ರಾಜೇಶ್ ,ಮೈಸೂರು ಮಹಾನಗರ ಪಾಲಿಕೆ ಉಪಾಯುಕ್ತರು ಅಭಿವೃದ್ಧಿ ಮಹೇಶ್ ,ಕಾರ್ಯಪಾಲಕ ಅಭಿಯಂತರುರಜಿತ್ ಕುಮಾರ್,ಅಭಿವೃದ್ಧಿ ಅಧಿಕಾರಿ ಮಂಜುನಾಥ ,ಹಾಗೂ ಇನ್ನಿತರರು ಹಾಜರಿದ್ದರು.

andolanait

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

10 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

27 mins ago

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

11 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

11 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

12 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

12 hours ago